• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Dr Ashwath Narayan: ಒಂದು ಮನೆ ನೂರು ಬಾಗಿಲಾಗಿದೆ; ಹೀನಾಯ ಸೋಲಿನ ಬಳಿಕ ಅಶ್ವತ್ಥ್ ನಾರಾಯಣ್ ಬೇಸರ

Dr Ashwath Narayan: ಒಂದು ಮನೆ ನೂರು ಬಾಗಿಲಾಗಿದೆ; ಹೀನಾಯ ಸೋಲಿನ ಬಳಿಕ ಅಶ್ವತ್ಥ್ ನಾರಾಯಣ್ ಬೇಸರ

ಡಾ ಸಿಎನ್ ಅಶ್ವತ್ಥ್ ನಾರಾಯಣ್

ಡಾ ಸಿಎನ್ ಅಶ್ವತ್ಥ್ ನಾರಾಯಣ್

ಕಳೆದೆರಡು ತಿಂಗಳಿಂದ ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಹೀನಾಯ ಸೋಲನ್ನಪ್ಪಿದೆ. ಇದರ ಬೆನ್ನಲ್ಲೇ ಮಾಜಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಮಾಧ್ತಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

  • News18 Kannada
  • 3-MIN READ
  • Last Updated :
  • Karnataka, India
  • Share this:

ಬೆಂಗಳೂರು: ಒಂದು ಮನೆ ನೂರು ಬಾಗಿಲಾಗಿದೆ, ಅವರೆಲ್ಲ (ಕಾಂಗ್ರೆಸ್‌) ಏನ್ ಮಾಡ್ತಾರೆ ನೋಡೋಣ ಎಂದು ಡಾ ಸಿಎನ್ ಅಶ್ವತ್ಥ್ ನಾರಾಯಣ್ (Dr CN Ashwath Narayan) ಹೇಳಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ (BJP) ಹೀನಾಯ ಸೋಲು ಕಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸೋಲಿನ ಪರಾಮರ್ಶೆ ಮಾಡುತ್ತೇವೆ ಎಂದು ಹೇಳಿದರು.


ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದಿದೆ, ಅವರಿಗೆ ಅಭಿನಂದನೆ ತಿಳಿಸ್ತೇನೆ ಎಂದ ಡಾ ಸಿಎನ್ ಅಶ್ವತ್ಥ್ ನಾರಾಯಣ್, ನಾವು ಜನರ ತೀರ್ಪನ್ನು ಸ್ವೀಕರಿಸಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ. ಸೋಲಿನ ಪರಾಮರ್ಶೆ ಮಾಡ್ತೇವೆ. ಸರ್ಕಾರ ಅಂತೂ ಉತ್ತಮವಾಗಿ ಕೆಲಸ ಮಾಡಿದೆ. ಕೋವಿಡ್ ಸವಾಲಾಗಿತ್ತು, ಯಶಸ್ವಿಯಾಗಿ ನಿಭಾಯಿಸಿದ್ದೆವು ಎಂದು ಹೇಳಿದರು.


ನಾವು ಮಾಡಿದ ಕೆಲಸಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಿಳಿಸುವಲ್ಲಿ ವಿಫಲ ಆಗಿದ್ದೀವಿ ಅನ್ಸುತ್ತೆ ಎಂದ ಅಶ್ವತ್ಥ್ ನಾರಾಯಣ್, ಆಡಳಿತ ವಿರೋಧಿ ಅಲೆಯೂ ಸೋಲಿಗೆ ಕಾರಣವಾಗಿರಬಹುದು ಎಂದರು. ಇನ್ನು, ಐದು ವರ್ಷ ಕಾಯ್ತೀರಾ, ಆಪರೇಷನ್ ಕಮಲ ಮಾಡ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ ಒಂದು ಮನೆ ನೂರು ಬಾಗಿಲಾಗಿದೆ. ಅವರು ಏನು ಮಾಡ್ತಾರೆ ನೋಡೋಣ. ಅವರಲ್ಲಿ ಯಾರು ಸಿಎಂ ಆಗ್ತಾರೆ ಅನ್ನೋದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.


ಮತಯಂತ್ರಗಳು ಭದ್ರ


ಮೇ 10ರಂದು ನಡೆದ ಮತದಾನದ ದಿನ ರಾಜ್ಯದ 37,777 ಪ್ರದೇಶದಲ್ಲಿ ಹಾಕಲಾಗಿದ್ದ 58,545 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದ 224 ಕ್ಷೇತ್ರಗಳ ಮತ ಯಂತ್ರಗಳನ್ನು ಚುನಾವಣಾ ಸಿಬ್ಬಂದಿ ಭದ್ರವಾಗಿ ಇಟ್ಟಿದ್ದು, ಸ್ಟ್ರಾಂಗ್‌ ರೂಂಗಳಲ್ಲಿ ಮೂರನೇ ಹಂತದ ಭದ್ರತೆಯನ್ನು ಮಂತ ಯಂತ್ರಗಳಿಗೆ ಒದಗಿಸಲಾಗಿದೆ. 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ 36 ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆಯಲಿದ್ದು, ಸಾವಿರಾರು ಸಿಬ್ಬಂದಿ ಚುನಾವಣಾ ಎಣಿಕೆ ವೇಳೆ ಕಾರ್ಯ ನಿರ್ವಹಿಸಲಿದ್ದಾರೆ.


ಇದನ್ನೂ ಓದಿ: Karnataka Election Results 2023 Live: ಕರ್ನಾಟಕ ಚುನಾವಣಾ ಫಲಿತಾಂಶ, ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬುಕ್‌ ಆಯ್ತು ಹೋಟೆಲ್‌ ರೂಂ


ಎಷ್ಟು ಅಭ್ಯರ್ಥಿಗಳು ಕಣದಲ್ಲಿ?


ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2615 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು, ಆ ಪೈಕಿ 2430 ಮಂದಿ ಪುರುಷ ಅಭ್ಯರ್ಥಿಗಳಾದ್ರೆ, 184 ಮಂದಿ ಮಹಿಳಾ ಅಭ್ಯರ್ಥಿಗಳು ಇದ್ದಾರೆ. ಜೊತೆಗೆ ಓರ್ವ ಲೈಂಗಿಕ ಅಲ್ಪಸಂಖ್ಯಾತ (ಟ್ರಾನ್ಸ್‌ಜೆಂಡರ್‌) ಸಮುದಾಯದ ಅಭ್ಯರ್ಥಿ ಇದ್ದಾರೆ. ಅಭ್ಯರ್ಥಿಗಳ ಪೈಕಿ ಬಿಜೆಪಿಯಿಂದ 224, ಕಾಂಗ್ರೆಸ್​ನಿಂದ 223, ಜೆಡಿಎಸ್​ನಿಂದ 209 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಇನ್ನು 918 ಮಂದಿ ಪಕ್ಷೇತರ ಅಭ್ಯರ್ಥಿಗಳಾದ್ರೆ, ಎಎಪಿ 209, ಸಿಪಿಐಎಂ 4, ಬಿಎಸ್​ಪಿ 133 ಹಾಗೂ ಎನ್​​ಸಿಪಿ ಇಬ್ಬರು ಅಭ್ಯರ್ಥಿಗಳನ್ನು ಕದನಕ್ಕೆ ಇಳಿಸಿದೆ.


ಖಾಕಿ ಸರ್ಪಗಾವಲು


ಇನ್ನು ರಾಜ್ಯಾದ್ಯಂತ ನಡೆಯುತ್ತಿರುವ ಚುನಾವಣಾ ಫಲಿತಾಂಶ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎನ್ನುವ ದೃಷ್ಟಿಯಿಂದ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಪ್ರತಿಯೊಂದು ಮತ ಎಣಿಕೆ ಕೇಂದ್ರಗಳಲ್ಲೂ ಅಸಂಖ್ಯ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ನಿನ್ನೆ ರಾತ್ರಿ 10ರಿಂದ ಇಂದು ರಾತ್ರಿ 12ರ ತನಕ ಮದ್ಯ ಮಾರಾಟವನ್ನು ನಿಷೇಧಿಲಾಗಿದ್ದು, ಮುಖ್ಯವಾಗಿ ಮತ ಎಣಿಕೆ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಹಾಕಲಾಗಿದ್ದು, ಮತ ಎಣಿಕೆ ಕೇಂದ್ರದ ಬಳಿ 5ಕ್ಕಿಂತ ಹೆಚ್ಚು ಜನ ಸೇರೋದು, ವಿಜಯೋತ್ಸವ, ಮೆರವಣಿಗೆ ಇನ್ನಿತರ ಸಮಾರಂಭಗಳನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಕೌಂಟಿಂಗ್ ಸೇರಿದಂತೆ ಚುನಾವಣೆ ಫಲಿತಾಂಶ ಕುರಿತ ಎಲ್ಲಾ ಮಾಹಿತಿಗಳು ಎಲ್ಲೆಲ್ಲಿ ಸಿಗುತ್ತೆ? ವಿವರಗಳಿಗೆ ಈ ಲಿಂಕ್ ಓಪನ್ ಮಾಡಿ


ಮತದಾನ ಆಗಿದ್ದು ಎಷ್ಟು?

top videos


    ಬುಧವಾರ (ಮೇ 10) ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಗೆ ಈ ಬಾರಿ ದಾಖಲೆಯ ಮತದಾನ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಈ ಹಿಂದಿನ ಚುನಾವಣೆಗೆ ಹೋಲಿಸಿದರೆ ಈ ಬಾರಿ 73.19% ಮತದಾನ ಆಗಿದ್ದು, ಇದು ಸಾರ್ವಕಾಲಿಕ ದಾಖಲೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಇರುವ 5.30 ಕೋಟಿ ಮತದಾರರಲ್ಲಿ 3.88 ಕೋಟಿ ಮತದಾರರು ಈ ಭಾರಿ ತಮ್ಮ ಹಕ್ಕು ಚಲಾಯಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 85.56% ಮತದಾನವಾಗಿ ರಾಜ್ಯದಲ್ಲೇ ಅತೀ ಹೆಚ್ಚು ಮತದಾನ ನಡೆದ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇತ್ತ ಬೆಂಗಳೂರು ದಕ್ಷಿಣದಲ್ಲಿ 52.33% ಮತದಾನವಾಗಿ ಅತೀ ಕಡಿಮೆ ಹಕ್ಕು ಚಲಾಯಿಸಿದ ಜಿಲ್ಲೆಗೆ ಗುರಿಯಾಗಿದೆ.

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು