• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ರಾಯಣ್ಣ ಪ್ರತಿಮೆ ವಿವಾದ: ಕನ್ನಡಿಗರ ಕೆಣಕಿದರೆ ಮರಾಠಿಗರ ಹೆಡೆಮುರಿ ಕಟ್ಟುತ್ತೇವೆ - ಎಚ್​​.ಡಿ ಕುಮಾರಸ್ವಾಮಿ ಎಚ್ಚರಿಕೆ

ರಾಯಣ್ಣ ಪ್ರತಿಮೆ ವಿವಾದ: ಕನ್ನಡಿಗರ ಕೆಣಕಿದರೆ ಮರಾಠಿಗರ ಹೆಡೆಮುರಿ ಕಟ್ಟುತ್ತೇವೆ - ಎಚ್​​.ಡಿ ಕುಮಾರಸ್ವಾಮಿ ಎಚ್ಚರಿಕೆ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ ಎಂದು ಎಚ್​​ಡಿಕೆ ಕುಟುಕಿದ್ದಾರೆ.

  • Share this:

    ಬೆಂಗಳೂರು(ಆ.28): ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಟ್ವೀಟ್​​ ಮಾಡುವ ಮೂಲಕ ಕನ್ನಡಿಗರ ಪರ ನಿಂತಿದ್ದಾರೆ.


    ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಮತ್ತೊಂದು ಟ್ವೀಟ್​​ನಲ್ಲಿ ಎಚ್​​ಡಿಕೆ ಮರಾಠಿಗರಿಗೆ ಎಚ್ಚರಿಕೆ ನೀಡಿದ್ಧಾರೆ.


    ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್​​ಡಿಕೆ ವಾರ್ನ್​​ ಮಾಡಿದ್ದಾರೆ.


    ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ ಎಂದು ಎಚ್​​ಡಿಕೆ ಕುಟುಕಿದ್ದಾರೆ.


    ಇದನ್ನೂ ಓದಿ: ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣ; ಕೆ.ಜೆ. ಜಾರ್ಜ್​ಗೆ ಮತ್ತೆ ಸಮನ್ಸ್​ ಜಾರಿ


    ಕನ್ನಡಿಗರೆಂದರೆ ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ ಎಂದು ರಾಯಣ್ಣನ ಪ್ರತಿಮೆ ಸ್ಥಾಪಿಸಿದ ಕನ್ನಡ ಹೋರಾಟಗಾರರನ್ನ ಹೊಗಳಿದ್ದಾರೆ.

    Published by:Ganesh Nachikethu
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು