ಬಾಲಕಾರ್ಮಿಕರ ಪತ್ತೆಗೆ ಇಲಾಖೆಗಳ ನಡುವೆ ಸಮನ್ವಯ ಅಗತ್ಯ; ಶಿವಮೊಗ್ಗ ಡಿಸಿ ಕೆ.ಬಿ.ಶಿವಕುಮಾರ್
ಅಪಾಯಕಾರಿ ಕೆಲಸಗಳಲ್ಲಿ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ತೊಡಗಿಸುವಂತಿಲ್ಲ. ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಸಹ ಕೈಗೊಳ್ಳಬೇಕು ಹೇಳಿದರು.
news18-kannada Updated:November 5, 2020, 4:14 PM IST

ಶಿವಮೊಗ್ಗ ಡಿಸಿ ಕೆ.ಬಿ.ಶಿವಕುಮಾರ್
- News18 Kannada
- Last Updated: November 5, 2020, 4:14 PM IST
ಶಿವಮೊಗ್ಗ(ನ.05): ಬಾಲಕಾರ್ಮಿಕರ ಬಗ್ಗೆ ದೂರು ಬಂದರೆ ಮಾತ್ರ ಕ್ರಮ ಕೈಗೊಂಡರೆ ಸಾಲದು, ಸ್ವಯಂಪ್ರೇರಿತರಾಗಿ ನಿರಂತರ ಪರಿಶೀಲನೆ ನಡೆಸುವ ಅಗತ್ಯವಿದೆ. ಇದಕ್ಕಾಗಿ ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸ್ಥಳೀಯಾಡಳಿತ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಮಕ್ಕಳ ಸಹಾಯವಾಣಿಗೆ ಬರುವ ದೂರುಗಳನ್ನು ತಕ್ಷಣ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಕೊರೋನಾ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕಾರ್ಮಿಕರಾಗಿ ದುಡಿಯುವ ಸಾಧ್ಯತೆಯಿದ್ದು, ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು. ಬಾಲಕಾರ್ಮಿಕರ ಬಗ್ಗೆ ದೂರು ಬಂದರೆ ಮಾತ್ರ ಕ್ರಮ ಕೈಗೊಂಡರೆ ಸಾಲದು, ಸ್ವಯಂಪ್ರೇರಿತರಾಗಿ ನಿರಂತರ ಪರಿಶೀಲನೆ ನಡೆಸುವ ಅಗತ್ಯವಿದೆ. ಇದಕ್ಕಾಗಿ ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸ್ಥಳೀಯಾಡಳಿತ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಸಹಾಯವಾಣಿಗೆ ಬರುವ ದೂರುಗಳನ್ನು ತಕ್ಷಣ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಕಟ್ಟಡ ನಿರ್ಮಾಣ ಕಾರ್ಯ ನಡೆಯುವ ಸ್ಥಳಗಳಲ್ಲಿ ಕಾರ್ಮಿಕರ ಮಕ್ಕಳು ಕೆಲಸ ಮಾಡುವ ಸಾಧ್ಯತೆಯಿದ್ದು, ಅಂತಹ ಸ್ಥಳಗಳ ಮೇಲೆ ನಿಗಾ ಇಡಬೇಕು. ಕಟ್ಟಡ ನಿರ್ಮಾಣದಾರರಿಗೆ ಈ ಕುರಿತು ಸ್ಪಷ್ಟ ಎಚ್ಚರಿಕೆ ನೀಡಬೇಕು. ಅಪಾಯಕಾರಿ ಕೆಲಸಗಳಲ್ಲಿ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ತೊಡಗಿಸುವಂತಿಲ್ಲ. ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಸಹ ಕೈಗೊಳ್ಳಬೇಕು ಹೇಳಿದರು.
30 ವರ್ಷದ ಬೇಡಿಕೆಗೆ ಸಿಕ್ಕಿಲ್ಲ ಕಿಮ್ಮತ್ತು; 2 ರಾಜ್ಯ ಹೆದ್ದಾರಿ ಸಂಪರ್ಕಿಸುವ ಗ್ರಾಮೀಣ ರಸ್ತೆಗಿಲ್ಲ ಡಾಂಬರೀಕರಣದ ಭಾಗ್ಯ
ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು 622 ತಪಾಸಣೆಗಳನ್ನು ನಡೆಸಲಾಗಿದೆ. 4 ಬಾಲ ಕಾರ್ಮಿಕರನ್ನು ಪತ್ತೆಹಚ್ಚಿ ಮೊಕದ್ದಮೆ ದಾಖಲಿಸಲಾಗಿದೆ. ಈ ವರ್ಷದದ ಮೊದಲ ಆರು ತಿಂಗಳ ಅವಧಿಯಲ್ಲಿ 106 ಕಡೆ ತಪಾಸಣಾ, ಪರಿಶೀಲನೆ ಕಾರ್ಯ ಕೈಗೊಳ್ಳಲಾಗಿದ್ದು, ಒಬ್ಬ ಬಾಲಕಾರ್ಮಿಕ ಪತ್ತೆಯಾಗಿದ್ದಾನೆ. 2016-17 ನೇ ಸಾಲಿನಲ್ಲಿ 11, ಹಾಗೂ 17-18ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 5 ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ಖಾಸಗಿ ವಲಯದ ಉದ್ಯೋಗಗಳಲ್ಲಿ ನೇಮಕಾತಿ ಮಾಡುವುದನ್ನು ಉತ್ತೇಜಿಸಲು ಸರ್ಕಾರ ಆಶಾದೀಪ ಯೋಜನೆ ಜಾರಿಗೊಳಿಸಿದೆ. ಪ.ಜಾತಿ, ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡ ಸಂಸ್ಥೆಗಳು ಪಾವತಿಸುವ ನೌಕರರ ಇ.ಎಸ್.ಐ ಹಾಗೂ ಪಿ.ಎಫ್ ವಂತಿಕೆಯನ್ನು ಯೋಜನೆಯಡಿ ಮರು ಪಾವತಿಸಲಾಗುವುದು.
ಅಪ್ರೆಂಟಿಸ್ಗಳ ಶಿಷ್ಯವೇತನವನ್ನು ಸಹ ಉದ್ಯೋಗದಾತರಿಗೆ ಮರು ಪಾವತಿಸಲಾಗುವುದು. ಉದ್ದಿಮೆಗಳು ಇದರ ಪ್ರಯೋಜನ ಪಡೆದುಕೊಳ್ಳುವ ಕುರಿತು ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಆಶಾದೀಪ ಯೋಜನೆಯಡಿ ಜಿಲ್ಲೆಯಲ್ಲಿ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 24 ಫಲಾನುಭವಿಗಳನ್ನು ನೇಮಕ ಮಾಡಿರುವ ಒಟ್ಟು 3 ಸಂಸ್ಥೆಗಳಿಗೆ 1.58 ಲಕ್ಷ ರೂ. ಮರು ಪಾವತಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು. ಬಾಲಕಾರ್ಮಿಕರ ಬಗ್ಗೆ ದೂರು ಬಂದರೆ ಮಾತ್ರ ಕ್ರಮ ಕೈಗೊಂಡರೆ ಸಾಲದು, ಸ್ವಯಂಪ್ರೇರಿತರಾಗಿ ನಿರಂತರ ಪರಿಶೀಲನೆ ನಡೆಸುವ ಅಗತ್ಯವಿದೆ. ಇದಕ್ಕಾಗಿ ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸ್ಥಳೀಯಾಡಳಿತ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಸಹಾಯವಾಣಿಗೆ ಬರುವ ದೂರುಗಳನ್ನು ತಕ್ಷಣ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
30 ವರ್ಷದ ಬೇಡಿಕೆಗೆ ಸಿಕ್ಕಿಲ್ಲ ಕಿಮ್ಮತ್ತು; 2 ರಾಜ್ಯ ಹೆದ್ದಾರಿ ಸಂಪರ್ಕಿಸುವ ಗ್ರಾಮೀಣ ರಸ್ತೆಗಿಲ್ಲ ಡಾಂಬರೀಕರಣದ ಭಾಗ್ಯ
ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು 622 ತಪಾಸಣೆಗಳನ್ನು ನಡೆಸಲಾಗಿದೆ. 4 ಬಾಲ ಕಾರ್ಮಿಕರನ್ನು ಪತ್ತೆಹಚ್ಚಿ ಮೊಕದ್ದಮೆ ದಾಖಲಿಸಲಾಗಿದೆ. ಈ ವರ್ಷದದ ಮೊದಲ ಆರು ತಿಂಗಳ ಅವಧಿಯಲ್ಲಿ 106 ಕಡೆ ತಪಾಸಣಾ, ಪರಿಶೀಲನೆ ಕಾರ್ಯ ಕೈಗೊಳ್ಳಲಾಗಿದ್ದು, ಒಬ್ಬ ಬಾಲಕಾರ್ಮಿಕ ಪತ್ತೆಯಾಗಿದ್ದಾನೆ. 2016-17 ನೇ ಸಾಲಿನಲ್ಲಿ 11, ಹಾಗೂ 17-18ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 5 ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ಖಾಸಗಿ ವಲಯದ ಉದ್ಯೋಗಗಳಲ್ಲಿ ನೇಮಕಾತಿ ಮಾಡುವುದನ್ನು ಉತ್ತೇಜಿಸಲು ಸರ್ಕಾರ ಆಶಾದೀಪ ಯೋಜನೆ ಜಾರಿಗೊಳಿಸಿದೆ. ಪ.ಜಾತಿ, ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡ ಸಂಸ್ಥೆಗಳು ಪಾವತಿಸುವ ನೌಕರರ ಇ.ಎಸ್.ಐ ಹಾಗೂ ಪಿ.ಎಫ್ ವಂತಿಕೆಯನ್ನು ಯೋಜನೆಯಡಿ ಮರು ಪಾವತಿಸಲಾಗುವುದು.
ಅಪ್ರೆಂಟಿಸ್ಗಳ ಶಿಷ್ಯವೇತನವನ್ನು ಸಹ ಉದ್ಯೋಗದಾತರಿಗೆ ಮರು ಪಾವತಿಸಲಾಗುವುದು. ಉದ್ದಿಮೆಗಳು ಇದರ ಪ್ರಯೋಜನ ಪಡೆದುಕೊಳ್ಳುವ ಕುರಿತು ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಆಶಾದೀಪ ಯೋಜನೆಯಡಿ ಜಿಲ್ಲೆಯಲ್ಲಿ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 24 ಫಲಾನುಭವಿಗಳನ್ನು ನೇಮಕ ಮಾಡಿರುವ ಒಟ್ಟು 3 ಸಂಸ್ಥೆಗಳಿಗೆ 1.58 ಲಕ್ಷ ರೂ. ಮರು ಪಾವತಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ತಿಳಿಸಿದರು.