ಬೆಂಗಳೂರು: ಚುನಾವಣಾಪೂರ್ವ ಸಮೀಕ್ಷೆಯಂತೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಭರ್ಜರಿ ಜಯ ಸಾಧಿಸಿದೆ. 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸ್ವತಂತ್ರ ಪಕ್ಷವಾಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಕರ್ನಾಟಕ (Karnataka Election 2023) ಜನರು ಕಾಂಗ್ರೆಸ್ ಸಂಪೂರ್ಣ ಬಹುಮತ ನೀಡಿದ್ದು, 2013ರಂತೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ಕಾಂಗ್ರೆಸ್ (Congress) ಚುನಾವಣೆಗೂ ಮುನ್ನ ಹಲವು ಯೋಜನೆಗಳನ್ನು ಘೋಷಿಸಿದ್ದು, ನಾಡಿನ ಜನತೆಗೆ ಏನೆಲ್ಲಾ ಸೌಲಭ್ಯ ಸಿಗಲಿದೆ ಎನ್ನುವುದರ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯನ್ನು ಮತ್ತೆ ಜಾರಿಗೆ ತರಲಿದ್ದು, ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ. ಮತ್ತೆ ಜಾರಿಗೆ ತರುವುದಾಗಿ ಹೇಳಿದೆ.
- ಅಲ್ಪಸಂಖ್ಯಾತರಿಗೆ ಒಬಿಸಿ 2ಬಿ ವರ್ಗದಡಿ ಶೇ 4ರಷ್ಟು ಮೀಸಲಾತಿಯನ್ನು ಪುನಃ ಸಿಗಲಿದೆ
- ಗೃಹಲಕ್ಷ್ಮಿ ಯೋಜನೆ ಮೂಲಕ ಕರ್ನಾಟಕದ ಪ್ರತಿಯೊಂದು ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ಸಿಗಲಿದೆ.
- ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ ಯೋಜನೆ
- ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರೂ ದಿಂದ 15,000 ರೂಗೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
- ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನ 10 ಸಾವಿರ ರೂಪಾಯಿಗೆ ಏರಿಕೆ ಮತ್ತು ವಿಶ್ರಾಂತಿ ವೇತನ 2 ಲಕ್ಷ ರೂ ನೀಡುವುದು.
- ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ 8,000 ರೂಗೆ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದ್ದಾರೆ. ಬಿಸಿಯೂಟದ ಅಡುಗೆಯವರಿಗೆ ಮಾಸಿಕ ಗೌರವಧನ 6,000 ರೂಗೆ ಏರಿಕೆ.
- ಪೊಲೀಸ್ ಇಲಾಖೆಯಲ್ಲಿ ಶೇ 33ರಷ್ಟು ಮಹಿಳೆಯರ ನೇಮಕಾತಿ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಅಲ್ಲದೆ ಶೇ 1ರಷ್ಟು ತೃತೀಯ ಲಿಂಗಿಗಳಿಗೆ ಅವಕಾಶ ಮಾಡಿಕೊಡಲಿದೆ. ಜೊತೆಗೆ ರಾತ್ರಿ ಪಾಳಿ ಸಿಬ್ಬಂದಿಗೆ 5 ಸಾವಿರ ರೂ ವಿಶೇಷ ಮಾಸಿಕ ಭತ್ಯೆ ಮತ್ತು ಎಲ್ಲ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ಹೆಚ್ಚುವರಿ ವೇತನ ನೀಡುವುದಾಗಿ ಕೈ ಪಕ್ಷ ಭರವಸೆ ನೀಡಿದೆ.
- ಹಾಲಿನ ಸಬ್ಸಿಡಿ ಪ್ರತಿ ಲೀಟರ್ಗೆ 5 ರಿಂದ 7 ರೂಗೆ ಹೆಚ್ಚಳ. ಜಾನುವಾರು ಖರೀದಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂವರೆಗೆ ಸಾಲ
- ಮನೆಗಳಲ್ಲಿ ಬಳಸುವ ಸೌರಶಕ್ತಿ ಪರಿಕರಗಳಿಗೆ ರೂ 3 ಲಕ್ಷದವರೆಗೆ ಶೇ 25ರಷ್ಟು ಸಬ್ಸಿಡಿ. ಬೃಹತ್ ಸೋಲಾರ್ ಪಾರ್ಕ್ಗಳ ನಿರ್ಮಾಣಕ್ಕೆ ಉತ್ತೇಜನ.
- ರಾಜ್ಯದಲ್ಲಿ ಎಲ್ಲ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಸೌಲಭ್ಯ
- ಇತರೆ ಯೋಜನೆಗಳು*ಪ್ರತಿ ಕ್ಷೇತ್ರದಲ್ಲಿ ಶಿತಲೀಕರಣ ಘಟಕ ಸ್ಥಾಪನೆ
*ಬಿಜೆಪಿ ತಂದಿರುವ ಕೃಷಿ ಕಾಯ್ದೆಗಳು ರದ್ಧು
*ಎಪಿಎಂಸಿ ಕಾಯ್ದೆ ರದ್ಧು ಪಡಿಸುತ್ತೇವೆ
*ರೈತರ ಮೇಲಿನ ಎಲ್ಲಾ ಕೇಸ್ ವಾಪಸ್
*ಪ್ರತಿ ಜಿಲ್ಲೆಗೆ ಒಂದು ರೈತ ಮಾಲ್ ಆರಂಭ
*ಸಾವಯವ ಕೃಷಿ ಯೋಜನೆಗೆ 2500ಕೋಟಿ ಹೂಡಿಕೆ
*ಪತ್ರಕರ್ತರ ಕ್ಷೇಮಾಭಿವೃದ್ಧಿ ಸ್ಥಾಪನೆ- 500 ಕೋಟಿ
*ಸ್ವಸಹಾಯ ಗುಂಪುಗಳಿಗೆ 3 ಲಕ್ಷ ಬಡ್ಡಿರಹಿತ ಸಾಲ
*ಪ್ರತ್ಯೇಕ ಕೃಷಿ ಕೋಶ ಕೇಂದ್ರ ಸ್ಥಾಪನೆ
*ಗದಗದಲ್ಲಿ ಹತ್ತಿ ರಫ್ತು ಸಂಸ್ಕರಣ ಕೇಂದ್ರ
*ಸಿಂಧನೂರಿನಲ್ಲಿ ಅಕ್ಕಿ ಸಂಸ್ಕರಣ ಕೇಂದ್ರ
*ಬೆಳಗಾವಿ, ಬಾಗಲಕೋಟೆ, ಮಂಡ್ಯದಲ್ಲಿ ಎಥೆನಾಲ್ ಘಟಕ
*ಕೊಡಗು,ಚಿಕ್ಕಮಗಳೂರಿನಲ್ಲಿ ಕಾಳು ಮೆಣಸು ಸಂಸ್ಕರಣೆ
*ದೊಡ್ಡಬಳ್ಳಾಪುರದಲ್ಲಿ ಹೂ ಸಂಶೋಧನಾ ಕೇಂದ್ರ
*ಜೇನು ಸಾಕಾಣಿಕೆಗೆ 50 ಕೋಟಿ