• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಬಾಂಬ್ ಇಟ್ಟ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ; ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬಾಂಬ್ ಇಟ್ಟ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ; ಗೃಹ ಸಚಿವ ಬಸವರಾಜ ಬೊಮ್ಮಾಯಿ

ಸಚಿವ ಬಸವರಾಜ್​ ಬೊಮ್ಮಾಯಿ.

ಸಚಿವ ಬಸವರಾಜ್​ ಬೊಮ್ಮಾಯಿ.

ಕುಮಾರಸ್ವಾಮಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ಕಾಂಗ್ರೆಸ್ ಜೊತೆ ಪೈಪೋಟಿಗಿಳಿದಿದ್ದಾರೆ. ಕುಮಾರಸ್ವಾಮಿ ಓಲೈಕೆ ರಾಜಕಾರಣ ನಿಲ್ಲಿಸಲಿ. ಅವರು ಅಧಿಕಾರದಲ್ಲಿದ್ದಾಗ ನೇಮಕವಾದ ಅಧಿಕಾರಿಗಳೇ ಈಗ ತನಿಖೆ ನಡೆಸುತ್ತಿದ್ದಾರೆ ಎಂದು ಎಚ್​ಡಿಕೆಗೆ ತಿರುಗೇಟು ನೀಡಿದರು.

  • Share this:

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಆರೋಪದ ಮೇಲೆ ಬಂಧನಕ್ಕೆ ಈಡಾಗಿರುವ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.


ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಾಂಬ್ ಇಟ್ಟ ಆದಿತ್ಯ ರಾವ್ ಹಿನ್ನೆಲೆಯನ್ನು ಕಲೆ ಹಾಕಲಾಗುತ್ತಿದೆ. ಬಾಂಬ್ ಪತ್ತೆಯಾದ ಬಳಿಕ ಸಿಸಿಟಿವಿ ದೃಶ್ಯ ಕಲೆ ಹಾಕಿ ಮೂರು ತಂಡಗಳನ್ನ ರಚನೆ ಮಾಡಲಾಗಿತ್ತು. ಆದಿತ್ಯರಾವ್ ಮನೆಯವರು ಹಲವು ವಿಚಾರಗಳನ್ನು ಆತನ ಬಗ್ಗೆ ಹೇಳಿದ್ದಾರೆ. ಆದರೆ ಯಾವುದೂ ಕೂಡ ಅಂತಿಮ ನಿರ್ಧಾರಕ್ಕೆ ಬಂದಿಲ್ಲಾ. ಸಮಗ್ರವಾದ ತನಿಖೆ ನಡೆಯದ ಹೊರತು ನಿಖರವಾಗಿ ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು.


ಎಚ್.ಡಿ. ಕುಮಾರಸ್ವಾಮಿ ಎಫ್​ಎಸ್​ಎಲ್​ ತಜ್ಞರಂತೆ ಮಾತನಾಡುತ್ತಿದ್ದಾರೆ. ಎಚ್‌‌ಡಿಕೆಗೆ ಸರ್ಟಿಫಿಕೇಟ್ ಕೊಡಲಿಕ್ಕೆ ಬರುತ್ತಾ? ತನಿಖೆಯಿಂದ ಎಲ್ಲವೂ ಹೊರಬರಬೇಕು. ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಯ ವಿಚಾರಣೆ ಬಳಿಕ ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ತಿಳಿಯಲಿದೆ. ಕುಮಾರಸ್ವಾಮಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ಕಾಂಗ್ರೆಸ್ ಜೊತೆ ಪೈಪೋಟಿಗಿಳಿದಿದ್ದಾರೆ. ಕುಮಾರಸ್ವಾಮಿ ಓಲೈಕೆ ರಾಜಕಾರಣ ನಿಲ್ಲಿಸಲಿ.
ಅವರು ಅಧಿಕಾರದಲ್ಲಿದ್ದಾಗ ನೇಮಕವಾದ ಅಧಿಕಾರಿಗಳೇ ಈಗ ತನಿಖೆ ನಡೆಸುತ್ತಿದ್ದಾರೆ ಎಂದು ಎಚ್​ಡಿಕೆಗೆ ತಿರುಗೇಟು ನೀಡಿದರು.

top videos


    ಇದನ್ನು ಓದಿ: ಅಣ್ಣನ ಬಗ್ಗೆ ನಮಗೂ ಭಯವಿದೆ; ಮಂಗಳೂರು ಬಾಂಬರ್ ಆದಿತ್ಯ ರಾವ್ ತಮ್ಮ ಅಕ್ಷತ್ ರಾವ್ ಹೇಳಿದ್ದೇನು?

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು