• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು; ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಆಗ್ರಹ

ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು; ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಆಗ್ರಹ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಪ್ರತಿ ಯೂನಿಟ್​​ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಟ್ವಿಟರ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

  • Share this:

ಬೆಂಗಳೂರು(ನ.05): ಕೊರೋನಾ ಬಿಕ್ಕಟ್ಟಿನ ನಡುವೆ ರಾಜ್ಯ ಸರ್ಕಾರವು  ವಿದ್ಯುತ್ ದರ ಏರಿಕೆ ಮಾಡಿರುವುದು ಜನಸಾಮಾನ್ಯರ ಮೇಲೆ ಬರೆ ಹಾಕಿದಂತಾಗಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸಿರುವ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ದರ ಏರಿಕೆ ನಿರ್ಧಾರವನ್ನು ಮುಂದೂಡುವಂತೆ ಆಗ್ರಹಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿದ್ದಾರೆ.  ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು.  ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಸಲಹೆ ನೀಡಿದ್ದಾರೆ.



ಪ್ರತಿ ಯೂನಿಟ್​​ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಟ್ವಿಟರ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.





ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಇಆರ್​​ಸಿ) ವಿದ್ಯುತ್​ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನರಿಗೆ ಶಾಕ್ ನೀಡಿದೆ. ಸರ್ಕಾರದ ಆದೇಶದಂತೆ ಈ ಪರಿಷ್ಕೃತ ದರವು ನವೆಂಬರ್ 1ರಿಂದಲೇ ಅನ್ವಯವಾಗಿದೆ.


ನೋಯ್ಡಾ: ಅಪಾರ್ಟ್​​ಮೆಂಟ್​​ನಲ್ಲಿ ದಂಪತಿಯ ಶವ ಪತ್ತೆ; ಕೊಲೆ ಶಂಕೆ


ಈ ವರ್ಷ ಮಾರ್ಚ್​ ತಿಂಗಳಿನಲ್ಲೇ ವಿದ್ಯುತ್ ದರ ಏರಿಕೆಯಾಗಬೇಕಿತ್ತು. ಆದರೆ ಮಾರಕ ಕೊರೋನಾ ದೇಶಕ್ಕೆ ಕಾಲಿಟ್ಟಿದ್ದರಿಂದ ಈ ಬಿಕ್ಕಟ್ಟಿನ ಕಾರಣದಿಂದಾಗಿ ವಿದ್ಯುತ್ ದರ ಏರಿಕೆ ಕ್ರಮವನ್ನು ಮುಂದೂಡಲಾಗಿತ್ತು. ಆದರೆ ಈಗ ಕೆಇಆರ್​ಸಿ ವಿದ್ಯುತ್ ದರ ಏರಿಕೆ ಮಾಡಿದೆ. ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳ ಮಾಡಿದ್ದು, ಜನರಿಗೆ ಬರೆ ಹಾಕಿದೆ.


ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರು ಆರ್ಥಿಕ ಸಂಕಷ್ಟದಲ್ಲಿರುವಾಗ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

top videos
    First published: