• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Elections 2023: ಬಿಜೆಪಿ ಸೇರ್ಪಡೆಯಾದ ಕಾಗೋಡು ತಿಮ್ಮಪ್ಪ ಪುತ್ರಿ; ಎದೆಗೆ ಚೂರಿ ಹಾಕಿದಂತಾಗಿದೆ ಎಂದ ‘ಕೈ’ ಹಿರಿಯ ನಾಯಕ!

Karnataka Elections 2023: ಬಿಜೆಪಿ ಸೇರ್ಪಡೆಯಾದ ಕಾಗೋಡು ತಿಮ್ಮಪ್ಪ ಪುತ್ರಿ; ಎದೆಗೆ ಚೂರಿ ಹಾಕಿದಂತಾಗಿದೆ ಎಂದ ‘ಕೈ’ ಹಿರಿಯ ನಾಯಕ!

ಕಾಂಗ್ರೆಸ್​ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ

ಕಾಂಗ್ರೆಸ್​ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ

ಕಾಂಗ್ರೆಸ್ ಪಕ್ಷದ ಅಸಮಾಧಾನಿತ ನಾಯಕಿ ರಾಜ ನಂದಿನಿ ಬಿಜೆಪಿ ಸೇರ್ಪಡೆಯಾಗಿದ್ದು, ರಾಜನಂದಿನಿ ಅವರ ಬಿಜೆಪಿ ಸೇರಿದ್ದಕ್ಕೆ ಸಾಗರದಲ್ಲಿ ಬಿಜೆಪಿ ಗೆಲುವು ಫಿಕ್ಸ್ ಎಂದು ಬಿಎಸ್​ವೈ ಹೇಳಿದ್ದಾರೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ಬಿಜೆಪಿಗೆ (BJP) ಭೀಮ ಬಲ ಸಿಕ್ಕಿದ್ದು, ಇಂದು ಕಾಂಗ್ರೆಸ್​ (Congress) ಪಕ್ಷದ ಹಿರಿಯ ನಾಯಕರಾಗಿರುವ ಕಾಗೋಡು ತಿಮ್ಮಪ್ಪ (Kagodu Thimmappa) ಪುತ್ರಿ ರಾಜನಂದಿನಿ (Rajanandini) ಅವರು ಬೆಂಗಳೂರಲ್ಲಿ (Bengaluru) ರಾಜನಂದಿನಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಬಿಎಸ್​ವೈ (BS Yediyurappa), ಹಾಲಪ್ಪ ಅವರ ಸಮ್ಮುಖದಲ್ಲಿ ರಾಜನಂದಿನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕಾಗೋಡು ತಿಮ್ಮಪ್ಪ ಅವರು, ಮಗಳ ನಿರ್ಧಾರದಿಂದ ಬೇಸರವಾಗಿದೆ. ರಾಜನಂದಿನಿ ಮನವೊಲಿಸುವ ಕಾರ್ಯವನ್ನು ಮಾಡುತ್ತೇನೆ ಎಂದು ತಿಳಿಸಿದ್ದಾರೆ.


ಸಾಗರದಲ್ಲಿ ಬಿಜೆಪಿ ಗೆಲುವು ಫಿಕ್ಸ್


ಕಾಂಗ್ರೆಸ್ ಪಕ್ಷದ ಅಸಮಾಧಾನಿತ ನಾಯಕಿ ರಾಜ ನಂದಿನಿ ಬಿಜೆಪಿ ಸೇರ್ಪಡೆಯಾಗಿದ್ದು, ರಾಜನಂದಿನಿ ಅವರ ಬಿಜೆಪಿ ಸೇರಿದ್ದಕ್ಕೆ ಸಾಗರದಲ್ಲಿ ಬಿಜೆಪಿ ಗೆಲುವು ಫಿಕ್ಸ್ ಎಂದು ಬಿಎಸ್​ವೈ ಹೇಳಿದ್ದಾರೆ.


ಇದನ್ನೂ ಓದಿ: Karnataka Elections 2023: ಒಬ್ಬರಿಬ್ಬರು ಬೇರೆ ಕಡೆ ಹೋದರೆ ಚುನಾವಣೆ ಮೇಲೆ ಪರಿಣಾಮ ಬೀಳುವುದಿಲ್ಲ; ಬಂಡಾಯ ನಾಯಕರಿಗೆ ಬಿಎಸ್​ವೈ ಟಾಂಗ್


ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಾಗರ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜ ನಂದಿನಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷದ ಧ್ವಜ ನೀಡಿ, ಶಾಲು ಹಾಕಿ ರಾಜ ನಂದಿನಿ ಅವರನ್ನು ಪಕ್ಷಕ್ಕೆ ನಾಯಕರು ಬರಮಾಡಿಕೊಂಡಿದ್ದಾರೆ. ಇದೇ ವೇಳೆ ಅಥ್ಲೀಟ್ ತೀರ್ಥ ಇಸ್ಕಾ ಸಹ ಬಿಜೆಪಿ ಸೇರ್ಪಡೆಯಾಗಿದ್ದಾರೆ.



ಮಗಳು ಈ ರೀತಿ ಮಾಡುತ್ತಾರೆ ಅಂತ ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಗೋಡು ತಿಮ್ಮಪ್ಪ ಅವರು, ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದಿದ್ದಾರೆ. ಅಲ್ಲದೆ, ಪುತ್ರಿ ಈ ರೀತಿ ಮಾಡಿದ್ದು ನನ್ನ ದೌರ್ಭಾಗ್ಯ. ಪುತ್ರಿಯನ್ನು ಸಂಪರ್ಕ ಮಾಡುವ ಕೆಲಸ ಮಾಡುತ್ತೇನೆ.


ನಾನು ಕಾಂಗ್ರೆಸ್​ ಪಕ್ಷವನ್ನು ಬಿಟ್ಟು ಬೇರೆ ಯಾವುದೇ ಪಕ್ಷಕ್ಕೂ ಹೋಗೋದಿಲ್ಲ. ನನ್ನ ಮಗಳು ಈ ರೀತಿ ಮಾಡುತ್ತಾರೆ ಅಂತ ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಇದು ಆಗಬಾರದಿತ್ತು, ನಾನು ಕಾಂಗ್ರೆಸ್​ ಪರವೇ ಕೆಲಸ ಮಾಡ್ತೀನಿ. ಇದರ ಹಿಂದೆ ಹಾಲಪ್ಪ ಇರಬಹುದು ಏನೋ, ಒಂದು ದಿನ ಕೂಡ ನನ್ನ ಬಳಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಕಾರ್ಯಕ್ರಮದ ಬಳಿಕ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ಕಾಗೋಡು ತಿಮ್ಮಪ್ಪನ‌ ಮಗಳಾದ ರಾಜ ನಂದಿನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಹಿಂದುಳಿದ ವರ್ಗದಿಂದ ಅವರು ಬಂದಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿದ್ದು, ಬಿಜೆಪಿ ಸೇರಿರುವುದರಿಂದ ಪಕ್ಷಕ್ಕೆ ಸಾಕಷ್ಟು ಬಲ ಬಂದಿದೆ. ಶಿವಮೊಗ್ಗದ ಎಲ್ಲಾ ಕಡೆ ಅಭ್ಯರ್ಥಿಗಳ ಗೆಲುವಿಗೆ ಇವರ ಶಕ್ತಿ ಪ್ರಮುಖ ಆಗಲಿದೆ. ನಮ್ಮ ಸರ್ಕಾರ ಬಂದಮೇಲೆ ಅವರಿಗೆ ಸೂಕ್ತ ಸ್ಥಾನಮಾನ ಕೊಡುವ ತೀರ್ಮಾನ ಮಾಡಿದ್ದೇವೆ ಎಂದರು.

top videos
    First published: