ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ.
1/4 pic.twitter.com/Nhxp79VM2i
— H D Kumaraswamy (@hd_kumaraswamy) August 8, 2020
ಈ ಸಂಬಂಧ ಖಾಸಗಿ ಕಂಪನಿ ಜೊತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ.
2/4
— H D Kumaraswamy (@hd_kumaraswamy) August 8, 2020
ಕೊರೋನಾ ವೈರಸ್ ನಂತರ ಎದುರಾದ ಲಾಕ್ ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು.
3/4
— H D Kumaraswamy (@hd_kumaraswamy) August 8, 2020
ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ ಎಂಬಂತೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯುವ ಇಲ್ಲ ಆನ್ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸಲ್ಲ.
4/4
— H D Kumaraswamy (@hd_kumaraswamy) August 8, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ