• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • P Sainath: ಮುರುಘಾ ಸ್ವಾಮೀಜಿ ಪ್ರಕರಣದಿಂದ ಮುಜುಗರ, ಪ್ರಶಸ್ತಿ ಹಿಂದಿರುಗಿಸಿದ ಖ್ಯಾತ ಪತ್ರಕರ್ತ ಪಿ ಸಾಯಿನಾಥ್!

P Sainath: ಮುರುಘಾ ಸ್ವಾಮೀಜಿ ಪ್ರಕರಣದಿಂದ ಮುಜುಗರ, ಪ್ರಶಸ್ತಿ ಹಿಂದಿರುಗಿಸಿದ ಖ್ಯಾತ ಪತ್ರಕರ್ತ ಪಿ ಸಾಯಿನಾಥ್!

ಪಿ. ಸಾಯಿನಾಥ್

ಪಿ. ಸಾಯಿನಾಥ್

P Sainath: ಹಿರಿಯ ಪತ್ರಕರ್ತರಾದ ಪಿ ಸಾಯಿನಾಥ್‌ ಅವರು ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿ ಹಾಗೂ  5 ಲಕ್ಷ ರೂ. ಹಣವನ್ನು ವಾಪಸ್‌ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

  • Share this:

ಮುರುಘಾ ಸ್ವಾಮೀಜಿಗೆ (Murugha Shri) ಅತ್ಯಾಚಾರ ಕೇಸ್​ (Rape Case) ಕಂಟಕ ಹೆಚ್ಚಾಗಿದೆ. ಚಿತ್ರದುರ್ಗ ಕೋರ್ಟ್​ ಸ್ವಾಮೀಜಿಗೆ ಶಾಕ್ ಕೊಟ್ಟಿದೆ. ನ್ಯಾಯಾಲಯ ಮುರುಘಾ ಸ್ವಾಮೀಜಿಯನ್ನು ಮೂರು ದಿನಗಳವರೆಗೆ ಪೊಲೀಸ್​ ಕಸ್ಟಡಿಗೆ (Police Custody) ಒಪ್ಪಿಸಿದೆ. ಇದರ ನಡುವೆ ಹಿರಿಯ  ಪತ್ರಕರ್ತ ಪಿ ಸಾಯಿನಾಥ್‌ (P Sainath) ಅವರು ಚಿತ್ರದುರ್ಗದ ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿ ಹಾಗೂ 5 ಲಕ್ಷ ಬಹುಮಾನವನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಅವರು  ಮುರುಘಾ ಶರಣರ ಕುರಿತಾದ ಮಾಧ್ಯಮ ವರದಿಗಳಿಂದ ತಿಳಿದು ನಾನು ವಿಚಲಿತನಾಗಿದ್ದೇನೆ ಎಂದು ಹೇಳುವ ಮೂಲಕ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ.


ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪತ್ರಕರ್ತ:


ಹೌದು, ಹಿರಿಯ ಪತ್ರಕರ್ತರಾದ ಪಿ ಸಾಯಿನಾಥ್‌ ಅವರು ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿ ಹಾಗೂ  5 ಲಕ್ಷ ರೂ. ಹಣವನ್ನು ವಾಪಸ್‌ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಸಾಯಿನಾಥ್‌ ಅವರಿಗೆ 2017 ರಲ್ಲಿ ಮುರುಘಾ ಮಠ ಬಸವಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಅವರು, ‘ಚಿತ್ರದುರ್ಗದ ಶ್ರೀ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಕುರಿತ ಮಾಧ್ಯಮ ವರದಿಗಳಿಂದ ನಾನು ವಿಚಲಿತನಾಗಿದ್ದೇನೆ. ಅವರು ಈಗ ಪೋಕ್ಸೊ ಮತ್ತು SC/ST ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ‘ ಎಂದು ಬರೆದಿದ್ದಾರೆ.



ಪಿ. ಸಾಯಿನಾಥ್ ಸರಣಿ ಟ್ವೀಟ್​:


ಇನ್ನು, ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಅವರು, ‘ಶ್ರೀ ಶರಣರನ್ನು ಹೈಸ್ಕೂಲ್ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧಿಸಲಾಗಿದೆ. ಮಕ್ಕಳ ಮೇಲಿನ ಇಂತಹ ಯಾವುದೇ ಅಪರಾಧಗಳನ್ನು ಖಂಡಿಸಲು ಯಾವುದೇ ಬಲವಾದ ಪದಗಳು ಸಿಗುತ್ತಿಲ್ಲ‘ ಎಂದಿದ್ದಾರೆ.



ಈ ಪ್ರಕರಣದ ನ್ಯಾಯಕ್ಕಾಗಿ 2017ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿಯನ್ನು ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ. ಬಹುಮಾನದ ಮೊತ್ತವನ್ನು ಚೆಕ್ ಮೂಲಕ ಹಿಂದಿರುಗಿಸುತ್ತೇನೆ‘ ಎಂದು ಹೇಳಿಕೊಂಡಿದ್ದಾರೆ.



ಅನೇಕ ಸಾಧಕರಿಗೆ ನೀಡಲಾಗಿದೆ ಬಸವಶ್ರೀ ಪ್ರಶಸ್ತಿ:


ಇನ್ನು, 12ನೇ ಶತಮಾನದ ಸಮಾಜ ಸುಧಾರಕರಾಧ ಬಸವಣ್ಣನವರ ಹೆಸರಿನಲ್ಲಿ ಬಸವಶ್ರೀ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 1997ರಿಂದ ಮುರುಘಾ ಮಠ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸುತ್ತಾ ಬಂದಿದೆ. ಶಂಕರ ಬಿದರಿ,  ನಾರಾಯಣಮೂರ್ತಿ,  ಪಿ.ಸಾಯಿನಾಥ, ಕಾಮೇಗೌಡ, ಚಂದ್ರಶೇಖರ ಪಾಟೀಲ, ಅಣ್ಣಾ ಹಜಾರೆ, ಕಿರಣ್ ಬೇಡಿ, ಪಿ.ಟಿ ಉಷಾ ಮತ್ತು ಪುನೀತ್​ ರಾಜ್​ಕುಮಾರ್​ ಅವರಿಗೂ ಈ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.


ಇದನ್ನೂ ಓದಿ: Murugha Mutt Case: ಮುರುಘಾ ಸ್ವಾಮೀಜಿಗೆ ಪೊಲೀಸ್ ಕಸ್ಟಡಿ, ಮೈಮೇಲೆ ಪೆಟ್ರೋಲ್ ಸುರಿದುಕೊಂಡ ಭಕ್ತ!


ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ದಾಖಲು:


ಪೋಕ್ಸೋ ಕೇಸ್​ನಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಸ್ವಾಮೀಜಿ ಗುರುವಾರ ತಡರಾತ್ರಿ ಜೈಲು ಸೇರಿದ್ದರು. ಆದರೆ ಏಕಾಏಕಿ ಆರೋಗ್ಯ ಹದಗೆಟ್ಟಿದೆ ಎಂದಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನೋಡ ನೋಡುತ್ತಿದ್ದಂತೆಯೇ ಸ್ವಾಮೀಜಿ ಆರೋಗ್ಯ ತೀವ್ರ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದರು.

First published: