ಪುತ್ತೂರು: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ (Woman) ಉದ್ಯಮಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಉದ್ಯಮಿ ತನ್ನ ಕಾರಿನಲ್ಲಿ (Car) ಮಹಿಳೆಗೆ, ಸೂಪರ್ ಮಾರ್ಕೆಟ್ನ (Market) ಬಿಲ್ಲಿಂಗ್ ತೋರಿಸುವುದಾಗಿ ಕಾರಿನಲ್ಲಿ ಕರೆದೊಯ್ದು ಕಿಡ್ನಾಪ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಉಜಿರೆಯಲ್ಲಿರುವ ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ಮೇಲೆ ಲೈಂಗಿಕ ಕಿರುಕುಳ (Harassment) ಆರೋಪ ಕೇಳಿ ಬಂದಿದೆ.
20 ವರ್ಷದ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಆಕೆಯ ಗಂಡನಿಂದ ಉದ್ಯಮಿ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಬಳಿಕ ಆರೋಪಿ ಉದ್ಯಮಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾವೀರ ಟೆಕ್ಸ್ ಟೈಲ್ ಹಾಗೂ ಧರ್ಮಸ್ಥಳದಲ್ಲಿರುವ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕರಾಗಿರುವ ಉದ್ಯಮಿ ಮಹಿಳೆಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದರಂತೆ. ತನ್ನ ಸೂಪರ್ ಮಾರ್ಕೆಟ್ನಲ್ಲಿ ಬಿಲ್ಲಿಂಗ್ ತೋರಿಸುವುದಾಗಿ ಕಾರಿನಲ್ಲಿ ಕರೆದೊಯ್ದು, ಕಾರಿನಲ್ಲೇ ಮಹಿಳೆಯ ಖಾಸಗಿ ಭಾಗಗಳನ್ನ ಮುಟ್ಟಲು ಯತ್ನಿಸಿ ಲೈಂಗಿಕ ಕಿರುಕುಳ ನೀಡಿದ್ದರಂತೆ.
ಇದರಿಂದ ಗಾಬರಿಗೊಂಡ ಮಹಿಳೆ ಕಾರಿನಲ್ಲಿ ಕಿರುಚಾಟ ಮಾಡಿ ಹೊರ ಬಂದಿದ್ದರಂತೆ. ಈ ವೇಳೆ ಅದೇ ಮಾರ್ಗವಾಗಿ ಬೈಕ್ನಲ್ಲಿ ಬಂದ ಕೆಲ ಸಾರ್ವಜನಿಕರು ಮಹಿಳೆಯನ್ನು ರಕ್ಷಣೆ ಮಾಡಿದ್ದರಂತೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ