• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Darshan: ಆರ್​ಆರ್​ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ಡಿಬಾಸ್​ ದರ್ಶನ್​ ರೋಡ್​ ಶೋ

Darshan: ಆರ್​ಆರ್​ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ಡಿಬಾಸ್​ ದರ್ಶನ್​ ರೋಡ್​ ಶೋ

ದರ್ಶನ್​

ದರ್ಶನ್​

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್​ ಆರ್​ಆರ್​ ನಗರದಲ್ಲಿ ಮುನಿರತ್ನ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಯಶವಂತಪುರದಿಂದ ದರ್ಶನ್​ ರೋಡ್​ ಶೋ ಆರಂಭವಾಗುವುದರಿಂದ ಯಶವಂತಪುರ ರೈಲ್ವೆ ಸ್ಟೇಷನ್​ ಬಳಿ ಸಾಕಷ್ಟು ಅಭಿಮಾನಿಗಳು ಸೇರಿದ್ದಾರೆ.

  • Share this:

ಬೆಂಗಳೂರು (ಅ. 30): ಶಿರಾ ಮತ್ತು ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇವಲ 4 ದಿನಗಳು ಬಾಕಿ ಇವೆ. ಹೀಗಾಗಿ, ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಜೋರಾಗಿದೆ. ಆರ್​ಆರ್​ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿನಿಮಾ ನಿರ್ಮಾಪಕರೂ ಆಗಿರುವ ಮುನಿರತ್ನ ಸ್ಪರ್ಧಿಸುತ್ತಿರುವುದರಿಂದ ಸಿನಿತಾರೆಯರು ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್​ ಆರ್​ಆರ್​ ನಗರದಲ್ಲಿ ಮುನಿರತ್ನ ಪರವಾಗಿ ಪ್ರಚಾರ ನಡೆಸಲಿದ್ದಾರೆ. ನಿನ್ನೆಯೇ ದರ್ಶನ್​ ಆರ್​ಆರ್​ ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ಪ್ರಚಾರದ ರ್ಯಾಲಿಯನ್ನು ಇಂದಿಗೆ ಮುಂದೂಡಲಾಗಿತ್ತು.


ಕುರುಕ್ಷೇತ್ರ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಡಿಬಾಸ್​ ದರ್ಶನ್​ ಇಂದು ಮುನಿರತ್ನ ಅವರ ಪರವಾಗಿ ಮತಯಾಚನೆ ಮಾಡಲಿದ್ದಾರೆ. ದರ್ಶನ್​ ಆಗಮನದ ಸುದ್ದಿ ಕೇಳಿ ಸಾಕಷ್ಟು ಅಭಿಮಾನಿಗಳು ಸೇರುವ ಸಾಧ್ಯತೆ ಇರುವುದರಿಂದ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ದರ್ಶನ್​ ಅಭಿಮಾನಿಗಳು ಹೊರ ಊರುಗಳಿಂದಲೂ ಆರ್​ಆರ್​ ನಗರದತ್ತ ಆಗಮಿಸುತ್ತಿದ್ದಾರೆ. ಯಶವಂತಪುರದಿಂದ ದರ್ಶನ್​ ರೋಡ್​ ಶೋ ಆರಂಭವಾಗುವುದರಿಂದ ಯಶವಂತಪುರ ರೈಲ್ವೆ ಸ್ಟೇಷನ್​ ಬಳಿ ಸಾಕಷ್ಟು ಅಭಿಮಾನಿಗಳು ಸೇರಿದ್ದಾರೆ. ಚಾಲೆಂಜಿಂಗ್ ಸ್ಟಾರ್​ ದರ್ಶನ್​ಗೆ ರೋಡ್​ ಶೋ ವೇಳೆ ರಕ್ಷಣೆ ಕೊಡಲು ಅವರ ಮನೆ ಬಳಿ 10ಕ್ಕೂ ಹೆಚ್ಚು ಬೌನ್ಸರ್​ಗಳು ಕಾಯುತ್ತಿದ್ದಾರೆ.


ಎರಡು ದಿನಗಳ ಹಿಂದೆ ಹಿರಿಯ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಕೂಡ ಮುನಿರತ್ನ ಪರವಾಗಿ ಆರ್​ಆರ್​ ನಗರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಇಂದು ನಟ ದರ್ಶನ್​ ಮಾತ್ರವಲ್ಲದೆ ನಟಿ ಅಮೂಲ್ಯ ಕೂಡ ಮುನಿರತ್ನ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಜೊತೆಗೆ ಸಚಿವ ಹಾಗೂ ಹಿರಿಯ ನಟ ಬಿ.ಸಿ ಪಾಟೀಲ್ ಕೂಡ ಆರ್​ಆರ್​ ನಗರದಲ್ಲಿ ಮತಯಾಚನೆ ಮಾಡಲಿದ್ದಾರೆ. ಹೀಗಾಗಿ, ಆರ್​ಆರ್​ ನಗರದಲ್ಲಿ ತಾರಾ ಮೆರುಗು ಹೆಚ್ಚಾಗಿದೆ.


ಇದನ್ನೂ ಓದಿ: Karnataka Weather: ಕರಾವಳಿ, ಕೊಡಗು, ಮಲೆನಾಡಿನಲ್ಲಿ ಇಂದಿನಿಂದ ನ. 3ರವರೆಗೆ ಮಳೆ ಹೆಚ್ಚಳ


ಕೇವಲ ರಾಜಕಾರಣಿಯಲ್ಲದೆ ನಿರ್ಮಾಪಕರೂ ಆಗಿರುವ ಮುನಿರತ್ನ ಪರ ಸ್ಯಾಂಡಲ್​ವುಡ್​ನ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಇಂದು ಪ್ರಚಾರ ನಡೆಸಲಿದ್ದಾರೆ. ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿದ್ದ ದರ್ಶನ್​ ಅವರು ಮುನಿರತ್ನ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದೇ ಕಾರಣಕ್ಕೆ ಇಂದು ಅವರ ಪರವಾಗಿ ಮತಯಾಚನೆ ಮಾಡಲಿದ್ದಾರೆ. ದರ್ಶನ್​ ಪ್ರಚಾರದಿಂದ ಆರ್​ಆರ್​ ನಗರ ಇಂದು ಮತ್ತಷ್ಟು ರಂಗೇರಲಿದೆ.


ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ಘೋಷಿಸಲಾಗಿದೆ. ಆರ್​.ಆರ್ ನಗರದ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದ ಐಎಎಸ್​ ಅಧಿಕಾರಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧಿಸಲಿದ್ದಾರೆ. ಆರ್​ಆರ್​ ನಗರ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಕಣಕ್ಕಿಳಿಯಲಿದ್ದಾರೆ. ಆರ್​ಆರ್​ ನಗರ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಸ್ಪರ್ಧಿಸಲಿದ್ದಾರೆ.

Published by:Sushma Chakre
First published: