ಬೆಂಗಳೂರು: ರಾಜ್ಯವನ್ನು (State) ಸಾಲದ (Debt) ಸುಳಿಗೆ ಸಿಲುಕದಂತೆ ನಾವು ಎಲ್ಲಾ ಗ್ಯಾರೆಂಟಿಗಳನ್ನು (Guarantee) ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ. ನಾವು ಬಜೆಟ್ (Budget) ಮಂಡನೆ ಮಾಡಲಿದ್ದೇವೆ. ಗೃಹಜ್ಯೋತಿ ಪ್ರತಿಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ಜಾರಿ ಮಾಡುತ್ತೇವೆ. ಗೃಹಲಕ್ಷ್ಮೀ ಮನೆಯೊಡತಿಗೆ ಮಾಸಿಕ ₹2 ಸಾವಿರ ರೂಪಾಯಿ ಜಾರಿ ಮಾಡುತ್ತೇವೆ. ಅನ್ನಭಾಗ್ಯ ಯೋಜನೆ ಅಡಿ 10 ಕೆಜಿ ಅಕ್ಕಿ ನೀಡುತ್ತೇವೆ.
ಈ ವರ್ಷ ಪದವಿ ಶಿಕ್ಷಣ ಪೂರೈಸಿದ ಯುವ ಜನತೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಹಣವನ್ನು 2 ವರ್ಷಗಳ ಕಾಲ ನೀಡುತ್ತೇವೆ. ಸರ್ಕಾರಿ ಬಸ್ನಲ್ಲಿ ಪ್ರಯಾಣ ಮಾಡುವ ಮಹಿಳೆಯರಿಗೆ ಉಚಿತ ಪಾಸ್ ನೀಡುತ್ತೇವೆ. ಕರ್ನಾಟಕದವರಿಗೆ ಮಾತ್ರ ಯೋಜನೆ ಜಾರಿ ಆಗಲಿದೆ. ಈ ಬಗ್ಗೆ ಆದೇಶವನ್ನು ಹೊರಡಿಸಲು ಹೇಳಿದ್ದೇವೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಮುಂದಿನ ವಾರದಲ್ಲೇ ಕ್ಯಾಬಿನೆಟ್ ಸಭೆ ನಡೆಸುತ್ತೇವೆ. ಈ ಎಲ್ಲಾ ಯೋಜನೆಗಳನ್ನು ಜಾರಿ ಮಾಡಿ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ತಿಳಿಸಿದರು.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮ್ಯಯ ಅವರು, ನಾವು ಇವತ್ತು ಡಿಕೆ ಶಿವಕುಮಾರ್ ಡಿಸಿಎಂ ಆಗಿ ಹಾಗೂ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ತೆಗೆದುಕೊಂಡಿದ್ದೇವೆ. ನಾಡಿನ ಜನತೆಗೆ ಮತದಾರರಿಗೆ ಧನ್ಯವಾದ ತಿಳಿಸುವ ಕಾರ್ಯಕ್ರಮ ಮಾಡಿದ್ದೇವೆ. ರಾಷ್ಟ್ರದ ಬೇರೆ ಬೇರೆ ರಾಜ್ಯದ ಎಲ್ಲಾ ಬಿಜೆಪಿಯೇತರ ಪಾರ್ಟಿಯ ಅಧ್ಯಕ್ಷರು ಗಳು ಬಂದಿದ್ದರು. ಅವರು ಬಂದು ಹೊಸ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಖರ್ಗೆ, ವೇಣುಗೋಪಾಲ್ ಸೇರಿ ಹಲವರು ಬಂದು ಶುಭ ಕೋರಿದ್ದಾರೆ ಎಂದು ಸಿಎಂ ಸಿದ್ದರಾಮ್ಯಯ ತಿಳಿಸಿದ್ದಾರೆ.
ನಾವು ಪಕ್ಷದ ಪ್ರಣಾಳಿಕೆಯಲ್ಲಿ ಹಲವು ಯೋಜನೆಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದೇವೆ. ಆದರೆ ಎಲ್ಲಾ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸಲು ಆಗಲ್ಲ. 5 ಗ್ಯಾರೆಂಟಿ ಯೋಜನೆಗಳನ್ನು ಮೊದಲ ಕ್ಯಾಬಿನೆಟ್ನಲ್ಲೇ ಜಾರಿ ಮಾಡುತ್ತೇವೆ ಹೇಳಿದ್ದೇವು. ಜನರಿಗೆ ನಮ್ಮ ಮೇಲೆ ವಿಶ್ವಾಸವಿದೆ, ಆದರೆ ವಿರೋಧ ಪಕ್ಷದವರು ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ.
ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ, 165. ಭರವಸೆ ಗಳಲ್ಲಿ 158 ಭರವಸೆ ಗಳನ್ನು ಹಿಂದೆ ಈಡೇರಿಸಿದ್ವಿ, ನಾವು ಹಿಂದೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಭರವಸೆಗಳಲ್ಲದೇ ಇನ್ನೂ 30 ಯೋಜನೆ ಗಳನ್ನು ಜಾರಿ ಮಾಡಿದ್ದೇವು. ಸದ್ಯ 15ನೇ ಹಣಕಾಸು ಆಯೋಗದಲ್ಲಿ 1 ಲಕ್ಷ ಕೋಟಿ ರೂಪಾಯಿ ಬರಬೇಕಿತ್ತು, ಆದರೆ ಹಿಂದಿನ ಸರ್ಕಾರದ ತಪ್ಪಿನಿಂದ 50 ಸಾವಿರ ಸಾವಿರ ಕೋಟಿ ಮಾತ್ರ ಬರಲಿದೆ ಎಂದು ಆರೋಪಿಸಿದರು.
ಕೆಲವು ಇಲಾಖೆಗಳಲ್ಲಿ ತೆರಿಗೆ ಹೆಚ್ಚಾಗಿ ಮಾಡದೆ ಇದ್ದರು ಕೂಡ, ಟಾರ್ಗೆಟ್ ಹೆಚ್ಚು ಮಾಡಲು ಸಾಧ್ಯವಾಗುತ್ತದೆ. ಕೇಂದ್ರದಿಂದ ನಮಗೆ ಅನ್ಯಾಯವಾಗಿದೆ. ಜಿಎಸ್ಟಿ ಸೇರಿ 4 ಲಕ್ಷ ಕೋಟಿ ರೂಪಾಯಿ ಪಾವತಿ ಮಾಡುತ್ತೇವೆ. ಆದರೆ ನಮ್ಮ ಪಾಲನ್ನು ನಮಗೆ ನ್ಯಾಯಯುವಾಗಿ ನಮಗೆ ಕೊಟ್ಟಿಲ್ಲ. ನಮ್ಮ ಪಾಲು ಕೊಡುವುದರಲ್ಲಿ ನಮಗೆ ಅನ್ಯಾಯವಾಗಿದೆ. ಬೊಮ್ಮಾಯಿ ಜಿಎಸ್ಟಿ ಕೌನ್ಸಿಲ್ ಮೆಂಬರ್ ಆಗಿದ್ದರೂ ಕೇಳಲಿಲ್ಲ ಎಂದು ಸಿದ್ದರಾಮಯ್ಯ ವಿವರಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ