ಬೆಂಗಳೂರು (ಸೆಪ್ಟೆಂಬರ್ 11); ಪ್ರಸ್ತುತ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಜಾಲ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಬಂಧಿತ ಎಲ್ಲಾ ಆರೋಪಿಗಳು ಬಿಜೆಪಿ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂಬುದು ಕಾಂಗ್ರೆಸ್ ಆರೋಪವಾದರೆ, ಬಿಜೆಪಿ ಸಹ ಇದೇ ರೀತಿಯ ಆರೋಪವನ್ನು ಮುಂದಿಡುತ್ತಿದೆ. ಈ ಸಂಬಂಧ ಇಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಮತ್ತು ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, "ಯಡಿಯೂರಪ್ಪನವರೇ ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ" ಎಂದು ಹೇಳುವ ಮೂಲಕ ಆಡಳಿತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
.@CMofKarnataka ಅವರೇ,
ಡಿಜೆಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ,
ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿ ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ.
ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ?
4/6
— Siddaramaiah (@siddaramaiah) September 11, 2020
.@CMofKarnataka ಅವರೇ,
ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ.
ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ.
ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ.
5/6
— Siddaramaiah (@siddaramaiah) September 11, 2020
ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ @CMofKarnataka ಅವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು.
3/6
— Siddaramaiah (@siddaramaiah) September 11, 2020
ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು @BJP4Karnataka ಮಾಡುತ್ತಿದೆ.
ಇದನ್ನು @INCKarnataka ತೀವ್ರವಾಗಿ ಖಂಡಿಸುತ್ತದೆ.
2/6#DrugsMukthaKaranataka
— Siddaramaiah (@siddaramaiah) September 11, 2020
ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ @BJP4Karnataka ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ.
1/6#DrugsMuktaKarnataka
— Siddaramaiah (@siddaramaiah) September 11, 2020
ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ.
ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ.
ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ಹಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ.
6/6
— Siddaramaiah (@siddaramaiah) September 11, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ