• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Hasanamba Temple: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ; ಬೆಳ್ಳಂಬೆಳಗ್ಗೆ ದೇವಿಗೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್

Hasanamba Temple: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ; ಬೆಳ್ಳಂಬೆಳಗ್ಗೆ ದೇವಿಗೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್

ಹಾಸನಾಂಬ ದೇವಿಯ ದರ್ಶನ ಪಡೆದ ಡಿಕೆ ಶಿವಕುಮಾರ್, ಪತ್ನಿ ಉಷಾ

ಹಾಸನಾಂಬ ದೇವಿಯ ದರ್ಶನ ಪಡೆದ ಡಿಕೆ ಶಿವಕುಮಾರ್, ಪತ್ನಿ ಉಷಾ

DK Shivakumar: ಹಾಸನಾಂಬ ದರ್ಶನದ ಕೊನೆಯ ದಿನವಾದ್ದರಿಂದ ಇಂದು ಬೆಳಗ್ಗೆ 6.45ರ ಸುಮಾರಿಗೆ ಹಾಸನಾಂಬ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ದೀಪಾವಳಿ ಹಬ್ಬದ ದಿನವೇ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. 

  • Share this:

ಹಾಸನ (ನ. 16): ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಹಾಸನದ ಹಾಸನಾಂಬ ದೇವಾಲಯದಲ್ಲಿ ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯಲಾಗುತ್ತದೆ. ನ. 5ರಂದು ಹಾಸನಾಂಬಾ ದೇಗುಲದ ಬಾಗಿಲು ತೆರೆಯಲಾಗಿತ್ತು. ಇಂದು ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಹಾಸನಾಂಬೆ ದೇವಸ್ಥಾನ ತೆರೆದಿರುತ್ತದೆ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಬೆಳ್ಳಂಬೆಳಗ್ಗೆಯೇ ತಮ್ಮ ಪತ್ನಿಯೊಂದಿಗೆ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ.


ಹಾಸನಾಂಬೆ ದರ್ಶನದ ಕೊನೆಯ ದಿನವಾದ್ದರಿಂದ ಇಂದು ಬೆಳಗ್ಗೆ 6.45ರ ಸುಮಾರಿಗೆ ಹಾಸನಾಂಬೆ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ದೀಪಾವಳಿ ಹಬ್ಬದ ದಿನವೇ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಹಾಸನದಲ್ಲಿ ಹಾಸನಾಂಬೆ ದರ್ಶನ ಬಳಿಕ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿದ್ದು, ಇದೊಂದು ಪುಣ್ಯಕ್ಷೇತ್ರ. ನಂಬಿಕೆ ಎಂಬ ಪದಕ್ಕೆ ಪವಿತ್ರ ಧರ್ಮಕ್ಷೇತ್ರಗಳೇ ಸಾಕ್ಷಿ. ಹಾಸನಾಂಬೆ ದೇವಿ ರಾಜ್ಯದ ಜನತೆಯ ಎಲ್ಲರ ದುಃಖ ದೂರ ಮಾಡಲಿ. ನಮ್ಮಂಥವರಿಗೆ ರಾಜ್ಯದವರಿಗೆ ಇರುವ ಎಲ್ಲ ನೋವನ್ನು ಪರಿಹಾರ ಮಾಡಲಿ ಎಂದು ದೇವಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: Drug Case: ಡ್ರಗ್ ಪ್ರಕರಣ; ಸಿಸಿಬಿಯಿಂದ ಇಂದು ಮಾಜಿ ಸಚಿವರ ಮಗ ದರ್ಶನ್​ ಲಮಾಣಿ ವಿಚಾರಣೆ


ಪಂಚಾಯಿತಿ ಚುನಾವಣೆ ನಡೆಯಬೇಕು ಎಂದು ನಮ್ಮ ಪಕ್ಷದವರು ಕೋರ್ಟ್‌ಗೆ ಹೋಗಿದ್ದೆವು. ಪಂಚಾಯಿತಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ನಾವು ಪ್ರವಾಸ ಮಾಡಿ ಪಕ್ಷ ಸಂಘಟನೆ ಕೆಲಸ ಮಾಡುತ್ತೇವೆ. ಅಧಿಕಾರ ದುರುಪಯೋಗ ಆಗುತ್ತದೆ. ಆದರೂ ನಮ್ಮ ಹೋರಾಟವನ್ನು ನಾವು ಮಾಡಬೇಕು. ನಮ್ಮ ಜನರ ಮೇಲೆ ನಂಬಿಕೆ ಇದೆ. ಅವರು ತಡ ಆದರೂ ಗೌರವ ಕೊಡುತ್ತಾರೆ ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆಯ ಬಾಗಿಲನ್ನು ನವೆಂಬರ್ 5ರಿಂದ ತೆರೆಯಲಾಗಿತ್ತು. ಇಂದು ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ದೇವಾಲಯದ ಬಾಗಿಲು ಮುಚ್ಚಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ ಗಿರೀಶ್ ಅವರ ಸಮ್ಮುಖದಲ್ಲಿ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ದೇವಾಲಯದ ಮುಂಭಾಗ ಇದ್ದವರಿಗೆ ಮಧ್ಯಾಹ್ನ 12 ಗಂಟೆಯವರೆಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಬಾರಿ ಕೊರೋನಾ ಇದ್ದ ಕಾರಣ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ.

Published by:Sushma Chakre
First published: