• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Top-5 News: ಪಿಎಂ ಕೇರ್ಸ್ ಫಂಡ್​ಗೆ ಸುಧಾ ಮೂರ್ತಿ ನೇಮಕ, ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ; ಇಂದಿನ ಟಾಪ್‌ ನ್ಯೂಸ್ ಇಲ್ಲಿವೆ

Top-5 News: ಪಿಎಂ ಕೇರ್ಸ್ ಫಂಡ್​ಗೆ ಸುಧಾ ಮೂರ್ತಿ ನೇಮಕ, ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ; ಇಂದಿನ ಟಾಪ್‌ ನ್ಯೂಸ್ ಇಲ್ಲಿವೆ

ಈ ಸಂಜೆಯ ಪ್ರಮುಖ ಸುದ್ದಿಗಳು

ಈ ಸಂಜೆಯ ಪ್ರಮುಖ ಸುದ್ದಿಗಳು

ರಾಜ್ಯ, ದೇಶ, ವಿದೇಶದಲ್ಲಿ ಇಂದು ಏನೇನಾಯ್ತು? ರಾಜಕೀಯ, ಉದ್ಯೋಗ, ಕ್ರೀಡೆ, ಸಿನಿಮಾ ಕ್ಷೇತ್ರಗಳ ಅಪ್‌ಡೇಟ್ಸ್ ಏನು? ವಾಣಿಜ್ಯ ಕ್ಷೇತ್ರ ಹೇಗೆ ನಡೀತಿದೆ? ಸೀರಿಯಲ್‌ಗಳಲ್ಲಿ ಏನ್ ಆಗ್ತಿದೆ? ನೀವು ಓದದೇ ಮಿಸ್ ಮಾಡಿಕೊಂಡ ಈ ಸಂಜೆಯ ಬಿಸಿ ಬಿಸಿ ಸುದ್ದಿಗಳು ಇಲ್ಲಿವೆ ಓದಿ

  • Share this:

ಸುಧಾ ಮೂರ್ತಿ ಪಿಎಂ ಕೇರ್ಸ್ ಫಂಡ್​ಗೆ ನೇಮಕ


ದೇಶದ ತುರ್ತು ಪರಿಸ್ಥಿತಿಯಲ್ಲಿ ಸಹಾಯಕ್ಕೆಂದು ಪಿಎಂ ಕೇರ್ಸ್​ ಫಂಡ್ ಸೃಷ್ಟಿಸಲಾಗಿದೆ. ಇದೀಗ ರತನ್ ಟಾಟಾ ಅವರ ಜೊತೆ ಸುಧಾ ಮೂರ್ತಿ ಅವರನ್ನು ಈ ಟ್ರಸ್ಟ್​ಗೆ ನೇಮಿಸಲಾಗಿದೆ.ಪಿಎಂ ಕೇರ್ಸ್ ಫಂಡ್ ಟ್ರಸ್ಟಿಯಾಗಿ ರತನ್ ಟಾಟಾ, ಸಲಹಾ ಮಂಡಳಿಗೆ ಸುಧಾ ಮೂರ್ತಿ ನೇಮಕಗೊಂಡಿದ್ದಾರೆ. ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಟ್ರಸ್ಟಿಗಳನ್ನು ಪಿಎಂ ಕೇರ್ಸ್ ಫಂಡ್​ನ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸಲು ಸ್ವಾಗತಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಿಎಂ ಕೇರ್ಸ್ ಫಂಡ್​ ಇತರ ಟ್ರಸ್ಟಿಗಳಾಗಿದ್ದಾರೆ. ಪ್ರಧಾನಮಂತ್ರಿ ಕೇರ್ಸ್ ಫಂಡ್ ಟ್ರಸ್ಟ್ಗೆ ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಕೆ ಟಿ ಥಾಮಸ್, ಮಾಜಿ ಡೆಪ್ಯೂಟಿ ಸ್ಪೀಕರ್ ಕರಿಯಾ ಮುಂಡಾ ನಾಮನಿರ್ದೇಶನಗೊಂಡಿದ್ದಾರೆ.


ಇದನ್ನೂ ಓದಿ: Sudha Murthy: ಕನ್ನಡಿಗರಿಗೆ ಶುಭಸುದ್ದಿ! ಸುಧಾ ಮೂರ್ತಿ ಪಿಎಂ ಕೇರ್ಸ್ ಫಂಡ್​ಗೆ ನೇಮಕ


ಧಗಧಗನೇ ಉರಿಯುತ್ತಿದೆ ಇರಾನ್


ಹಿಜಾಬ್‌ ವಿರೋಧಿಸಿ ಇರಾನ್‌ನಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಮಹ್ಸಾ ಅಮಿನಿಯ ಹಿಜಾಬ್ ಧರಿಸದೆ ಬಂಧನಕ್ಕೊಳಗಾಗಿ ಸಾವನ್ನಪ್ಪಿದ ಬಳಿಕ ಇರಾನ್‌ನಲ್ಲಿ ಪ್ರತಿಭಟನೆಗಳು ಮತ್ತಷ್ಟು ಹಿಂಸಾಚಾರಕ್ಕೆ ತಿರುಗಿವೆ. ಟೆಹ್ರಾನ್‌ ನಗರದ ಉತ್ತರದ ಸಾರಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಹಿಳೆಯರು ತಮ್ಮ ಹಿಜಾಬ್‌ಗಳನ್ನು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದರು.


ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ


ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ರು. ಎಚ್​ಡಿಡಿ ಆರೋಗ್ಯ ವಿಚಾರಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವ್ರು ಸಂಪುಟ ಸಚಿವರ ಜೊತೆ ಪದ್ಮನಾಭನಗರದಲ್ಲಿರೋ ನಿವಾಸಕ್ಕೆ ಭೇಟಿ ನೀಡಿದ್ರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಬೊಮ್ಮಾಯಿ ಜೊತೆಗೆ ಸಚಿವರಾದ ಆರ್. ಅಶೋಕ್, ಸೋಮಣ್ಣ, ಭೈರತಿ ಬಸವರಾಜ, ಮುನಿರತ್ನ, ಮಾಧುಸ್ವಾಮಿ ಹಾಗೂ ಆನಂದ್ ಸಿಂಗ್ ಸೇರಿ ಹಲವು ಸಚಿವರು ಆಗಮಿಸಿದ್ದರು.


ಇದನ್ನೂ ಓದಿ; HDD-Basavaraj Bommai: ದೇವೇಗೌಡರ ಮನೆಗೆ ಬಸವರಾಜ ಬೊಮ್ಮಾಯಿ ಭೇಟಿ; ಯಜಮಾನರೇ ನೀವು ಈಗ್ಲೂ ಮುದ್ದೆನೇ ತಿಂತೀರಾ ಎಂದು ಕೇಳಿದ ಸಿಎಂ


ಬೆಂಗಳೂರಿನ ಗೋಡೆ ಮೇಲೆ ಪೇಸಿಎಂ ಪೋಸ್ಟರ್


ಇಂದು ಬೆಂಗಳೂರಿನ ಗೋಡೆಗಳ ಮೇಲೆ ಪೇ ಸಿಎಂ ಎಂಬ ಪೋಸ್ಟರ್ (PAY CM Poster) ಅಂಟಿಸಲಾಗಿದೆ. ಪೇಸಿಎಂ ಪೋಸ್ಟರ್​​ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರ ಫೋಟೋ ಸಹ ಹಾಕಲಾಗಿದೆ. ಹೈದರಾಬಾದ್ ಘಟನೆ ಬಳಿಕ ಮುಖ್ಯಮಂತ್ರಿಗಳಿಗೆ ಭಾರೀ ಮುಜುಗರ ಉಂಟಾಗಿದೆ. ನಗರದ ಮೇಕ್ರಿ ಸರ್ಕಲ್ ಮತ್ತು ಸಿಎಂ ಬೊಮ್ಮಾಯಿ ಅವರ ನಿವಾಸದ ವ್ಯಾಪ್ತಿಯಲ್ಲಿಯೇ ಈ ಪೋಸ್ಟರ್​​ಗಳನ್ನು ಅಂಟಿಸಲಾಗಿದೆ. ಈ ಕ್ಯೂಆರ್​ ಕೋಡ್ ಸ್ಕ್ಯಾನ್ ಮಾಡಿದ್ರೆ ಕಾಂಗ್ರೆಸ್ ಖಾತೆ ಓಪನ್ ಆಗುತ್ತದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಮತ್ತೊಂದು ಹಂತಕ್ಕೆ ಹೋರಾಟಕ್ಕೆ ಮುಂದಾಗಿದೆ. ಇದರ ಭಾಗವಾಗಿಯೇ ಕಾಂಗ್ರೆಸ್ ಈ ಪೋಸ್ಟರ್​ಗಳನ್ನು ಅಂಟಿಸಿದೆ.


ಸೈಮಾ ಪಾರ್ಟಿಯಲ್ಲಿ ಮೈಮರೆತ ಸೆಲೆಬ್ರಿಟಿಗಳು! FIR ದಾಖಲು


ಸೈಮಾ ಅವಾರ್ಡ್ಸ್ ಫಂಕ್ಷನ್ ನಂತರ ಸೈಮಾ ಪಾರ್ಟಿಯೂ ಜೋರಾಗಿ ನಡೆಯುತ್ತದೆ. ಈ ಬಾರಿ ಬೆಳಗಿನ ಮೂರು ಗಂಟೆಯ ತನಕ ಪಾರ್ಟಿ ನಡೆದಿದ್ದು ಈಗ ಎಫ್​​ಐಆರ್ ದಾಖಲಿಸಲಾಗಿದೆ. ಅಂತೂ ಇಂತೂ ಅದ್ಧೂರಿ ಸೈಮಾ 2022 ಅವಾರ್ಡ್ ಕಾರ್ಯಕ್ರಮಕ್ಕೆ ಸಿಲಿಕಾನ್ ಸಿಟಿ ಸಾಕ್ಷಿಯಾಗಿದೆ. ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಕಾರ್ಯಕ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. 10ನೇ ಅವಾರ್ಡ್ ಕಾರ್ಯಕ್ರಮ ಆಗಿದ್ದ ಕಾರಣ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ಅವರಿಗೆ ಇದನ್ನು ಅರ್ಪಣೆ ಮಾಡಲಾಗಿತ್ತು.

Published by:ಪಾವನ ಎಚ್ ಎಸ್
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು