ಹುಬ್ಬಳ್ಳಿ (ಜ.19): ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸ ಪೂರ್ಣಗೊಳಿಸಿ ದೆಹಲಿಗೆ ವಾಪಾಸಾಗಿದ್ದಾರೆ. ಬಹು ನಿರೀಕ್ಷಿತ ರಾಜ್ಯ ಸಂಪುಟ ರಚನೆ ಕಸರತ್ತಿಗೆ ಅವರು ಒಪ್ಪಿಗೆ ನೀಡಿದ್ದಾರೆ.
ಶನಿವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದರು. ಮೊದಲು ಅರಮನೆ ಮೈದಾನದಲ್ಲಿ ವಿವೇಕದೀಪಿನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ನೂತನವಾಗಿ ಸ್ಥಾಪನೆಗೊಂಡ ಸಂಸದ ತೇಜಸ್ವಿ ಸೂರ್ಯ ಕಚೇರಿಯನ್ನು ಅಮಿತ್ ಶಾ ಉದ್ಘಾಟನೆ ಮಾಡಿದರು. ನಂತರ ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ತಿದ್ದುಪಡಿ ಕಾಯ್ದೆಯ ಜನಜಾಗೃತಿ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಂಡಿದ್ದರು.
ಇನ್ನು, ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಸಂಪುಟ ವಿಸ್ತರಣೆ ಫೈನಲ್ ಆಗಲಿದೆ ಎನ್ನಲಾಗಿತ್ತು. ಅಂತೆಯೇ ಕೇಂದ್ರ ಗೃಹ ಸಚಿವರು ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದ್ದಾರೆ. ಸಂಪುಟ ವಿಸ್ತರಣೆಗೆ ಯಾವುದೇ ಅಡ್ಡಿ-ಆತಂಕ ಇಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಸಿಎಎ ಕುರಿತು ಹುಬ್ಬಳ್ಳಿಯಲ್ಲಿ ಜನಜಾಗೃತಿ ಸಮಾವೇಶ; ವಿರೋಧ ಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ
ಇಂದು, ಬೆಳಗ್ಗೆ ಹುಬ್ಬಳ್ಳಿಯಿಂದ ದೆಹಲಿಯತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಣ ಬೆಳೆಸಿದ್ದಾರೆ. ಹುಬ್ಬಳ್ಳಿಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆಯಲ್ಲಿ ಉಪಹಾರ ಸೇವಿಸಿ ಏರ್ಪೋರ್ಟ್ನತ್ತ ಪ್ರಯಾಣ ಬೆಳೆಸಿದರು. ನಂತರ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ