• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • YSV Datta: ಕಡೂರು ಟಿಕೆಟ್ 'ಕೈ' ತಪ್ಪಿದ್ದಕ್ಕೆ ರೆಬೆಲ್ ಆದ ದತ್ತಾ, ಟವೆಲ್ ಗುರುತಿನಡಿ ಸ್ವತಂತ್ರವಾಗಿ ಕಣಕ್ಕೆ!

YSV Datta: ಕಡೂರು ಟಿಕೆಟ್ 'ಕೈ' ತಪ್ಪಿದ್ದಕ್ಕೆ ರೆಬೆಲ್ ಆದ ದತ್ತಾ, ಟವೆಲ್ ಗುರುತಿನಡಿ ಸ್ವತಂತ್ರವಾಗಿ ಕಣಕ್ಕೆ!

ವೈಎಸ್​ವಿ ದತ್ತಾ, ಮಾಜಿ ಶಾಸಕ

ವೈಎಸ್​ವಿ ದತ್ತಾ, ಮಾಜಿ ಶಾಸಕ

ಕಾಂಗ್ರೆಸ್​​ ಪಕ್ಷದಲ್ಲಿ ಟಿಕೆಟ್​ ವಂಚಿತರಾಗಿದ್ದ ರಾಜ್ಯದ ಹಿರಿಯ ರಾಜಕಾರಣಿ ವೈಎಸ್​​ವಿ ದತ್ತಾ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ.

  • News18 Kannada
  • 5-MIN READ
  • Last Updated :
  • Chikmagalur, India
  • Share this:

ಚಿಕ್ಕಮಗಳೂರು: ಜೆಡಿಎಸ್​​ನಿಂದ (JDS) ಕಾಂಗ್ರೆಸ್​ಗೆ (Congress) ಸೇರ್ಪಡೆಯಾಗಿದ್ದ ಹಿರಿಯ ರಾಜಕಾರಣಿ ವೈಎಸ್‌ವಿ ದತ್ತಾ (YSV Datta) ಅವರಿಗೆ ಕಡೂರು (Kadur) ಕ್ಷೇತ್ರದ ಕಾಂಗ್ರೆಸ್‌ (Congress) ಟಿಕೆಟ್‌ ಮಿಸ್‌ ಆಗಿದೆ. ಈ ಹಿನ್ನೆಲೆ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ಇಂದು ಬೆಂಬಲಿಗರ ಸಭೆ ನಡೆಸಿದ್ದ ದತ್ತಾ ಅವರು, ಪಕ್ಷೇತರ ಅಭ್ಯರ್ಥಿಯಾಗಿ (Independent Candidate) ಚುನಾವಣೆ (Election) ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಟವೆಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿರುವ ದತ್ತಾ ಅವರು, ಟವೆಲ್ ಒಡ್ಡುತ್ತೇನೆ ಮತ ಭಿಕ್ಷೆ, ಹಣ ನೀಡಿ ಭಿಕ್ಷೆ ನೀಡಿ ಎಂದು ವೈಎಸ್ ವಿ ದತ್ತಾ ಟವೆಲ್ ಒಡ್ಡಿದ್ದಾರೆ. 


ಇಂದು ಸ್ವಾಭಿಮಾನದ ಸಭೆ ನಡೆಸಿ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸಿದ ವೈಎಸ್​ವಿ ದತ್ತಾ ಅವರು, ಕಡೂರಿನಲ್ಲಿ ಸ್ವತಂತ್ರವಾಗಿ‌ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು. ಅಲ್ಲದೆ, ಹೆಗಲ ಮೇಲೆ ಟವೆಲ್ ಹಾಕಿಕೊಂಡು ಸ್ವಾಭಿಮಾನದ ಸಭೆಯಲ್ಲಿ ಭಿಕ್ಷೆ ಬೇಡಿದರು. ಚುನಾವಣಾ ಖರ್ಚಿಗಾಗಿ ಅಭಿಮಾನಿಗಳು ಸಭೆಯಲ್ಲಿ 50 ಸಾವಿರ ರೂಪಾಯಿ, 2 ಲಕ್ಷದ ಚೆಕ್ ಗಳನ್ನು ನೀಡಿದ್ದಾರೆ.


ಇದನ್ನೂ ಓದಿ: Amul vs Nandini: ನಂದಿನಿ ಹಾಲನ್ನೇ ಬಳಸಿ; ಬೆಂಗಳೂರು ಹೋಟೆಲುಗಳ ಸಂಘದಿಂದ ಕರೆ!


ಅಲ್ಲದೆ, ಮತ್ತಷ್ಟು ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಟಿಕೆಟ್ ತಪ್ಪಿದ್ದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ದತ್ತಾ ಅಭಿಮಾನಿಗಳು ಸ್ವತಂತ್ರವಾಗಿ ನಿಲ್ಲುವಂತೆ ಒತ್ತಾಯ ಮಾಡಿದ್ದರು. ಅಭಿಮಾನಿಗಳ ಸೂಚನೆ ಮೇರೆಗೆ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.


ಕಡೂರಿನಲ್ಲಿ ನಡೆದ ಸ್ವಾಭಿಮಾನ ಸಭೆಯಲ್ಲಿ ವೈಎಸ್​​ವಿ ದತ್ತಾ ಅವರು, ನನ್ನ ಬಳಿ ಹಣ ಇಲ್ಲ, ಜಾತಿ ಇಲ್ಲ ನಾನೊಬ್ಬ ಸಾಲಗಾರ. ಆದರೆ ನನ್ನ ಬಳಿ ಜನ ಬೆಂಬಲ ಇದೆ, ನಾನು ಹೇಳಿದರೆ 10 ಸಾವಿರ ಜನ ಬರುತ್ತಾರೆ. ನನ್ನ ಬಳಿ ಆಸ್ತಿ, ಇಲ್ಲದಿದ್ದರೆ ಪ್ರೀತಿ ಇಲ್ಲವೇ. ಜಾತಿ ರಾಜಕಾರಣಿ ಬೇಡ, ಪ್ರೀತಿ ರಾಜಕಾರಣ ಮಾಡೋಣ ಅಂತಾ ಕರೆ ಕೊಟ್ಟಿದ್ದಾರೆ.




ಇನ್ನು, ಕಾಂಗ್ರೆಸ್​​ನಿಂದ ಟಿಕೆಟ್​ ನೀಡದ ಕುರಿತಂತೆ ಬೇಸರ ವ್ಯಕ್ತಪಡಿಸಿದ್ದ ದತ್ತಾ ಅವರು, ಪಕ್ಷದ ನಾಯಕರು ಟಿಕೆಟ್ ನೀಡುವುದಕ್ಕೂ ಮುಂಚೆ ಬೇರೆ ಕ್ಷೇತ್ರಗಳಲ್ಲಿ ನಡೆಸಿದ ಪ್ರಕ್ರಿಯೆ ನಮ್ಮಲ್ಲೂ ನಡೆಸಬಹುದಿತ್ತು. ಟಿಕೆಟ್ ಘೋಷಣೆಯಾದ ಬಳಿಕವೂ ನನ್ನನ್ನು ಯಾರು ಸಂಪರ್ಕ ಮಾಡಿಲ್ಲ. ನಾನು ಬಾಡಿಗೆ ಕಾರಿನಲ್ಲಿ ತಿರುಗುತ್ತೇನೆ, ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರವಾಸ ಮಾಡುತ್ತೇನೆ. ನನ್ನನ್ನ ಹೇಗೆ ಬೇಕಾದರೂ ಸಂಪರ್ಕ ಮಾಡಬಹುದಿತ್ತು. ಆದರೆ ಮಾಡಲಿಲ್ಲ. ದತ್ತಾ ಶಕ್ತಿ ಭಾರೀ ಗೌಣ, ಏನು ತೊಂದರೆ ಆಗುವುದಿಲ್ಲ ಎಂದು ಭಾವಿಸಿರಬಹುದು. ಆದರೆ ನನ್ನ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ತುಂಬಾ ನೋವಾಗಿದೆ ಎಂದು ತಿಳಿಸಿದ್ದರು.

top videos
    First published: