ಹಾಸನ (ನ. 24): ಕಾಂಗ್ರೆಸ್ನಲ್ಲಿ ಬಣ ರಾಜಕೀಯವಿದೆ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಲವರು ನಾಯಕತ್ವದ ಬಗ್ಗೆ ಮಾತನಾಡುತ್ತಾರೆ ಅಂತ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಸೋಲಿಗೆ ಎಲ್ಲರೂ ಹೊಣೆಯಾಗಿದ್ದಾರೆ. ಶಿರಾ ಮತ್ತು ಆರ್ಆರ್ ನಗರ ಉಪ ಚುನಾವಣೆಯಲ್ಲಿ ನಾವು ಸೋತೆವು. ಇದಕ್ಕೆ ನಾನು ಸೇರಿ ಎಲ್ಲರೂ ಹೊಣೆಯಾಗಿದ್ದೇವೆ ಎಂದಿದ್ದಾರೆ.
ಹಾಸನ ಜಿಲ್ಲೆಯ ಅರಸೀಕರೆಯಲ್ಲಿ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ಉಪ ಚುನಾವಣೆಗಳನ್ನೂ ಗೆದ್ದಿದ್ದೆವು. ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಗೆದ್ದಿದ್ದಾರೆ. ಯಡಿಯೂರಪ್ಪನ ಮಗ ಕೋಟಿಗಟ್ಟಲೆ ದುಡ್ಡು ಹೊಡೆದಿದ್ದಾನೆ. ಆ ದುಡ್ಡು ಖರ್ಚು ಮಾಡಿ ಉಪ ಚುನಾವಣೆ ಗೆದ್ದಿದ್ದಾನೆ ಎಂದು ಆರೋಪಿಸಿದ್ದಾರೆ.
ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ, ಬಿಜೆಪಿ ಜೊತೆ ಕುಮಾರಸ್ವಾಮಿ ಮೊದಲಿನಿಂದಲೂ ಚೆನ್ನಾಗಿದ್ದಾರೆ. ಹೊಂದಾಣಿಕೆ ಮಾಡಿಕೊಳ್ಳೋದು ಅವರಿಗೇನೂ ಹೊಸತಲ್ಲ ಎಂದಿದ್ದಾರೆ.
ಇದನ್ನೂ ಓದಿ: ಕುರುಬರನ್ನು ಎಸ್ಟಿಗೆ ಸೇರಿಸುವ ಹೋರಾಟ ಬೆಂಬಲಿಸುವುದು ಸಿದ್ದರಾಮಯ್ಯಗೆ ಬಿಟ್ಟ ವಿಚಾರ; ಕೆಎಸ್ ಈಶ್ವರಪ್ಪ
ಮೈತ್ರಿ ಸರ್ಕಾರದಲ್ಲಿ ನೋವು ಅನುಭವಿಸಿದ್ದೇನೆ ಎಂಬ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ನೋವು ಅನುಭವಿಸೋರು ತಾಜ್ ಹೋಟೆಲ್ನಲ್ಲಿ ಇರ್ತಾರಾ? ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಅಭ್ಯರ್ಥಿಯನ್ನು ಕಾಂಗ್ರೆಸ್ನವರು ಕರೆದುಕೊಂಡು ಹೋಗಿದ್ದಾರೆಂದು ಸಿಎಂ ಪುತ್ರ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ, ಪ್ರತಾಪ್ ಗೌಡ ಯಾರ ಕ್ಯಾಂಡಿಡೇಟ್? 2013ರಲ್ಲಿ ಕಾಂಗ್ರೆಸ್ನಲ್ಲಿದ್ದ ಆತನನ್ನು ವಿಜಯೇಂದ್ರ ದುಡ್ಡು ಕೊಟ್ಟು ಆಪರೇಷನ್ ಕಮಲ ಮಾಡಿದ್ದ. ವಿಜಯೇಂದ್ರ ಬಿಜೆಪಿನಾ ಅಥವಾ ಯಾವ ಪಕ್ಷದವನು? ಎಂದು ಟೀಕಿಸಿದ್ದಾರೆ. ನಮ್ಮ ಶಾಸಕರನ್ನೇ ದುಡ್ಡು ಕೊಟ್ಟು ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ