• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಟಿಪ್ಪು ಹೊಗಳಿದ ವಿಶ್ವನಾಥ್; ಬಿಜೆಪಿಗರು ಈಗಲಾದರೂ ಸತ್ಯ ತಿಳಿದುಕೊಳ್ಳಲಿ ಎಂದ ಗುಂಡೂರಾವ್, ಖಂಡ್ರೆ

ಟಿಪ್ಪು ಹೊಗಳಿದ ವಿಶ್ವನಾಥ್; ಬಿಜೆಪಿಗರು ಈಗಲಾದರೂ ಸತ್ಯ ತಿಳಿದುಕೊಳ್ಳಲಿ ಎಂದ ಗುಂಡೂರಾವ್, ಖಂಡ್ರೆ

ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ.

ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಎಚ್. ವಿಶ್ವನಾಥ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿಷಯವಾಗಿ ಮಾತನಾಡುವಾಗ ಟಿಪ್ಪುವನ್ನು ಹಾಡಿ ಹೊಗಳಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ ಕಮಾಂಡರ್. ಅದೇ ರೀತಿ ಟಿಪ್ಪು ಸುಲ್ತಾನ್ ಕೂಡ. ಟಿಪ್ಪು ಸುಲ್ತಾನ್ ಯಾವುದೇ ಪಕ್ಷ, ಜಾತಿ ಹಾಗೂ ಧರ್ಮಕ್ಕೆ ಸೇರಿದವನಲ್ಲ. ಟಿಪ್ಪು ಈ ನೆಲದ ಮಣ್ಣಿನ ಮಗ ಎಂದಿದ್ದರು.

ಮುಂದೆ ಓದಿ ...
  • Share this:

ಬೆಂಗಳೂರು; ಟಿಪ್ಪು ಸುಲ್ತಾನ್ ಈ ನೆಲದ ಮಗ. ವೀರ ಹೋರಾಟಗಾರ ಟಿಪ್ಪು ಯಾವುದೇ ಪಕ್ಷ ಜಾತಿ ಹಾಗೂ ಧರ್ಮಕ್ಕೆ ಸೇರಿದವನಲ್ಲ ಎಂದು ಬಿಜೆಪಿ ಮುಖಂಡ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಟಿಪ್ಪುವನ್ನು ಹಾಡಿ ಹೊಗಳಿರುವುದನ್ನು  ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆ ಉಲ್ಲೇಖಿಸಿ ಬಿಜೆಪಿ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ.


ವಿಶ್ವನಾಥ್ ಹೇಳಿಕೆ ಸಂಬಂಧ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಕುರಿತ ಪಠ್ಯವನ್ನು ಪಠ್ಯ ಪುಸ್ತಕದಿಂದ ತೆಗೆಯುವ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿ ಪಕ್ಷದ ನಾಯಕ ಎಚ್.ವಿಶ್ವನಾಥ್ ಟಿಪ್ಪು ಈ ದೇಶ ಹಾಗೂ ಈ ನೆಲದ ಮಣ್ಣಿನ ಮಗ ಎನ್ನುತ್ತಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಹೋರಾಟಗಾರ ಎಂದು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಬಿಜೆಪಿ ನಾಯಕರೇ ಈಗಲಾದರೂ ಸತ್ಯ ಅರ್ಥವಾಯಿತೆ? ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.


ಇನ್ನು ಇದೇ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕೂಡ ಹೇಳಿಕೆ ನೀಡಿದ್ದಾರೆ. ವಿಶ್ವನಾಥ್ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿಯವರು ಸತ್ಯ ಮರೆಮಾಚುವ ಕೆಲಸವನ್ನು ಮಾಡುತ್ತಿದ್ದಾರೆ. ಟಿಪ್ಪು ಒಬ್ಬ ದೇಶ ಭಕ್ತ, ವೀರ ಸೇನಾನಿ.  ಟಿಪ್ಪು ನಿರ್ಮಿಸಿರುವ ದೇವಸ್ಥಾನ ಮತ್ತು ಕೋಟೆಗಳನ್ನು ನಾಶಮಾಡಲು ಆಗುತ್ತಾ? ಬಿಜೆಪಿ ಇತಿಹಾಸ ತಿರುಚುವ ಪ್ರಯತ್ನ ಮಾಡುತ್ತಿದೆ. ವಿಶ್ವನಾಥ್ ಸತ್ಯವನ್ನು ಹೇಳಿದ್ದಾರೆ. ಹಾಗಾಗಿ ನಾನು ವಿಶ್ವನಾಥ್ ಹೇಳಿಕೆಯನ್ನು ಬೆಂಬಲಿಸುವೆ ಎಂದು ಹೇಳಿದ್ದಾರೆ.


ಇದನ್ನು ಓದಿ: ಪ್ರವಾಹ ಪರಿಸ್ಥಿತಿಗೆ ನೀಡಲಾದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ; ಕಾಂಗ್ರೆಸ್ ಒತ್ತಾಯ


ಸಂಗೊಳ್ಳಿ ರಾಯಣ್ಣ ಈ ರಾಷ್ಟ್ರದ ಆಸ್ತಿ. ದೇಶದ ಹೆಮ್ಮೆಯ ಸುಪುತ್ರ. ಅವರಿಗೆ ಸಿಗಬೇಕಾದ ಗೌರವ ರಾಜ್ಯ ಸರ್ಕಾರದಿಂದ ಸಿಗಬೇಕು ಅಂತ ಒತ್ತಯ ಮಾಡುತ್ತೇನೆ ಎಂದು ಖಂಡ್ರೆ ಆಗ್ರಹಿಸಿದರು.


ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ವಿಶ್ವನಾಥ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿಷಯವಾಗಿ ಮಾತನಾಡುವಾಗ ಟಿಪ್ಪುವನ್ನು ಹಾಡಿ ಹೊಗಳಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ ಕಮಾಂಡರ್. ಅದೇ ರೀತಿ ಟಿಪ್ಪು ಸುಲ್ತಾನ್ ಕೂಡ. ಟಿಪ್ಪು ಸುಲ್ತಾನ್ ಯಾವುದೇ ಪಕ್ಷ, ಜಾತಿ ಹಾಗೂ ಧರ್ಮಕ್ಕೆ ಸೇರಿದವನಲ್ಲ. ಟಿಪ್ಪು ಈ ನೆಲದ ಮಣ್ಣಿನ ಮಗ. ಹೀಗಾಗಿ ಟಿಪ್ಪುನನ್ನು ಸಣ್ಣವನ್ನಾಗಿ ಮಾಡಬಾರದು. ಪಠ್ಯದಿಂದ ಟಿಪ್ಪು ಪಾಠ ಕೈ ಬಿಟ್ಟಿಲ್ಲ. ಐದನೇ ತರಗತಿಯಿಂದ ಏಳನೇ ತರಗತಿ ಪಠ್ಯದಲ್ಲಿ ಸೇರಿಸಿದ್ದಾರೆ. ಗಾಂಧೀಜಿಯಿಂದ ಹಿಡಿದು ಟಿಪ್ಪುವಿನ ತನಕ ವಿದ್ಯಾರ್ಥಿಗಳು ಎಲ್ಲವನ್ನೂ ಓದಬೇಕು ಎಂದು ಹೇಳಿದ್ದರು.

top videos
    First published: