ಬೆಂಗಳೂರು (ಅ. 2): ಶಾಂತಿ, ಅಹಿಂಸೆಗಳ ಹರಿಕಾರನೆಂದೇ ಕರೆಯಲ್ಪಡುವ, ದೇಶದ ಜನರಿಂದ ಬಾಪೂಜಿ ಎಂದು ಕರೆಯಲ್ಪಟ್ಟ ಮಹಾತ್ಮ ಗಾಂಧೀಜಿ ಹುಟ್ಟಿದ ದಿನ ಇಂದು. ಗಾಂಧೀಜಿಯ ಜೀವನವೇ ಒಂದು ಸಂದೇಶವಾಗಿದ್ದು, ಅವರ ಹೆಸರು ಭಾರತೀಯರ ಮನಸಿನಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿದೆ. ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅಹಿಂಸಾ ಮಾರ್ಗದಲ್ಲಿ ಹೋರಾಟ ಮಾಡಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ದೇಶದ ಹಲವು ಗಣ್ಯರು ಅವರನ್ನು ನೆನಪಿಸಿಕೊಂಡಿದ್ದಾರೆ.
1869ರ ಅಕ್ಟೋಬರ್ 2ರಂದು ಗುಜರಾತ್ನ ಪೋರಬಂದರಿನಲ್ಲಿ ಹುಟ್ಟಿದ ಮೋಹನದಾಸ್ ಕರಮಚಂದ ಗಾಂಧಿ ಮುಂದೆ ಮಹಾತ್ಮ ಎಂದು ಕರೆಯಲ್ಪಟ್ಟರು. ಕಸ್ತೂರ ಬಾ ಅವರನ್ನು ಮದುವೆಯಾಗಿದ್ದ ಗಾಂಧೀಜಿ ಭಾರತದಲ್ಲಿ ಮಾತ್ರವಲ್ಲದೆ ದಕ್ಷಿಣ ಆಫ್ರಿಕಾದಲ್ಲೂ ವರ್ಣಭೇದ ನೀತಿಯ ವಿರುದ್ಧ ಹೋರಾಡಿ, ಮನೆಮಾತಾದರು. ಇದೇ ಕಾರಣಕ್ಕೆ ದಕ್ಷಿಣ ಆಫ್ರಿಕಾದಲ್ಲಿಯೂ ಅನೇಕ ಕಡೆ ಗಾಂಧೀಜಿಯವರ ಪುತ್ಥಳಿಗಳನ್ನು ನಿರ್ಮಿಸಲಾಗಿದೆ.
We bow to beloved Bapu on Gandhi Jayanti.
There is much to learn from his life and noble thoughts.
May Bapu’s ideals keep guiding us in creating a prosperous and compassionate India. pic.twitter.com/wCe4DkU9aI
— Narendra Modi (@narendramodi) October 2, 2020
ಸತ್ಯ, ಅಹಿಂಸೆಗಳ ನಂದಾದೀಪದ ಬೆಳಕಿನಲ್ಲಿ ಸತ್ಯಾಗ್ರಹದ ದಾರಿಯಲ್ಲಿ ನಡೆದು, ಭಾರತಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜಯಂತಿಯಂದು ಅವರಿಗೆ ನಮ್ಮ ಅನಂತ ಪ್ರಣಾಮಗಳನ್ನು ಸಲ್ಲಿಸೋಣ. ಸ್ವಚ್ಛತೆ, ಸ್ವಾವಲಂಬಿತ್ವಗಳ ಪ್ರತಿಪಾದಕರಾಗಿದ್ದ ಗಾಂಧೀಜಿಯವರ ಕನಸನ್ನು ನನಸು ಮಾಡುವ ಸಂಕಲ್ಪ ತೊಡೋಣ.#GandhiJayanti pic.twitter.com/Y5ia8KHL0M
— B.S. Yediyurappa (@BSYBJP) October 2, 2020
ಸತ್ಯ, ಅಹಿಂಸೆ, ನೈತಿಕತೆ ಮತ್ತು ಸರಳತೆಯ ಹಾದಿ ಸುಗಮ ಅಲ್ಲ, ಮಹಾತ್ಮಗಾಂಧೀಜಿಯವರು ಆ ಹಾದಿಯಲ್ಲಿ ನಡೆದು ಗುರಿ ಮುಟ್ಟಬಹುದೆಂದು ತೋರಿಸಿಕೊಟ್ಟಿದ್ದಾರೆ.
ನಾವೂ ಗಾಂಧಿ ಮಾರ್ಗದ ಪಥಿಕರಾಗೋಣ ಎಂದು ಗಾಂಧಿ ಜಯಂತಿಯ ಸಂದರ್ಭದಲ್ಲಿ ಶಪಥ ಮಾಡೋಣ. pic.twitter.com/AP5QvHXVaD
— Siddaramaiah (@siddaramaiah) October 2, 2020
ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗಕೆ ಹೊಸ ಹೊಳಹು ನೀಡಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸರಳ ವ್ಯಕ್ತಿತ್ವ, ದೃಢ ನಿರ್ಧಾರದ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜನ್ಮ ದಿನದ ಶುಭಾಶಯಗಳು.
1/3
— H D Kumaraswamy (@hd_kumaraswamy) October 2, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ