ಬೆಂಗಳೂರು(ಮಾ.26): ಕೊರೋನಾ ವೈರಸ್ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿರುದ್ಧ ಡಿಸಿಎಂ ಅಶ್ವಥ್ ನಾರಾಯಣ್ ಗಂಭೀರ ಆರೋಪ ಮಾಡಿದ್ದಾರೆ. ಶಾಪ್ ಓಪನ್ ಮಾಡಲು ಮಾಲೀಕರಿಂದ ಹಣ ಪಡೆದು ಅವಕಾಶ ನೀಡಿದ್ದೀರಿ. ಬಂದ್ ಎಂದ್ರೆ ಎಲ್ಲರೂ ಬಂದ್ ಮಾಡಬೇಕು. ಕೆಲವು ದೊಡ್ಡ ಶಾಪ್ ಓಪನ್ ಆಗಿರುವುದರ ಹಿಂದೆ ನಿಮ್ಮ ಕೈವಾಡವಿದೆ ಎಂದು ಅಶ್ವತ್ ನಾರಾಯಣ್ ಭಾಸ್ಕರ್ ರಾವ್ ವಿರುದ್ಧ ಕಿಡಿಕಾರಿದ್ದಾರೆ. ಇದರಿಂದ ಬೇಸರಗೊಂಡ ಭಾಸ್ಕರ್ ರಾವ್ ಸಭೆಯಿಂದ ಅರ್ಧದಲ್ಲೇ ಹೊರಹೋಗಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಇಂದು ಸಿಎಂ ಯಡಿಯೂರಪ್ಪನವರು ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದರು. ಈ ಸಭೆಯಲ್ಲಿ ಸಿಎಂ ಮುಂದೆಯೇ ಡಿಸಿಎಂ ಅಶ್ವಥ್ ನಾರಾಯಣ ಮತ್ತು ಭಾಸ್ಕರ್ ರಾವ್ ನಡುವೆ ಮಾತಿನ ಜಟಾಪಟಿ ನಡೆದಿದೆ. ಇಬ್ಬರ ನಡುವೆ ನಡೆದ ಮಾತಿನ ಚಕಮಿಕಿ ವೇಳೆ ಆನ್ ಲೈನ್ ಫುಡ್ ಡೆಲಿವಿರಿ ಕಂಪನಿಯ ಸಿಬ್ಬಂದಿಗೆ ಹೆಚ್ಚು ಪಾಸ್ ನೀಡುವಂತೆ ಭಾಸ್ಕರ್ ರಾವ್ಗೆ ಅಶ್ವಥ್ ನಾರಾಯಣ ತಾಕೀತು ಮಾಡಿದ್ದಾರೆ. ಆಗ ಇದಕ್ಕೆ ಒಪ್ಪದ ಭಾಸ್ಕರ್ ನೀಡಲು ಆಗುವುದಿಲ್ಲ ಎಂದಿದ್ದಾರೆ. ಇದರಿಂದ ಭಾವುಕರಾದ ಭಾಸ್ಕರ್ ರಾವ್ ಬೇಸರ ಮಾಡಿಕೊಂಡಿದ್ದಾರೆ. ಈ ವೇಳೆ ಸಿಎಂ ಅವರೇ ಸಮಾಧಾನ ಪಡಿಸಲು ಯತ್ನಿಸಿದರು ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮುಗಿದ ಬಳಿಕ ವಿಧಾನಸೌಧದಲ್ಲಿ ಸಚಿವರು, ಅಧಿಕಾರಿಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಫುಡ್ ಡೆಲಿವರಿ ಸಿಬ್ಬಂದಿಗೆ ಪಾಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಗಲಾಟೆ ನಡೆದಿದೆ.
ಇದನ್ನೂ ಓದಿ: ಕೋವಿಡ್-19: ದೇಶದಲ್ಲಿ ಸೋಂಕಿತರ ಸಂಖ್ಯೆ 649, 13 ಮಂದಿ ಸಾವು
ಇನ್ನು, ಉಪಮುಖ್ಯಮಂತ್ರಿಯವರ ಆರೋಪದಿಂದ ಕಂಗಾಲಾದ ಆಯುಕ್ತ ಭಾಸ್ಕರ ರಾವ್ ಸಭೆಯಿಂದ ಹೊರನಡೆದಿದ್ದಾರೆ. ಈ ಮುನ್ನ ನನ್ನನ್ನು ಕಮೀಷನರ್ ಹುದ್ದೆಯಿಂದ ಬಿಡುಗಡೆ ಮಾಡಿ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ. ನಂತರ ಆರೋಪದಿಂದ ಕಂಗಾಲಾಗದಂತೆ ಸಿಎಂ ಮನವೊಲಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ