ದಸರಾ ಸಂಭ್ರಮ 2019: ಗೋಲ್ಡನ್ ಸ್ಟಾರ್ ಗಣೇಶ್ರಿಂದ ಈ ಬಾರಿ ಯುವ ದಸರಾ ಉದ್ಘಾಟನೆ
ದಸರಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಕಾರ್ಯಕ್ರಮದ ಮೊದಲ ಪೋಸ್ಟರ್ನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಈ ಕಾರ್ಯಕ್ರಮವನ್ನು ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ರಿಂದ ಉದ್ಘಾಟನೆ ಮಾಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
Seema.R Updated:September 11, 2019, 2:35 PM IST

ನಟ ಗಣೇಶ್
- News18 Kannada
- Last Updated: September 11, 2019, 2:35 PM IST
ಮೈಸೂರು (ಸೆ.11): ಸಾಂಸ್ಕೃತಿಕ ನಗರಿಯಲ್ಲಿ ದಿನದಿಂದ ದಿನಕ್ಕೆ ದಸರಾ ಸಂಭ್ರಮ ಹೆಚ್ಚುತ್ತಿದ್ದು, ದಸರಾ ಕಾರ್ಯಕ್ರಮಗಳ ಆಯೋಜನೆಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಇನ್ನು ದಸರಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಕಾರ್ಯಕ್ರಮದ ಮೊದಲ ಪೋಸ್ಟರ್ನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಈ ಕಾರ್ಯಕ್ರಮವನ್ನು ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ರಿಂದ ಉದ್ಘಾಟನೆ ಮಾಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಇಂದು ಯುವ ದಸರೆಯ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರಾದ ಸಿ.ಟಿ.ರವಿ, ವಿ.ಸೋಮಣ್ಣ ಸೆ. 17ರಿಂದ 25ರವರೆಗೆ ಯುವ ದಸರಾ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರಿನ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮ ನಡೆಯಲಿದ್ದು,ಪ್ರತಿ ದಿನ ಸಂಜೆ 5:30 ರಿಂದ ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಯುವ ದಸರಾ ಕಾರ್ಯಕ್ರಮದಲ್ಲಿ 278 ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಕಿರು ನಾಟಕ, ಮೈಮ್, ನೃತ್ಯ, ಭರತನಾಟ್ಯ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇನ್ನು ಈ ಬಾರಿ ಉತ್ತರ ಕರ್ನಾಟಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ದೂರದ ಊರು, ಹೊರ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಪಿವಿ ಸಿಂಧು ಬದಲು ನಟ ಗೋಲ್ಡನ್ ಸ್ಟಾರ್ ಗಣೇಶ್ ಈ ಹಿಂದೆ ಯುವ ದಸರಾ ಉದ್ಘಾಟನೆಗೆ ಚಿನ್ನದ ಹುಡುಗಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರನ್ನು ಆಹ್ವಾನಿಸಲಾಗಿತ್ತು. ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತವಾಗಿ ಸಿಂಧು ಅವರಿಗೆ ಆಹ್ವಾನ ನೀಡಿದ್ದರು. ಸಿಂಧು ಅವರು ಟೂರ್ನಿಮೆಂಟ್ ಇರುವುದರಿಂದ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾಗಿಯಾಗಲು ಸಾಧ್ಯವಿಲ್ಲ. ಯುವ ದಸರಾ ನಡೆಯುವ ದಿನದೊಳಗೆ ಒಮ್ಮೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದ್ದರು.
ಇನ್ನು ದಸರಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಕಾರ್ಯಕ್ರಮದ ಮೊದಲ ಪೋಸ್ಟರ್ನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಈ ಕಾರ್ಯಕ್ರಮವನ್ನು ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ರಿಂದ ಉದ್ಘಾಟನೆ ಮಾಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಇಂದು ಯುವ ದಸರೆಯ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರಾದ ಸಿ.ಟಿ.ರವಿ, ವಿ.ಸೋಮಣ್ಣ ಸೆ. 17ರಿಂದ 25ರವರೆಗೆ ಯುವ ದಸರಾ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಯುವ ದಸರಾ ಪೋಸ್ಟರ್
ಮೈಸೂರಿನ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮ ನಡೆಯಲಿದ್ದು,ಪ್ರತಿ ದಿನ ಸಂಜೆ 5:30 ರಿಂದ ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಯುವ ದಸರಾ ಕಾರ್ಯಕ್ರಮದಲ್ಲಿ 278 ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಕಿರು ನಾಟಕ, ಮೈಮ್, ನೃತ್ಯ, ಭರತನಾಟ್ಯ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇನ್ನು ಈ ಬಾರಿ ಉತ್ತರ ಕರ್ನಾಟಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ದೂರದ ಊರು, ಹೊರ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಪಿವಿ ಸಿಂಧು ಬದಲು ನಟ ಗೋಲ್ಡನ್ ಸ್ಟಾರ್ ಗಣೇಶ್
Loading...
Loading...