ಬೆಂಗಳೂರು (ಮಾ.11): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶುಭ ಕೋರಿದ್ದಾರೆ.
ಟ್ವೀಟ್ ಮೂಲಕ ಹಾರೈಸಿರುವ ಅವರು, ಕನಕಪುರ ಶಾಸಕರಿಗೆ ಅಭಿನಂದನೆ ತಿಳಿಸಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆಗಳು.
— H D Kumaraswamy (@hd_kumaraswamy) March 11, 2020
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿ ತಿಹಾರ್ ಜೈಲು ಸೇರಿದಾಗಲೂ ಎಚ್ಡಿಕೆ ಜೈಲಿಗೆ ತೆರಳಿ, ಡಿಕೆಶಿ ಸಾಂತ್ವನ ಹೇಳಿ ಬಂದಿದ್ದರು. ಆ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಬಂದಾಗಲೂ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಕೆಶಿಯನ್ನು ಸ್ವಾಗತಿಸಿ, ಕುಶಲೋಪರಿ ವಿಚಾರಿಸಿದ್ದರು.
ಇದನ್ನು ಓದಿ: ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿರುವುದು ಆಶ್ಚರ್ಯ ತಂದಿದೆ; ಸಚಿವ ಈಶ್ವರಪ್ಪ
ಒಂದು ಕಾಲದಲ್ಲಿ ಹಾವು-ಮುಂಗುಸಿಯಂತಿದ್ದ ಇವರ ಸ್ನೇಹ ಸಮ್ಮಿಶ್ರ ಸರ್ಕಾರ ರಚನೆ ನಂತರ ಗಟ್ಟಿಯಾಗಿತ್ತು. ಡಿಕೆ ಶಿವಕುಮಾರ್ ಅಧ್ಯಕ್ಷರಾಗುತ್ತಿದ್ದಂತೆ ರಾಮನಗರದಲ್ಲಿ ಕುಮಾರಸ್ವಾಮಿ ಬೆಂಬಲಿಗರು ಕೂಡ ಹರ್ಷ ವ್ಯಕ್ತಪಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ