• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಕೊನೆಗೂ ಬಳ್ಳಾರಿಯನ್ನು ವಿಭಜಿಸಿ ಹೊಸ ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಸರ್ಕಾರ; ಹೊಸಪೇಟೆ ಕಾರ್ಯಸ್ಥಾನ!

ಕೊನೆಗೂ ಬಳ್ಳಾರಿಯನ್ನು ವಿಭಜಿಸಿ ಹೊಸ ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಸರ್ಕಾರ; ಹೊಸಪೇಟೆ ಕಾರ್ಯಸ್ಥಾನ!

ಹಂಪಿಯ ವಿಜಯನಗರ ಸಾಮ್ರಾಜ್ಯ.

ಹಂಪಿಯ ವಿಜಯನಗರ ಸಾಮ್ರಾಜ್ಯ.

ವಿಜಯನಗರ ಜಿಲ್ಲೆಯ ಕೇಂದ್ರ ಕಾರ್ಯ ಸ್ಥಾನ ಹೊಸಪೇಟೆಯಾಗಿರಲಿದ್ದು, ಈ ಹೊಸ ಜಿಲ್ಲೆಗೆ 6ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ. ಹೊಸ ಜಿಲ್ಲೆ ಬಗ್ಗೆ ರಾಜ್ಯಪತ್ರದಲ್ಲಿ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲೀಗ ಒಟ್ಟ 31 ಜಿಲ್ಲೆಗಳಾದಂತಾಗಿದೆ.

  • Share this:

    ಬೆಂಗಳೂರು (ಫೆಬ್ರವರಿ 08); ಸಚಿವ ಆನಂದ್​ ಸಿಂಗ್ ಅವರ ಮನವಿಗೆ ಕೊನೆಗೂ ಮನ್ನಣೆ ನೀಡಿರುವ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆಯನ್ನು ಒಡೆದು ಹೊಸ ವಿಜಯನಗರ ಜಿಲ್ಲೆಯನ್ನು ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಘೋಷಿಸಿದೆ. ಆ ಕುರಿತು ಅಧಿಕೃತ ಆದೇಶವನ್ನೂ ಸಹ ರಾಜ್ಯ ಸರ್ಕಾರ ಹೊರಡಿಸಿದೆ. ಹೊಸಪೇಟೆಯನ್ನು ಕಾರ್ಯಸ್ಥಾನವನ್ನಾಗಿಸಿ ವಿಜಯನಗರ ಎಂಬ ಹೊಸ ಜಿಲ್ಲೆಯನ್ನು ಘೋಷಿಸಬೇಕು ಎಂಬ ಕೂಗು ಬಹುದಿನಗಳಿಂದಲೂ ಇದೆ. ಕೊಪ್ಪಳವನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಸಂದರ್ಭದಲ್ಲೇ ಈ ಕೂಗು ಜೋರಾಗಿ ಕೇಳಿ ಬಂದಿತ್ತು. ಹೋರಾಟಗಳೂ ಸಹ ನಡೆದಿದ್ದವು. ಆದರೆ, ಸರ್ಕಾರ ಈ ಕುರಿತು ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ, ಸಚಿವ ಆನಂದ್​ ಸಿಂಗ್ ಇದೇ ಕಾರಣಕ್ಕೆ ಕಾಂಗ್ರೆಸ್​ ಪಕ್ಷದಿಂದ ಹೊರಬಂದು ಬಿಜೆಪಿ ಸೇರ್ಪಡೆಯಾಗಿದ್ದರು.


    ಸಚಿವ ಆನಂದ್ ಸಿಂಗ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಾಗಲೇ ಬಳ್ಳಾರಿಯನ್ನು ಒಡೆದು ವಿಜಯನಗರವನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟೆ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಹೀಗಾಗಿ ಆನಂದ್​ ಸಿಂಗ್​ ಗೆ ಕೊಟ್ಟ ಮಾತಿನ ಮೇರೆಗೆ ಸಿಎಂ ಯಡಿಯೂರಪ್ಪ ಕೊನೆಗೂ ವಿಜಯನಗರ ಜಿಲ್ಲೆಯನ್ನು ಇಂದು ಘೋಷಣೆ ಮಾಡಿದ್ದಾರೆ.


    ರಾಜ್ಯ ಸರ್ಕಾರದ ಅಧಿಕೃತ ಆದೇಶ.


    ರಾಜ್ಯದ 31ನೇ ಜಿಲ್ಲೆ ವಿಜಯನಗರಕ್ಕೆ ರಾಜ್ಯ ಸಚಿವ ಸಂಪುಟ ಕಳೆದ ವಾರ ಅಸ್ತು ಎಂದಿತ್ತು. ಹೀಗಾಗಿ ಮುಖ್ಯಮಂತ್ರಿ ಇಂದು ತಮ್ಮ ಸಂಪುಟದ ಈ ನಿರ್ಧಾರವನ್ನು ಕಾನೂನಾತ್ಮಕವಾಗಿ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಎಲ್ಲರ ಅನುಮತಿಯೊಂದಿಗೆ ಇದೀಗ ಹೊಸ ಜಿಲ್ಲೆಯನ್ನು ಘೋಷಿಸಿದೆ. ಈ ಮೂಲಕ ಸಚಿವ ಆನಂದ್​ ಸಿಂಗ್ ಅವರ ಬಹುದಿನಗಳ ಕನಸು ನನಸಾದಂತಾಗಿದೆ.


    ಇದನ್ನೂ ಓದಿ: Narendra Modi: ಎಂಎಸ್​ಪಿ ಇತ್ತು, ಇದೆ, ಮುಂದೆಯೂ ಇರಲಿದೆ; ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಆಶ್ವಾಸನೆ


    ವಿಜಯನಗರ ಜಿಲ್ಲೆಯ ಕೇಂದ್ರ ಕಾರ್ಯ ಸ್ಥಾನ ಹೊಸಪೇಟೆಯಾಗಿರಲಿದ್ದು, ಈ ಹೊಸ ಜಿಲ್ಲೆಗೆ 6ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ. ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಆರು ಹೊಸ ತಾಲೂಕುಗಳಾಗಿದ್ದು, ಹೊಸ ಜಿಲ್ಲೆ ಬಗ್ಗೆ ರಾಜ್ಯಪತ್ರದಲ್ಲಿ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲೀಗ ಒಟ್ಟ 31 ಜಿಲ್ಲೆಗಳಾದಂತಾಗಿದೆ. ಆದರೆ, ಸರ್ಕಾರದ ಈ ನಿರ್ಧಾರ ಬಳ್ಳಾರಿಯನ್ನು ಕೇಂದ್ರ ಸ್ಥಾನವಾಗಿಟ್ಟು, ರಾಜಕೀಯ ನಡೆಸುತ್ತಿದ್ದ ರೆಡ್ಡಿ ಬ್ರದರ್ಸ್​ ಮತ್ತು ಸಚಿವ ಶ್ರೀರಾಮುಲು ಅವರಿಗೆ ಹಿನ್ನಡೆಯಾಗಲಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು