ಬೆಂಗಳೂರು(ಮೇ 03): ಚಾಮರಾಜನಗರ ಆಕ್ಸಿಜನ್ ದುರಂತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದು ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಆಕ್ಸಿಜನ್ ಕೊರತೆಯಿಂದಾಗಿ 24 ಜನರು ಉಸಿರು ಚೆಲ್ಲಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷಗಳು ಬೆರಳು ಮಾಡಿ ತೋರಿಸುತ್ತಿವೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ಈ ಘಟನೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಕೂಡ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಈ ದುರಂತ ಕುರಿತು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಟ್ವೀಟ್ ಮಾಡಿರುವ ಅವರು, ಆಕ್ಸಿಜನ್ ಪೂರೈಕೆಯಾಗದೇ ಚಾಮರಾಜನಗರದಲ್ಲಿ ಒಂದೇ ದಿನ 24 ಜನ ಸಾವಿಗೀಡಾಗಿರುವುದು ಅತ್ಯಂತ ದೊಡ್ಡ ದುರಂತ. ಆಕ್ಸಿಜನ್ ಪೂರೈಸದ ರಾಜ್ಯ ಸರ್ಕಾರ ಈ ಸಾವಿನ ನೇರ ಹೊಣೆ ಹೊರಬೇಕು. ಜನ ಬೀದಿ ಬೀದಿಯಲ್ಲಿ ಸಾಯುತ್ತಿದ್ದರೂ ಈ ಸರ್ಕಾರ ಕರುಣೆ ಇಲ್ಲದಂತೆ ವರ್ತಿಸುತ್ತಿದೆ. ಇಂತಹ ಹೃದಯಹೀನ ಸರ್ಕಾರ ರಾಜ್ಯಕ್ಕೆ ಬೇಕೆ? ಎಂದು ಪ್ರಶ್ನಿಸಿದ್ದಾರೆ.
Chamarajanagar Oxygen Crisis: ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಯಡಿಯೂರಪ್ಪ; ಮಹತ್ವದ ನಿರ್ಧಾರ ಸಾಧ್ಯತೆ
1
ಆಕ್ಸಿಜನ್ ಪೂರೈಕೆಯಾಗದೇ ಚಾಮರಾಜನಗರದಲ್ಲಿ ಒಂದೇ ದಿನ 24 ಜನ ಸಾವಿಗೀಡಾಗಿರುವುದು ಅತ್ಯಂತ ದೊಡ್ಡ ದುರಂತ.
ಆಕ್ಸಿಜನ್ ಪೂರೈಸದ ರಾಜ್ಯ ಸರ್ಕಾರ ಈ ಸಾವಿನ ನೇರ ಹೊಣೆ ಹೊರಬೇಕು.
ಜನ ಬೀದಿ ಬೀದಿಯಲ್ಲಿ ಸಾಯುತ್ತಿದ್ದರೂ ಈ ಸರ್ಕಾರ ಕರುಣೆ ಇಲ್ಲದಂತೆ ವರ್ತಿಸುತ್ತಿದೆ.
ಇಂತಹ ಹೃದಯಹೀನ ಸರ್ಕಾರ ರಾಜ್ಯಕ್ಕೆ ಬೇಕೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 3, 2021
2
ಪ್ರತಿ ಜಿಲ್ಲಾಸ್ಪತ್ರೆಗೂ ಆಕ್ಸಿಜನ್ ಪೂರೈಸುವ ಜವಾಬ್ಧಾರಿ ಸರ್ಕಾರದ ಮೇಲಿದೆ.
ಆದರೆ ಆಕ್ಸಿಜನ್ ಇರಲಿ,ರೋಗಿಗಳಿಗೆ ಒಂದು ಬೆಡ್ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ.
ಆಕ್ಸಿಜನ್ಗಾಗಿ ಮನವಿ ಸಲ್ಲಿಸಿದ್ದರೂ ಸರ್ಕಾರ ಚಾಮರಾಜನಗರಕ್ಕೆ ಆಕ್ಸಿಜನ್ ನೀಡದೆ ಜನರ ಸಾಮೂಹಿಕ ಹತ್ಯೆ ನಡೆಸಿದೆ.
ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 3, 2021
ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜನಗರದ ದುರಂತಕ್ಕೆ ಕಾರಣ ಯಾರು ಎಂದು ಬಿಡಿಸಿ ಹೇಳಬೇಕಿಲ್ಲ. ಇದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ಎಂದು ಗಂಭೀರ ಆರೋಪ ಮಾಡಿದರು.
2
ಪ್ರತಿ ಜಿಲ್ಲಾಸ್ಪತ್ರೆಗೂ ಆಕ್ಸಿಜನ್ ಪೂರೈಸುವ ಜವಾಬ್ಧಾರಿ ಸರ್ಕಾರದ ಮೇಲಿದೆ.
ಆದರೆ ಆಕ್ಸಿಜನ್ ಇರಲಿ,ರೋಗಿಗಳಿಗೆ ಒಂದು ಬೆಡ್ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ.
ಆಕ್ಸಿಜನ್ಗಾಗಿ ಮನವಿ ಸಲ್ಲಿಸಿದ್ದರೂ ಸರ್ಕಾರ ಚಾಮರಾಜನಗರಕ್ಕೆ ಆಕ್ಸಿಜನ್ ನೀಡದೆ ಜನರ ಸಾಮೂಹಿಕ ಹತ್ಯೆ ನಡೆಸಿದೆ.
ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 3, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ