• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾದ ಡಿಕೆ ಶಿವಕುಮಾರ್​ಗೆ ಶುಭ ಕೋರಿದ ಎಚ್​ಡಿ ಕುಮಾರಸ್ವಾಮಿ

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾದ ಡಿಕೆ ಶಿವಕುಮಾರ್​ಗೆ ಶುಭ ಕೋರಿದ ಎಚ್​ಡಿ ಕುಮಾರಸ್ವಾಮಿ

ಡಿಕೆ ಶಿವಕುಮಾರ್​-ಎಚ್​ಡಿ ಕುಮಾರಸ್ವಾಮಿ

ಡಿಕೆ ಶಿವಕುಮಾರ್​-ಎಚ್​ಡಿ ಕುಮಾರಸ್ವಾಮಿ

ಟ್ವೀಟ್​ ಮೂಲಕ ಹಾರೈಸಿರುವ ಅವರು, ಕನಕಪುರ ಶಾಸಕರಿಗೆ ಅಭಿನಂದನೆ ತಿಳಿಸಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

  • Share this:

ಬೆಂಗಳೂರು (ಮಾ.11): ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಡಿಕೆ ಶಿವಕುಮಾರ್​ ಅವರಿಗೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಶುಭ ಕೋರಿದ್ದಾರೆ.


ಟ್ವೀಟ್​ ಮೂಲಕ ಹಾರೈಸಿರುವ ಅವರು, ಕನಕಪುರ ಶಾಸಕರಿಗೆ ಅಭಿನಂದನೆ ತಿಳಿಸಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.


ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆಗಳು.



ಎಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುವಲ್ಲಿ ಡಿಕೆ ಶಿವಕುಮಾರ್​ ಪಾತ್ರ ಮಹತ್ವವಾಗಿದ್ದು, ಇದಾದ ಬಳಿಕ ಇವರ ನಡುವಿನ ಸ್ನೇಹ ಕೂಡ ಗಟ್ಟಿಯಾಗಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಮಂಡ್ಯ ಚುನಾವಣಾ ಕಣದಿಂದ ಕಾಂಗ್ರೆಸ್​ ನಾಯಕರು ಅಂತರ ಕಾಯ್ದಕೊಂಡರೂ ಡಿಕೆ ಶಿವಕುಮಾರ್​ ನಿಖಿಲ್​ ಕುಮಾರಸ್ವಾಮಿ ಪರ ಪ್ರಚಾರ ನಡೆಸಿ ಮತಯಾಚಿಸಿದ್ದರು.


ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿ ತಿಹಾರ್​ ಜೈಲು ಸೇರಿದಾಗಲೂ ಎಚ್​ಡಿಕೆ ಜೈಲಿಗೆ ತೆರಳಿ, ಡಿಕೆಶಿ ಸಾಂತ್ವನ ಹೇಳಿ ಬಂದಿದ್ದರು. ಆ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಬಂದಾಗಲೂ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಕೆಶಿಯನ್ನು ಸ್ವಾಗತಿಸಿ, ಕುಶಲೋಪರಿ ವಿಚಾರಿಸಿದ್ದರು.


ಇದನ್ನು ಓದಿ: ಡಿಕೆ ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷರಾಗಿರುವುದು ಆಶ್ಚರ್ಯ ತಂದಿದೆ; ಸಚಿವ ಈಶ್ವರಪ್ಪ


ಒಂದು ಕಾಲದಲ್ಲಿ ಹಾವು-ಮುಂಗುಸಿಯಂತಿದ್ದ ಇವರ ಸ್ನೇಹ ಸಮ್ಮಿಶ್ರ ಸರ್ಕಾರ ರಚನೆ ನಂತರ ಗಟ್ಟಿಯಾಗಿತ್ತು. ಡಿಕೆ ಶಿವಕುಮಾರ್ ಅಧ್ಯಕ್ಷರಾಗುತ್ತಿದ್ದಂತೆ ರಾಮನಗರದಲ್ಲಿ ಕುಮಾರಸ್ವಾಮಿ ಬೆಂಬಲಿಗರು ಕೂಡ ಹರ್ಷ ವ್ಯಕ್ತಪಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

First published: