Karnataka Bandh: ಹಾಸನದಲ್ಲಿ ರೈತರ ಪ್ರತಿಭಟನೆಗೆ ಕರವೇ ಬೆಂಬಲ; ಬೆಂಗಳೂರು- ಮಂಗಳೂರು ಹೈವೇ ಬಂದ್
ಹಾಸನದ ಭುವನಹಳ್ಳಿಯಲ್ಲಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ಹೀಗಾಗಿ, ಈ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದ ಸಾಲುಗಟ್ಟಿ ನಿಂತ ವಾಹನಗಳ ಸವಾರರು ಪರದಾಡುತ್ತಿದ್ದಾರೆ.
news18-kannada Updated:September 28, 2020, 10:38 AM IST

ಹಾಸನದಲ್ಲಿ ಬೆಂಗಳೂರು-ಮಂಗಳೂರು ಹೈವೇ ಬಂದ್
- News18 Kannada
- Last Updated: September 28, 2020, 10:38 AM IST
ಬೆಂಗಳೂರು (ಸೆ. 28): ಕೇಂದ್ರ ಮತ್ತು ರಾಜ್ಯ ಸರ್ಕಾರ ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಜ್ಯಾದ್ಯಂತ ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಲ್ಲ ಜಿಲ್ಲೆಗಳಲ್ಲೂ ಕರ್ನಾಟಕ ಬಂದ್ನ ಕಾವು ಹೆಚ್ಚತೊಡಗಿದೆ. ಅದೇರೀತಿ, ಹಾಸನದಲ್ಲೂ ಕರ್ನಾಟಕ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತರ ಪ್ರತಿಭಟನೆಗೆ ಕೈಜೋಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಸನದಲ್ಲಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ.
ಹಾಸನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ. ಹಾಸನದ ಭುವನಹಳ್ಳಿಯಲ್ಲಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ಹೀಗಾಗಿ, ಈ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದ ಸಾಲುಗಟ್ಟಿ ನಿಂತ ವಾಹನಗಳ ಸವಾರರು ಪರದಾಡುತ್ತಿದ್ದಾರೆ. ಬೆಂಗಳೂರು, ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: Karnataka Bandh LIVE: ಕರ್ನಾಟಕ ಬಂದ್; ಬೆಂಗಳೂರಿನಲ್ಲಿ ನೇಗಿಲು ಹೊತ್ತು, ಅರೆಬೆತ್ತಲಾಗಿ ಪ್ರತಿಭಟನೆ
ಕರ್ನಾಟಕ ಬಂದ್ ಹಿನ್ನೆಲೆ ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ ನಡೆಸಿದೆ. ಬಂದ್ ವೇಳೆ ಹಾಸನದಲ್ಲಿ ಹೆದ್ದಾರಿ ಮಧ್ಯೆ ಆಂಬುಲೆನ್ಸ್ ಸಿಲುಕಿದೆ. ಹಾಸನ ಹೊರವಲಯದ ಭುವನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ್ದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಬಂದ್ನಲ್ಲಿ ವಾಹನಗಳ ಮಧ್ಯೆ ಆ್ಯಂಬುಲೆನ್ಸ್ ಸಿಲುಕಿತ್ತು ಕೊನೆಗೆ ಪೊಲೀಸರು ಆ್ಯಂಬುಲೆನ್ಸ್ಗೆ ದಾರಿ ಮಾಡಿಕೊಟ್ಟರು. ಪ್ರತಿಭಟನಾಕಾರರು ಕೂಡ ಕೆಲಕಾಲ ಪ್ರತಿಭಟನೆ ನಿಲ್ಲಿಸಿ, ಆ್ಯಂಬುಲೆನ್ಸ್ಗೆ ದಾರಿ ಮಾಡಿಕೊಟ್ಟರು.
ಕರ್ನಾಟಕ ಬಂದ್ ಇದ್ದರೂ ಇಂದು ಸರ್ಕಾರಿ ಸ್ವಾಮ್ಯದ ವಾಹನಗಳು ಓಡಾಡಲಿವೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಓಡಾಟ ಮುಂದುವರೆದಿದೆ. ಅಂಗಡಿ ಮುಂಗಟ್ಟುಗಳು, ಮಾಲ್ಗಳು ಮುಚ್ಚಿರಲಿವೆ. ಆಟೋ, ಓಲಾ, ಊಬರ್ ಮುಂತಾದ ಖಾಸಗಿ ಸಾರಿಗೆ ವ್ಯವಸ್ಥೆ ಬಂದ್ಗೆ ಬೆಂಬಲ ಸೂಚಿಸಿದ್ದು, ಇವು ಸಂಪೂರ್ಣ ಸ್ತಬ್ಧವಾಗಲಿದೆ. ಉಳಿದಂತೆ ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೊಲ್ ಬಂಕ್, ತರಕಾರಿ-ಹಣ್ಣು ಮುಂತಾದ ಅಗತ್ಯ ಸೇವೆಗಳು ಎಂದಿನಂತೆ ಮುಂದುವರೆಯಲಿವೆ.
ಹಾಸನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ. ಹಾಸನದ ಭುವನಹಳ್ಳಿಯಲ್ಲಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ಹೀಗಾಗಿ, ಈ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದ ಸಾಲುಗಟ್ಟಿ ನಿಂತ ವಾಹನಗಳ ಸವಾರರು ಪರದಾಡುತ್ತಿದ್ದಾರೆ. ಬೆಂಗಳೂರು, ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆ ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ ನಡೆಸಿದೆ. ಬಂದ್ ವೇಳೆ ಹಾಸನದಲ್ಲಿ ಹೆದ್ದಾರಿ ಮಧ್ಯೆ ಆಂಬುಲೆನ್ಸ್ ಸಿಲುಕಿದೆ. ಹಾಸನ ಹೊರವಲಯದ ಭುವನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ್ದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಬಂದ್ನಲ್ಲಿ ವಾಹನಗಳ ಮಧ್ಯೆ ಆ್ಯಂಬುಲೆನ್ಸ್ ಸಿಲುಕಿತ್ತು ಕೊನೆಗೆ ಪೊಲೀಸರು ಆ್ಯಂಬುಲೆನ್ಸ್ಗೆ ದಾರಿ ಮಾಡಿಕೊಟ್ಟರು. ಪ್ರತಿಭಟನಾಕಾರರು ಕೂಡ ಕೆಲಕಾಲ ಪ್ರತಿಭಟನೆ ನಿಲ್ಲಿಸಿ, ಆ್ಯಂಬುಲೆನ್ಸ್ಗೆ ದಾರಿ ಮಾಡಿಕೊಟ್ಟರು.
ಕರ್ನಾಟಕ ಬಂದ್ ಇದ್ದರೂ ಇಂದು ಸರ್ಕಾರಿ ಸ್ವಾಮ್ಯದ ವಾಹನಗಳು ಓಡಾಡಲಿವೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಓಡಾಟ ಮುಂದುವರೆದಿದೆ. ಅಂಗಡಿ ಮುಂಗಟ್ಟುಗಳು, ಮಾಲ್ಗಳು ಮುಚ್ಚಿರಲಿವೆ. ಆಟೋ, ಓಲಾ, ಊಬರ್ ಮುಂತಾದ ಖಾಸಗಿ ಸಾರಿಗೆ ವ್ಯವಸ್ಥೆ ಬಂದ್ಗೆ ಬೆಂಬಲ ಸೂಚಿಸಿದ್ದು, ಇವು ಸಂಪೂರ್ಣ ಸ್ತಬ್ಧವಾಗಲಿದೆ. ಉಳಿದಂತೆ ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೊಲ್ ಬಂಕ್, ತರಕಾರಿ-ಹಣ್ಣು ಮುಂತಾದ ಅಗತ್ಯ ಸೇವೆಗಳು ಎಂದಿನಂತೆ ಮುಂದುವರೆಯಲಿವೆ.