ಮುರುಘಾ ಸ್ವಾಮೀಜಿಗೆ (Murugha Shri) ಅತ್ಯಾಚಾರ ಕೇಸ್ (Rape Case) ಕಂಟಕ ಹೆಚ್ಚಾಗಿದೆ. ಚಿತ್ರದುರ್ಗ ಕೋರ್ಟ್ ಸ್ವಾಮೀಜಿಗೆ ಶಾಕ್ ಕೊಟ್ಟಿದೆ. ನ್ಯಾಯಾಲಯ ಮುರುಘಾ ಸ್ವಾಮೀಜಿಯನ್ನು ಮೂರು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ (Police Custody) ಒಪ್ಪಿಸಿದೆ. ಇದರ ನಡುವೆ ಹಿರಿಯ ಪತ್ರಕರ್ತ ಪಿ ಸಾಯಿನಾಥ್ (P Sainath) ಅವರು ಚಿತ್ರದುರ್ಗದ ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿ ಹಾಗೂ 5 ಲಕ್ಷ ಬಹುಮಾನವನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಮುರುಘಾ ಶರಣರ ಕುರಿತಾದ ಮಾಧ್ಯಮ ವರದಿಗಳಿಂದ ತಿಳಿದು ನಾನು ವಿಚಲಿತನಾಗಿದ್ದೇನೆ ಎಂದು ಹೇಳುವ ಮೂಲಕ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ.
ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪತ್ರಕರ್ತ:
ಹೌದು, ಹಿರಿಯ ಪತ್ರಕರ್ತರಾದ ಪಿ ಸಾಯಿನಾಥ್ ಅವರು ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿ ಹಾಗೂ 5 ಲಕ್ಷ ರೂ. ಹಣವನ್ನು ವಾಪಸ್ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಸಾಯಿನಾಥ್ ಅವರಿಗೆ 2017 ರಲ್ಲಿ ಮುರುಘಾ ಮಠ ಬಸವಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಚಿತ್ರದುರ್ಗದ ಶ್ರೀ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಕುರಿತ ಮಾಧ್ಯಮ ವರದಿಗಳಿಂದ ನಾನು ವಿಚಲಿತನಾಗಿದ್ದೇನೆ. ಅವರು ಈಗ ಪೋಕ್ಸೊ ಮತ್ತು SC/ST ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ‘ ಎಂದು ಬರೆದಿದ್ದಾರೆ.
1/5. I am most disturbed to learn from media reports of the appalling developments involving the pontiff of the Shri Murughamath in Chitradurga, Shri Shivamurthy Murugha Sharanaru. He now faces a case and charges under the POCSO and SC/ST act.#MurughaMutt
— P. Sainath (@PSainath_org) September 2, 2022
ಇನ್ನು, ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಶ್ರೀ ಶರಣರನ್ನು ಹೈಸ್ಕೂಲ್ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧಿಸಲಾಗಿದೆ. ಮಕ್ಕಳ ಮೇಲಿನ ಇಂತಹ ಯಾವುದೇ ಅಪರಾಧಗಳನ್ನು ಖಂಡಿಸಲು ಯಾವುದೇ ಬಲವಾದ ಪದಗಳು ಸಿಗುತ್ತಿಲ್ಲ‘ ಎಂದಿದ್ದಾರೆ.
2/5. Shri Sharanaru has been arrested for alleged sexual abuse of children, specifically high school girls. No words are strong enough to condemn any such offences against children.#MurughaMutt
— P. Sainath (@PSainath_org) September 2, 2022
3/5. In solidarity with the survivors and with the cause of Justice in this case, I hereby return the Basavashree award (and the Rs. 5 lakhs prize money that came with it, by cheque) conferred on me by the Math in 2017.#MurughaMutt
— P. Sainath (@PSainath_org) September 2, 2022
ಇನ್ನು, 12ನೇ ಶತಮಾನದ ಸಮಾಜ ಸುಧಾರಕರಾಧ ಬಸವಣ್ಣನವರ ಹೆಸರಿನಲ್ಲಿ ಬಸವಶ್ರೀ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 1997ರಿಂದ ಮುರುಘಾ ಮಠ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸುತ್ತಾ ಬಂದಿದೆ. ಶಂಕರ ಬಿದರಿ, ನಾರಾಯಣಮೂರ್ತಿ, ಪಿ.ಸಾಯಿನಾಥ, ಕಾಮೇಗೌಡ, ಚಂದ್ರಶೇಖರ ಪಾಟೀಲ, ಅಣ್ಣಾ ಹಜಾರೆ, ಕಿರಣ್ ಬೇಡಿ, ಪಿ.ಟಿ ಉಷಾ ಮತ್ತು ಪುನೀತ್ ರಾಜ್ಕುಮಾರ್ ಅವರಿಗೂ ಈ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಇದನ್ನೂ ಓದಿ: Murugha Mutt Case: ಮುರುಘಾ ಸ್ವಾಮೀಜಿಗೆ ಪೊಲೀಸ್ ಕಸ್ಟಡಿ, ಮೈಮೇಲೆ ಪೆಟ್ರೋಲ್ ಸುರಿದುಕೊಂಡ ಭಕ್ತ!
ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ದಾಖಲು:
ಪೋಕ್ಸೋ ಕೇಸ್ನಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಸ್ವಾಮೀಜಿ ಗುರುವಾರ ತಡರಾತ್ರಿ ಜೈಲು ಸೇರಿದ್ದರು. ಆದರೆ ಏಕಾಏಕಿ ಆರೋಗ್ಯ ಹದಗೆಟ್ಟಿದೆ ಎಂದಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನೋಡ ನೋಡುತ್ತಿದ್ದಂತೆಯೇ ಸ್ವಾಮೀಜಿ ಆರೋಗ್ಯ ತೀವ್ರ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ