ಉಪಚುನಾವಣೆ ಸೋಲಿನ ಹೊಣೆಯನ್ನು ಡಿಕೆ ಶಿವಕುಮಾರ್ ಯಾಕೆ ಹೊರಬೇಕು?; ಡಿಕೆಶಿ ಪರ ಸಿದ್ದರಾಮಯ್ಯ ಬ್ಯಾಟಿಂಗ್
ಸೋಲಿನ ಹೊಣೆಯನ್ನು ಡಿಕೆ ಶಿವಕುಮಾರ್ ಯಾಕೆ ಹೊರಬೇಕು? ಕೆಪಿಸಿಸಿ ಅಧ್ಯಕ್ಷರಾದ ತಕ್ಷಣ ಅವರೇ ಹೊಣೆ ಹೊರಬೇಕಾ? 2023ಕ್ಕೆ ಜನರಲ್ ಎಲೆಕ್ಷನ್ ಬರುತ್ತದೆ. ಆಗ ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
news18-kannada Updated:November 10, 2020, 4:30 PM IST

ಸಿದ್ದರಾಮಯ್ಯ
- News18 Kannada
- Last Updated: November 10, 2020, 4:30 PM IST
ಬಾಗಲಕೋಟೆ (ನ. 10): ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲೇ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದಕ್ಕೆ ಅವರೇ ಸೋಲಿನ ಹೊರೆ ಹೊರಬೇಕು ಎಂಬ ವಿಚಾರವನ್ನು ಅಲ್ಲಗಳೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸೋಲಿನ ಹೊಣೆಯನ್ನು ಡಿಕೆ ಶಿವಕುಮಾರ್ ಯಾಕೆ ಹೊರಬೇಕು? ಯಾರೇ ಅಧ್ಯಕ್ಷರಾದರೂ ಅಷ್ಟೇ. ಸೋಲಿನ ಹೊಣೆಯನ್ನು ಅವರು ಹೊರಬೇಕಾದ ಅಗತ್ಯವಿಲ್ಲ. ಅಧ್ಯಕ್ಷರಾದ ತಕ್ಷಣ ಹೊಣೆ ಹೊರಬೇಕಾ? ಇದು ಜನರಲ್ ಎಲೆಕ್ಷನ್ ಅಲ್ಲ, ಉಪ ಚುನಾವಣೆಯಷ್ಟೇ. 2023ಕ್ಕೆ ಜನರಲ್ ಎಲೆಕ್ಷನ್ ಬರುತ್ತದೆ. ಆಗ ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆರ್ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ ಎದುರು ಕಾಂಗ್ರೆಸ್ ಸೋಲನ್ನು ಅನುಭವಿಸಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆರ್ಆರ್ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಶಿರಾದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇತ್ತು. ಆರ್ ಆರ್ ನಗರದಲ್ಲಿ ಒಳ್ಳೆಯ ಫೈಟ್ ಕೊಡುತ್ತೇವೆ ಎಂದುಕೊಂಡಿದ್ದೆವು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಕೊಟ್ಟ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕಾಗುತ್ತದೆ. ಜನರು ಕೊಟ್ಟ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ. ಸರ್ಕಾರದಲ್ಲಿರೋರು ಚುನಾವಣೆಯನ್ನು ನಿಷ್ಪಕ್ಷಪಾತ, ಮುಕ್ತವಾಗಿ ನಡೆಸಬೇಕು. ನನಗೆ ಇರುವ ಮಾಹಿತಿ ಪ್ರಕಾರ ಬಿಜೆಪಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: RR Nagar Sira By Election 2020 Result Live: ಆರ್ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ 57,936 ಮತಗಳ ಅಂತರದ ಭರ್ಜರಿ ಗೆಲುವು
ಬೈ ಎಲೆಕ್ಷನ್ ಬಳಿಕ ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುವ ತಮ್ಮ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನನಗೆ ಇರುವ ಮಾಹಿತಿ ಪ್ರಕಾರ ಈಗಲೂ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದಿದ್ದಾರೆ. ತಾವು ಬಿಜೆಪಿ ಸೇರುವ ಸಲುವಾಗಿ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಪಾಪ, ಅವನಿಗೆ ರಾಜಕೀಯ ಪ್ರೌಢಿಮೆ ಬಂದಿಲ್ಲ. ಹಾಗಾಗಿ ನಾನು ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸೋದಿಲ್ಲ ಎಂದಿದ್ದಾರೆ.
ಉಪ ಚುನಾವಣೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಗೆಲ್ಲಬೇಕೆಂಬ ಬಯಕೆಯಿತ್ತು. ಹಾಗಾಗಿ, ಅವರು ನನ್ನನ್ನು ಟಾರ್ಗೆಟ್ ಮಾಡಿದರು. ಆರ್ಆರ್ ನಗರದಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣಿಕೆ ಆಗಿತ್ತು ಅನಿಸುತ್ತದೆ. ಅದಕ್ಕೆ ಜೆಡಿಎಸ್ ಬಹಳ ಮತ ತೆಗೆದುಕೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.(ವರದಿ: ರಾಚಪ್ಪ ಬನ್ನಿದಿನ್ನಿ)
ಆರ್ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ ಎದುರು ಕಾಂಗ್ರೆಸ್ ಸೋಲನ್ನು ಅನುಭವಿಸಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: RR Nagar Sira By Election 2020 Result Live: ಆರ್ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ 57,936 ಮತಗಳ ಅಂತರದ ಭರ್ಜರಿ ಗೆಲುವು
ಬೈ ಎಲೆಕ್ಷನ್ ಬಳಿಕ ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುವ ತಮ್ಮ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನನಗೆ ಇರುವ ಮಾಹಿತಿ ಪ್ರಕಾರ ಈಗಲೂ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದಿದ್ದಾರೆ. ತಾವು ಬಿಜೆಪಿ ಸೇರುವ ಸಲುವಾಗಿ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಪಾಪ, ಅವನಿಗೆ ರಾಜಕೀಯ ಪ್ರೌಢಿಮೆ ಬಂದಿಲ್ಲ. ಹಾಗಾಗಿ ನಾನು ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸೋದಿಲ್ಲ ಎಂದಿದ್ದಾರೆ.
ಉಪ ಚುನಾವಣೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಗೆಲ್ಲಬೇಕೆಂಬ ಬಯಕೆಯಿತ್ತು. ಹಾಗಾಗಿ, ಅವರು ನನ್ನನ್ನು ಟಾರ್ಗೆಟ್ ಮಾಡಿದರು. ಆರ್ಆರ್ ನಗರದಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣಿಕೆ ಆಗಿತ್ತು ಅನಿಸುತ್ತದೆ. ಅದಕ್ಕೆ ಜೆಡಿಎಸ್ ಬಹಳ ಮತ ತೆಗೆದುಕೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.(ವರದಿ: ರಾಚಪ್ಪ ಬನ್ನಿದಿನ್ನಿ)