• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ

Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ

ಕೆ ಎಸ್ ಈಶ್ವರಪ್ಪ

ಕೆ ಎಸ್ ಈಶ್ವರಪ್ಪ

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪ್ರತಿಯೊಂದು ವಿಷಯಕ್ಕೂ ಪ್ರಧಾನಿ ಮೋದಿ (PM Modi) ಹಾಗೂ ಸಿಎಂ ಬೊಮ್ಮಾಯಿ (CM Bommai) ಬಗ್ಗೆ ಮಾತನಾಡುತ್ತಾರೆ. ಯಾಕೆ ಈ ಆರೋಪಗಳ ಬಗ್ಗೆ ಇಬ್ಬರೂ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

  • Share this:

ಬಳ್ಳಾರಿ: ಕಾಂಗ್ರೆಸ್​ ಪಕ್ಷ (Congress Party) ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರೇ (Freedom Fighters) ಹೊರತು ಡಿಕೆ ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯ (Siddaramaiah) ಅಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (Former Minister KS Eshwarappa) ಹೇಳಿದ್ದಾರೆ. ಬಳ್ಳಾರಿಯಲ್ಲಿ (Ballary) ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರದ್ದು ಎನ್ನಲಾದ ಆಡಿಯೋ ಬಿಡುಗಡೆ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಪ್ರಕರಣದ ತನಿಖೆಯನ್ನು ಸಿಬಿಐಗೆ (CBI Investigation) ನೀಡಬೇಕು ಎಂದು ಆಗ್ರಹಿಸಿದ್ದಾರೆ. ಆಡಿಯೋ ಬಿಡುಗಡೆ ವೇಳೆ ರಮೇಶ್ ಜಾರಕಿಹೊಳಿ ಹಲವು ಆರೋಪಗಳನ್ನು ಮಾಡಿದ್ದಾರೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪ್ರತಿಯೊಂದು ವಿಷಯಕ್ಕೂ ಪ್ರಧಾನಿ ಮೋದಿ (PM Modi) ಹಾಗೂ ಸಿಎಂ ಬೊಮ್ಮಾಯಿ (CM Bommai) ಬಗ್ಗೆ ಮಾತನಾಡುತ್ತಾರೆ. ಯಾಕೆ ಈ ಆರೋಪಗಳ ಬಗ್ಗೆ ಇಬ್ಬರೂ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.


ಸಿಬಿಐ ತನಿಖೆ ಆಗ್ರಹದ ಕುರಿತು ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ. ಇದೇ ವೇಳೆ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಕೇಸ್​ಗೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ನ್ಯಾಯಾಲಯ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ. ಈಗಾಗಲೇ ಪೊಲೀಸ್ ಇಲಾಖೆ ದಾಖಲೆಗಳನ್ನು ಸಲ್ಲಿಸಿದೆ ಎಂದು ಹೇಳಿದರು.


ಕೇಂದ್ರದಿಂದ ಆಂತರಿಕ ಸಮೀಕ್ಷೆ


ಹೈಕಮಾಂಡ್​​ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಆಂತರಿಕ ಸಮೀಕ್ಷೆ ನಡೆಸುತ್ತದೆ. ಈ ವರದಿ ಆಧರಿಸಿ ಟಿಕೆಟ್ ನೀಡಲಾಗುತ್ತದೆ. ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯದ ಮೇಲೆಯೂ ಟಿಕೆಟ್ ಹಂಚಿಕೆಯಾಗಲಿದೆ ಎಂದು ಈಶ್ವರಪ್ಪ ಮಾಹಿತಿ ನೀಡಿದರು.


ಹಿಂದುತ್ವದ ಮೇಲೆ ಯಾಕೆ ಪ್ರೀತಿ ಬಂತು?


ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಹಿಂದುತ್ವದ ಗಾಳಿ ಬೀಸುತ್ತಿದೆ. ಸದ್ಯ ಹಿಂದೂ ರಾಷ್ಟ್ರೀಯತೆ ನಡೆಯುತ್ತಿದ್ದು, ಎಲ್ಲಾ ಜಾತಿವಾದಿಗಳು ಸೋತು ಹಾಳಾಗಿ ಹೋಗುತ್ತಿದ್ದಾರೆ. ಸೋಲಿನ ಭಯ ಕಾಡುತ್ತಿರೋದರಿಂದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಾನು ಹಿಂದೂ ಎಂದು ಹೇಳುತ್ತಿದ್ದಾರೆ. ಈಗ ಇವರಿಗೆ ಯಾಕೆ ಹಿಂದುತ್ವದ ಮೇಲೆ ಪ್ರೀತಿ ಬಂದಿದೆ ಎಂದು ಟೀಕೆ ಮಾಡಿದರು.




ಜಾರಕಿಹೊಳಿ ಆರೋಪಕ್ಕೆ ಡಿಕೆಶಿ ತಿರುಗೇಟು


ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಸುದ್ದಿಗೋಷ್ಠಿಯ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಪಾಪ ಅವರು ಫಸ್ಟ್ರೇಷನ್ ಆಗಿದ್ದಾರೆ. ರಮೇಶ್ ಜಾರಕಿಹೊಳಿಮಂತ್ರಿ ಆಗಬೇಕಿತ್ತು, ಆದರೆ ಅವರ ಪಾರ್ಟಿ ಸಂಪುಟದಲ್ಲಿ (Cabinet) ಸ್ಥಾನ ಕೊಡಲಿಲ್ಲ. ಅವರ ಪಕ್ಷದವರು ರಮೇಶ್ ಜಾರಕಿಹೊಳಿ ಅವರನ್ನು ಆಸ್ಪತ್ರೆಗೆ ತೋರಿಸಬೇಕಿದೆ. ಚುನಾವಣೆಯಲ್ಲಿ ನೋಡೋಣ ಎಂದು ಹೇಳಿದ್ದಾರೆ. ಅವರಿಗೆ ಒಳ್ಳೆಯದು ಆಗಲಿ ಎಂದರು.


ಇದನ್ನೂ ಓದಿ:  Ramesh Jarkiholi: "ರಮೇಶ್ ಜಾರಕಿಹೊಳಿ ಎಷ್ಟು ಚೆನ್ನಾಗಿ ವಾಟ್ಸಾಪ್ ಯೂಸ್ ಮಾಡ್ತಾರೆ ಅಂತ ಜನಕ್ಕೆ ಗೊತ್ತು" -ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ತಿರುಗೇಟು


ಕಾಂಗ್ರೆಸ್​ನ 'ವಿಷ ಕನ್ಯೆ' ಬಗ್ಗೆ ಪ್ರಸ್ತಾಪಿಸಿದ ರಮೇಶ್ ಜಾರಕಿಹೊಳಿ


ತಮ್ಮನ್ನು ಸಿ.ಡಿ ಪ್ರಕರಣದಲ್ಲಿ (CD Case) ಸಿಲುಕಿಸಿದ್ದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (KPCC President DK Shivakumar) ಅಂಡ್​ ಕಂಪನಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಎಂದು ಆರೋಪಿಸಿದ್ದಾರೆ. ಅಲ್ಲದೆ, ಸಿ.ಡಿಯನ್ನು ಇಟ್ಟುಕೊಂಡು ನನಗೆ ಬ್ಲ್ಯಾಕ್​ ಮೇಲ್​ ಮಾಡಲು ಮುಂದಾಗಿದ್ದರು.


ನಾನು ಅಂದು ಒಪ್ಪಿಕೊಂಡಿದ್ದರೆ ಸಿ.ಡಿ ಬಿಡುಗಡೆ ಆಗುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಬೆಳಗಾವಿ (Belagavi) ಖಾಸಗಿ ಹೋಟೆಲ್​​ನಲ್ಲಿ ಸುದ್ದಿಗೋಷ್ಠಿ ನಡೆಸಿ ಸವಿವರವಾಗಿ ಮಾತನಾಡಿದ್ದಾರೆ. ನಾನು ಸಹಕಾರಿ ಸಚಿವನಾಗಿದ್ದ ವೇಳೆ ಶಾಂತಿನಗರ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ (Shanthinagar Housing Co Operative Society) ಕೇಸ್​ನಲ್ಲಿ ಫೈಲ್ ಕ್ಲೀಯರ್ ಮಾಡಲಿಲ್ಲ ಎಂದು ನನ್ನ ವಿರುದ್ಧ ಇಷ್ಟೆಲ್ಲಾ ಷಡ್ಯಂತರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Published by:Mahmadrafik K
First published: