• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • HD Kumaraswamy: ವಿದೇಶಕ್ಕೆ ಹಾರಿದ ಎಚ್‌ಡಿಕೆ! ಮತದಾನ ಮುಗೀತಿದ್ದಂತೆ ಶುರುವಾಯ್ತಾ ಹೊಸ ಲೆಕ್ಕಾಚಾರ?

HD Kumaraswamy: ವಿದೇಶಕ್ಕೆ ಹಾರಿದ ಎಚ್‌ಡಿಕೆ! ಮತದಾನ ಮುಗೀತಿದ್ದಂತೆ ಶುರುವಾಯ್ತಾ ಹೊಸ ಲೆಕ್ಕಾಚಾರ?

ಎಚ್‌ಡಿ ಕುಮಾರಸ್ವಾಮಿ

ಎಚ್‌ಡಿ ಕುಮಾರಸ್ವಾಮಿ

ಮೇ 13ರಂದು ಮಧ್ಯಾಹ್ನ ಎಚ್​ಡಿ ಕುಮಾರಸ್ವಾಮಿ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನಲಾಗಿದೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly ELection) ಮತದಾನ (Voting) ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಮತದಾನ ಮುಕ್ತಾಯವಾಗುತ್ತಿದ್ದಂತೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ (HD Kumaraswamy) ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣಾ ಪ್ರಚಾರದಲ್ಲಿ (Election Campaign) ಸಖತ್ ಬ್ಯುಸಿಯಾಗಿದ್ದ ಮಾಜಿ ಸಿಎಂ ಎಚ್​ಡಿಕೆ, ಸದ್ಯ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ (Singapore) ತೆರಳಿದ್ದಾರೆ. ಮೇ 13ರಂದು ಮಧ್ಯಾಹ್ನ ಎಚ್​ಡಿಕೆ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನಲಾಗಿದೆ. ಸಮೀಕ್ಷೆಗಳಿಂದ ಬೇಸರಗೊಂಡಿರುವ ಎಚ್​ಡಿಕೆ ಸಿಂಗಾಪುರಕ್ಕೆ ತೆರಳಿದ್ದಾರೆ.


ಜೆಡಿಎಸ್ ಬಹುಮತ ಬರಲಿದೆ


ಇಂದು ಕೇತಗಾನಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಈ ಬಾರಿ ನನ್ನ ಅಭ್ಯರ್ಥಿಗಳಿಗೆ ಹಣ ಒದಗಿಸಲು ಆಗಿಲ್ಲ. ಕೆಲವು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಿದ್ದರು. ಆದರೆ ಹಣದ ಕೊರತೆಯಿಂದಾಗಿ ನಮಗೆ ಹಿನ್ನಡೆಯಾಗಿದೆ. ಆದರೂ ಸಹ ಜೆಡಿಎಸ್ ಬಹುಮತ ಬರಲಿದೆ.


ಅತಂತ್ರ ಫಲಿತಾಂಶ ವಿಚಾರ - ಮುಂದೆ ಅದರ ಬಗ್ಗೆ ಮಾತನಾಡ್ತೇನೆ. ಬಿಜೆಪಿ - ಕಾಂಗ್ರೆಸ್ ಹಣದಿಂದ ಚುನಾವಣೆ ನಡೆಸಿವೆ. ಉತ್ತನ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಕನಿಷ್ಠ 25 ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದ ಹಿನ್ನಡೆಯಾಗಿದೆ. ಗೆಲ್ಲುವ ಕ್ಷೇತ್ರದಲ್ಲೂ ಪೆಟ್ಟು ತಿಂದಿದ್ದೇವೆ ಎಂದರು.


ಇದನ್ನೂ ಓದಿ: Karnataka Election 2023 Live: ಎಕ್ಸಿಟ್‌ ಪೋಲ್ ಬಂತು, ಇದೀಗ ಮೇ 13ರ ಫಲಿತಾಂಶದತ್ತ ಎಲ್ಲರ ಚಿತ್ತ


ಯುವಕನಾಗಿ ನನಗೂ ಆತಂಕವಿದೆ

top videos


    ಇನ್ನು, ಇದೇ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ಬಾರಿಯ ಚುನಾವಣೆ ಹಣದಿಂದ ನಡೆದಿದೆ. ನಾನೊಬ್ಬ ಯುವಕನಾಗಿ ನನಗೂ ಆತಂಕವಿದೆ. ಮುಂದೆ ಈ ವ್ಯವಸ್ಥೆಯನ್ನ ರಾಜ್ಯದ ಜನರು ಸರಿಪಡಿಸಬೇಕಿದೆ. ನಾವು ರಾಮನಗರದಲ್ಲಿ 25 ವರ್ಷಗಳಿಂದ ಸೇವೆ ಮಾಡಿದ್ದೇವೆ. ಜನರು ನಮ್ಮನ್ನ ಕೈಹಿಡಿಯುತ್ತಾರೆಂಬ ನಂಬಿಕೆಯಿದೆ ಎಂದರು.

    First published: