• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Congress Promises: ಸರ್ಕಾರ ರಚನೆಯತ್ತ ಕಾಂಗ್ರೆಸ್ ದಾಪುಗಾಲು, ಮಹಿಳೆಯರಿಗೆ 2 ಸಾವಿರ,​ ಉಚಿತ ವಿದ್ಯುತ್, ಈಡೇರಬಹುದೇ ಗ್ಯಾರಂಟಿ?

Congress Promises: ಸರ್ಕಾರ ರಚನೆಯತ್ತ ಕಾಂಗ್ರೆಸ್ ದಾಪುಗಾಲು, ಮಹಿಳೆಯರಿಗೆ 2 ಸಾವಿರ,​ ಉಚಿತ ವಿದ್ಯುತ್, ಈಡೇರಬಹುದೇ ಗ್ಯಾರಂಟಿ?

ಕಾಂಗ್ರೆಸ್​ ಭರವಸೆಗಳು ನಿಜವಾಗುತ್ತಾ?

ಕಾಂಗ್ರೆಸ್​ ಭರವಸೆಗಳು ನಿಜವಾಗುತ್ತಾ?

Karnataka Election Results : ಕಾಂಗ್ರೆಸ್​ ಚುನಾವಣೆಗೂ ಮುನ್ನ ಹಲವು ಯೋಜನೆಗಳನ್ನು ಘೋಷಿಸಿದ್ದು, ನಾಡಿನ ಜನತೆಗೆ ಏನೆಲ್ಲಾ ಸೌಲಭ್ಯ ಸಿಗಬಹುದು ಎನ್ನುವುದರ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ. ​

  • News18 Kannada
  • 4-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಚುನಾವಣಾಪೂರ್ವ ಸಮೀಕ್ಷೆಯಂತೆ ರಾಜ್ಯದಲ್ಲಿ ಕಾಂಗ್ರೆಸ್​ (Congress) ಭರ್ಜರಿ ಜಯ ಸಾಧಿಸಿದೆ. 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸ್ವತಂತ್ರ ಪಕ್ಷವಾಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಕರ್ನಾಟಕ (Karnataka Election 2023) ಜನರು ಕಾಂಗ್ರೆಸ್ ಸಂಪೂರ್ಣ ಬಹುಮತ ನೀಡಿದ್ದು, 2013ರಂತೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ಕಾಂಗ್ರೆಸ್ (Congress)​ ಚುನಾವಣೆಗೂ ಮುನ್ನ ಹಲವು ಯೋಜನೆಗಳನ್ನು ಘೋಷಿಸಿದ್ದು, ನಾಡಿನ ಜನತೆಗೆ ಏನೆಲ್ಲಾ ಸೌಲಭ್ಯ ಸಿಗಲಿದೆ ಎನ್ನುವುದರ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ. ​


  • ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯನ್ನು ಮತ್ತೆ ಜಾರಿಗೆ ತರಲಿದ್ದು, ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ. ಮತ್ತೆ ಜಾರಿಗೆ ತರುವುದಾಗಿ ಹೇಳಿದೆ.

  • ಅಲ್ಪಸಂಖ್ಯಾತರಿಗೆ ಒಬಿಸಿ 2ಬಿ ವರ್ಗದಡಿ ಶೇ 4ರಷ್ಟು ಮೀಸಲಾತಿಯನ್ನು ಪುನಃ ಸಿಗಲಿದೆ

  • ಗೃಹಲಕ್ಷ್ಮಿ ಯೋಜನೆ ಮೂಲಕ ಕರ್ನಾಟಕದ ಪ್ರತಿಯೊಂದು ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ಸಿಗಲಿದೆ.

  • ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ ಯೋಜನೆ

  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರೂ ದಿಂದ 15,000 ರೂಗೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

  • ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನ 10 ಸಾವಿರ ರೂಪಾಯಿಗೆ ಏರಿಕೆ ಮತ್ತು ವಿಶ್ರಾಂತಿ ವೇತನ 2 ಲಕ್ಷ ರೂ ನೀಡುವುದು.

  • ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ 8,000 ರೂಗೆ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್​ ಭರವಸೆ ನೀಡಿದ್ದಾರೆ. ಬಿಸಿಯೂಟದ ಅಡುಗೆಯವರಿಗೆ ಮಾಸಿಕ ಗೌರವಧನ 6,000 ರೂಗೆ ಏರಿಕೆ.

  • ಪೊಲೀಸ್ ಇಲಾಖೆಯಲ್ಲಿ ಶೇ 33ರಷ್ಟು ಮಹಿಳೆಯರ ನೇಮಕಾತಿ ಮಾಡುವುದಾಗಿ ಕಾಂಗ್ರೆಸ್​ ಪಕ್ಷ ಘೋಷಿಸಿದೆ. ಅಲ್ಲದೆ ಶೇ 1ರಷ್ಟು ತೃತೀಯ ಲಿಂಗಿಗಳಿಗೆ ಅವಕಾಶ ಮಾಡಿಕೊಡಲಿದೆ. ಜೊತೆಗೆ ರಾತ್ರಿ ಪಾಳಿ ಸಿಬ್ಬಂದಿಗೆ 5 ಸಾವಿರ ರೂ ವಿಶೇಷ ಮಾಸಿಕ ಭತ್ಯೆ ಮತ್ತು ಎಲ್ಲ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ಹೆಚ್ಚುವರಿ ವೇತನ ನೀಡುವುದಾಗಿ ಕೈ ಪಕ್ಷ ಭರವಸೆ ನೀಡಿದೆ.

  • ಹಾಲಿನ ಸಬ್ಸಿಡಿ ಪ್ರತಿ ಲೀಟರ್‌ಗೆ 5 ರಿಂದ 7 ರೂಗೆ ಹೆಚ್ಚಳ. ಜಾನುವಾರು ಖರೀದಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂವರೆಗೆ ಸಾಲ

  • ಮನೆಗಳಲ್ಲಿ ಬಳಸುವ ಸೌರಶಕ್ತಿ ಪರಿಕರಗಳಿಗೆ ರೂ 3 ಲಕ್ಷದವರೆಗೆ ಶೇ 25ರಷ್ಟು ಸಬ್ಸಿಡಿ. ಬೃಹತ್ ಸೋಲಾರ್ ಪಾರ್ಕ್‌ಗಳ ನಿರ್ಮಾಣಕ್ಕೆ ಉತ್ತೇಜನ.

  • ರಾಜ್ಯದಲ್ಲಿ ಎಲ್ಲ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಸೌಲಭ್ಯ


  • ಇತರೆ ಯೋಜನೆಗಳು*ಪ್ರತಿ ಕ್ಷೇತ್ರದಲ್ಲಿ ಶಿತಲೀಕರಣ ಘಟಕ ಸ್ಥಾಪನೆ
    *ಬಿಜೆಪಿ ತಂದಿರುವ ಕೃಷಿ ಕಾಯ್ದೆಗಳು ರದ್ಧು
    *ಎಪಿಎಂಸಿ ಕಾಯ್ದೆ ರದ್ಧು ಪಡಿಸುತ್ತೇವೆ
    *ರೈತರ ಮೇಲಿನ ಎಲ್ಲಾ ಕೇಸ್ ವಾಪಸ್
    *ಪ್ರತಿ ಜಿಲ್ಲೆಗೆ ಒಂದು ರೈತ ಮಾಲ್ ಆರಂಭ
    *ಸಾವಯವ ಕೃಷಿ ಯೋಜನೆಗೆ 2500ಕೋಟಿ ಹೂಡಿಕೆ


    *ಪತ್ರಕರ್ತರ ಕ್ಷೇಮಾಭಿವೃದ್ಧಿ ಸ್ಥಾಪನೆ- 500 ಕೋಟಿ
    *ಸ್ವಸಹಾಯ ಗುಂಪುಗಳಿಗೆ 3 ಲಕ್ಷ ಬಡ್ಡಿರಹಿತ ಸಾಲ
    *ಪ್ರತ್ಯೇಕ ಕೃಷಿ ಕೋಶ ಕೇಂದ್ರ ಸ್ಥಾಪನೆ
    *ಗದಗದಲ್ಲಿ ಹತ್ತಿ ರಫ್ತು ಸಂಸ್ಕರಣ ಕೇಂದ್ರ
    *ಸಿಂಧನೂರಿನಲ್ಲಿ ಅಕ್ಕಿ ಸಂಸ್ಕರಣ ಕೇಂದ್ರ
    *ಬೆಳಗಾವಿ, ಬಾಗಲಕೋಟೆ, ಮಂಡ್ಯದಲ್ಲಿ ಎಥೆನಾಲ್ ಘಟಕ
    *ಕೊಡಗು,ಚಿಕ್ಕಮಗಳೂರಿನಲ್ಲಿ ಕಾಳು ಮೆಣಸು ಸಂಸ್ಕರಣೆ
    *ದೊಡ್ಡಬಳ್ಳಾಪುರದಲ್ಲಿ ಹೂ ಸಂಶೋಧನಾ ಕೇಂದ್ರ
    *ಜೇನು ಸಾಕಾಣಿಕೆಗೆ 50 ಕೋಟಿ


top videos
    First published: