ಬೆಂಗಳೂರು (ಮಾರ್ಚ್ 14); ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ ಶಿವಸೇನೆ ಮತ್ತು ಎಂಎಸ್ಇ ಪುಂಡದ ಪುಂಡಾಟ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕನ್ನಡಿಗರು ಮತ್ತು ಕನ್ನಡ ಪರ ಹೋರಾಟಗಾರರ ಮೇಲೆ ಆಗಿಂದಾಗ್ಗೆ ಹಲ್ಲೆಗಳು ನಡೆಯುತ್ತಿರುವ ಕುರಿತು ಪ್ರತಿದಿನ ವರದಿಯಾಗುತ್ತಲೇ ಇದೆ. ಇದೇ ಕಾರಣಕ್ಕೆ ಕಳೆದ ಶುಕ್ರವಾರ ಕನ್ನಡಪರ ಹೋರಾಟಗಾರರ ಬೆಳಗಾವಿಯಲ್ಲಿ ಮರಾಠಿ ಅಕ್ಷರದ ಫಲಕಗಳಿಗೆ ಮಸಿ ಬಳಿದು ಪ್ರತಿಭಟಿಸಿದ್ದರು. ಒಟ್ಟಾರೆ ಬೆಳಗಾವಿಯಲ್ಲಿ ಕನ್ನಡ-ಮರಾಠಿ ಜಗಳ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿ ಟ್ವೀಟ್ ಮೂಲಕ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮರಾಠಿಗರ ವರ್ತನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ.
2/6
— H D Kumaraswamy (@hd_kumaraswamy) March 14, 2021
ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ. ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ.
4/6
— H D Kumaraswamy (@hd_kumaraswamy) March 14, 2021
ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ" ಎಂದಿದ್ದಾರೆ.
ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ?
6/6
— H D Kumaraswamy (@hd_kumaraswamy) March 14, 2021
ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು" ಸೂಚಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ