ಕಳೆದೆರಡು ದಿನಗಳ ಹಿಂದೆ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಯನಗರ ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಈ ಕುರಿತು ಟ್ವೀಟರ್ನಲ್ಲಿ ಅವರು ದೃಢಪಡಿಸಿದ್ದಾರೆ. ಕೋವಿಡ್ ರೋಗಲಕ್ಷಣಗಳು ಹೆಚ್ಚಿಲ್ಲದಿದ್ದರು ಸಹ ನನಗೆ ಈ ಹಿಂದೆ ಅಸ್ತಮಾ ಇದ್ದ ಕಾರಣ, ಪಾಲಕರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸಾರ್ವಜನಿಕರಿಗೆ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ನನ್ನ ಕಚೇರಿಗೆ ಕರೆಮಾಡಬೇಕಾಗಿ ಕೋರುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದೇ ವೇಳೆ ಕೋವಿಡ್ 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಕೈಗೊಂಡು ಮಾಸ್ಕ್ ಧರಿಸಿ. ಎಲ್ಲರಿಗೂ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕೆಂದು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.
I’ve tested positive for #COVID19 & admitted at a hospital closeby. Request everyone who came in contact past couple of days to get tested.
Cases have increased recently #secondwave plz follow precautions, wear masks. Request government to expedite COVID vaccine for everyone! pic.twitter.com/PqEKCj4t6x
— Sowmya | ಸೌಮ್ಯ | http://sowmyareddy.in (@Sowmyareddyr) March 27, 2021
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆ ಮುಂಜಾಗ್ರತೆವಹಿಸುವಂತೆ ಸರ್ಕಾರ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಳಿಕೆಯಾಗಿದ್ದ ಪ್ರಕರಣಗಳು ಈಗ ದಿನವೊಂದಕ್ಕೆ ಒಂದೂವರೆ ಸಾವಿರ ದಾಟುತ್ತಿದೆ. ಈ ಹಿನ್ನಲೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವಂತೆ ಸರ್ಕಾರ ಮನವಿ ಮಾಡಿದೆ. ಅಲ್ಲದೇ ಮಾಸ್ಕ್ ಧರಿಸದವರ ವಿರುದ್ಧ ದಂಡ ಸಂಗ್ರಹಕ್ಕೆ ಮಾರ್ಷಲ್ಗಳು ಮುಂದಾಗಿದ್ದಾರೆ. ಸಭೆ ಸಮಾರಂಭಗಳಿಗೆ ಜನರ ಮಿತಿಯನ್ನು ಹೇರಲಾಗಿದ್ದು, ಇದು ತಪ್ಪಿದರೆ ಭಾರೀ ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಲು ಹೊರ ರಾಜ್ಯದ ಪ್ರವಾಸಿಗರು ಕಾರಣವಾಗಿದ್ದಾರೆ. ಇದೇ ಹಿನ್ನಲೆ ಏಪ್ರಿಲ್ 1 ರಿಂದ ರಾಜಧಾನಿಗೆ ಆಗಮಿಸುವ ಹೊರ ರಾಜ್ಯದವರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ