• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಸಾರ್ವಜನಿಕರು, ಸಚಿವರು, ಅಧಿಕಾರಿಗಳು, ವಿಪಕ್ಷಗಳ ವಿರೋಧ; ರಾತ್ರಿ ಕರ್ಫ್ಯೂ ಹಿಂಪಡೆದ ಸರ್ಕಾರ

ಸಾರ್ವಜನಿಕರು, ಸಚಿವರು, ಅಧಿಕಾರಿಗಳು, ವಿಪಕ್ಷಗಳ ವಿರೋಧ; ರಾತ್ರಿ ಕರ್ಫ್ಯೂ ಹಿಂಪಡೆದ ಸರ್ಕಾರ

ಸಿಎಂ ಬಿಎಸ್ ಯಡಿಯೂರಪ್ಪ.

ಸಿಎಂ ಬಿಎಸ್ ಯಡಿಯೂರಪ್ಪ.

ಸರ್ಕಾರದ ಈ ಅಸ್ಪಷ್ಟ ನಿರ್ಧಾರಕ್ಕೆ  ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ. ಸಂಪುಟ ಸಹೋದ್ಯೋಗಿಗಳು, ಹಿರಿಯ ಅಧಿಕಾರಿಗಳು ಸಹ ವಿರೋಧ ವ್ಯಕ್ತಪಡಿಸಿದ್ದರು. ಇದರ ಜೊತೆಗೆ ವಿಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಸರ್ಕಾರ ಹಿಂಪಡೆದಿದೆ.

  • Share this:

ಬೆಂಗಳೂರು; ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ  ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ  ರಾತ್ರಿ ಕರ್ಫ್ಯೂ  ಅಗತ್ಯವಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.


ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು,  ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದ್ದಾರೆ.


ಇದನ್ನು ಓದಿ: ಜ.15ಕ್ಕೆ ಎರಡು ದಿನಗಳ ಕಾಲ ಅಮಿತ್ ಶಾ ರಾಜ್ಯ ಪ್ರವಾಸ; ಭೇಟಿ ವೇಳೆ ಸಂಪುಟ ಪುನಾರಚನೆ ಚರ್ಚೆ




ರೂಪಾಂತರ ಹೊಂದಿದ ವೈರಸ್ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಎರಡು ದಿನಗಳ ಹಿಂದೆ ಇದೇ ಡಿಸೆಂಬರ್ 24ರಿಂದ ಜನವರಿ 1ರವರೆಗೆ ರಾತ್ರಿ 10ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿ ಮಾಡಿತ್ತು. ಕರ್ಫ್ಯೂ ಸಂಬಧ ಸರ್ಕಾರ ನೆನ್ನೆ ಎರಡು ಬಾರಿ ನಿರ್ಧಾರ ಬದಲಿಸಿತ್ತು. ಸರ್ಕಾರದ ಈ ಅಸ್ಪಷ್ಟ ನಿರ್ಧಾರಕ್ಕೆ  ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ. ಸಂಪುಟ ಸಹೋದ್ಯೋಗಿಗಳು, ಹಿರಿಯ ಅಧಿಕಾರಿಗಳು ಸಹ ವಿರೋಧ ವ್ಯಕ್ತಪಡಿಸಿದ್ದರು. ಇದರ ಜೊತೆಗೆ ವಿಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಸರ್ಕಾರ ಹಿಂಪಡೆದಿದೆ.

top videos
    First published: