ಬೆಂಗಳೂರು(ಆ.14): ಡಿ.ಜೆ ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇದೆ ಎಂದು ಮಾಜಿ ಸಚಿವ ಜಮೀರ್ ಅಹಮದ್ ಗಂಭೀರ ಆರೋಪ ಎಸಗಿದ್ದಾರೆ ಎಂಬ ಚರ್ಚೆ ನಡೆಯುತ್ತಿತ್ತು. ಆದರೀಗ, ಈ ಆರೋಪವನ್ನು ಸ್ವತಃ ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ. ಮಾಧ್ಯಮದಲ್ಲಿ ಹೀಗೆ ವರದಿ ಮಾಡಿದ ಸುದ್ದಿ ಸತ್ಯಕ್ಕೆ ದೂರ ಎಂದು ಟ್ವೀಟ್ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಚಿವ ಜಮೀರ್ ಅಹಮದ್, ಹಲವು ವರ್ಷಗಳಿಂದ ಸಂಪತ್ ಅವರು ನನಗೆ ಪರಿಚಿತರು. ಅವರು ನಮ್ಮ ಪಕ್ಷದ ಕಾರ್ಪೊರೇಟರ್ ಕೂಡ ಹೌದು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ವರದಿಗಳು ವಸ್ತುನಿಷ್ಠ ಮತ್ತು ನ್ಯಾಯಯುತವಾಗಿರಬೇಕು. ಸುಳ್ಳು ಸುದ್ದಿಗಳಿಂದ ಆ ಘನತೆಗೆ ಧಕ್ಕೆಯಾಗುತ್ತದೆ ಎಂದು ಬರೆದುಕೊಂಡಿದ್ಧಾರೆ.
ಹಲವು ವರ್ಷಗಳಿಂದ ಸಂಪತ್ ಅವರು ನನಗೆ ಪರಿಚಿತರು. ಅವರು ನಮ್ಮ ಪಕ್ಷದ ಕಾರ್ಪೊರೇಟರ್ ಕೂಡ ಹೌದು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ವರದಿಗಳು ವಸ್ತುನಿಷ್ಠ ಮತ್ತು ನ್ಯಾಯಯುತವಾಗಿರಬೇಕು. ಸುಳ್ಳು ಸುದ್ದಿಗಳಿಂದ ಆ ಘನತೆಗೆ ಧಕ್ಕೆಯಾಗುತ್ತದೆ.
— B Z Zameer Ahmed Khan (@BZZameerAhmedK) August 13, 2020
ನಿನ್ನೆಯ ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ನಮ್ಮ ಪಕ್ಷದ ಮುಖಂಡರಾದ ಸಂಪತ್ ಅವರ ಕೈವಾಡವಿದೆ ಎಂದು ನಾನು ಕೆಲವರ ಬಳಿ ಹೇಳಿದ್ದೇನೆ ಎಂಬ ಸುಳ್ಳು ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಮಾಧ್ಯಮಗಳಿಗೆ ನನ್ನದೊಂದು ಮನವಿ, ದಯವಿಟ್ಟು ಕಲ್ಪಿತ ವರದಿಗಳನ್ನು ಪ್ರಸಾರ ಮಾಡಿ ಜನರಿಗೆ ತಪ್ಪು ಸಂದೇಶ ನೀಡಬೇಡಿ.
— B Z Zameer Ahmed Khan (@BZZameerAhmedK) August 13, 2020
ಇದನ್ನೂ ಓದಿ: ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಬಂಧನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ