• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬಿಜೆಪಿ ಕೆಲ ನಾಯಕರಿಂದ ಅರುಣ್ ಸಿಂಗ್ ಮೇಲೆ ಒತ್ತಡ

ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬಿಜೆಪಿ ಕೆಲ ನಾಯಕರಿಂದ ಅರುಣ್ ಸಿಂಗ್ ಮೇಲೆ ಒತ್ತಡ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಅರುಣ್ ಸಿಂಗ್ ಜೂನ್ 16 ರಾಜ್ಯಕ್ಕೆ ಆಗಮಿಸಲಿದ್ದು 3 ದಿನ ಬೆಂಗಳೂರಿನಲ್ಲೇ ಠಿಕಾಣಿ ಹೂಡಲಿದ್ದಾರೆ. ಅರುಣ್ ಸಿಂಗ್ ಅವರಿಗೆ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕೆಲ ನಾಯಕರು ಒತ್ತಾಯ ಹಾಕುತ್ತಿದ್ದಾರೆ

  • Share this:

ನವದೆಹಲಿ (ಜೂ. 12): ಪ್ರತಿ ದಿನ ನಾಯಕತ್ವ ಬದಲಾವಣೆಯ ಸುತ್ತ ಯಡಿಯೂರಪ್ಪ ಪರ ವಿರೋಧ ಹೇಳಿಕೆಗಳು ಹೊರ ಬೀಳುತ್ತಿದ್ದು ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಕೊರೋನಾ ಕಾಲದಲ್ಲಿ ಆಡಳಿತದ ಮೇಲೂ ದುಷ್ಪರಿಣಾಮ ಬೀರಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಹೈಕಮಾಂಡ್ ಅಖಾಡಕ್ಕಿ ಇಳಿದಿದ್ದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ರಾಜ್ಯಕ್ಕೆ ಕಳುಹಿಸುತ್ತಿದೆ. ಅರುಣ್ ಸಿಂಗ್ ಜೂನ್ 16 ಅಥವಾ 17ರಂದು ರಾಜ್ಯಕ್ಕೆ ಆಗಮಿಸಲಿದ್ದು ಮೂರು ದಿನ ಬೆಂಗಳೂರಿನಲ್ಲೇ ಠಿಕಾಣಿ ಹೂಡಲಿದ್ದಾರೆ. ಅರುಣ್ ಸಿಂಗ್ ಆಗಮನದ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿದುಬಂದಿದೆ.


ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ  ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುತ್ತಿರುವಂತೆ  ಕೆಲ ಬಂಡಾಯ ಶಾಸಕರು, 'ನಿರ್ಲಿಪ್ತರು' ಎನಿಸಿಕೊಂಡಿದ್ದಾರೆ. ಮತ್ತೆ ಕೆಲ ಹಿರಿಯರು ಹೊಸ ವರಸೆ ಆರಂಭಿಸಿದ್ದಾರೆ‌. ಇದೇ ಹಿನ್ನಲೆ ಬಂಡಾಯ ಪಾಳೆಯದಲ್ಲಿ ಗುರುತಿಸಿಕೊಂಡಿರುವ ನಾಯಕರು ಅರುಣ್​ ಸಿಂಗ್​, ಕೇವಲ ಆಯ್ದ ಕೆಲ ನಾಯಕರೊಂದಿಗೆ ಮಾತ್ರ  ಮಾತನಾಡದೇ, ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಬೇಕು. ಇದೇ ಕಾರಣಕ್ಕೆ  ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕೂಡ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.


ಸಿಎಂ ಯಡಿಯೂರಪ್ಪ ವಿರೋಧಿ ಪಾಳೆಯವು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಡ ಹೇರುತ್ತಿದ್ದು, ಈಗಾಗಲೇ ಅರುಣ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮನವಿ ಮಾಡಿರುವ ಕೆಲ ಹಿರಿಯ ಶಾಸಕರು, ಬಂಡಯಗಾರರು ಮತ್ತು ಹಿರಿಯರು 'ಕೆಲವರ ಅಭಿಪ್ರಾಯ ಎಲ್ಲರ ಅಭಿಪ್ರಾಯ ಆಗಿರುವುದಿಲ್ಲ. ಶಾಸಕಾಂಗ ಸಭೆ ಕರೆದರೆ ಎಲ್ಲಾ ಶಾಸಕರಿಗೂ ಅವಕಾಶ ಸಿಗಲಿದೆ. ಆದುದರಿಂದ ಶಾಸಕರ ಸಮಸ್ಯೆ ಕೇಳಲು ಶಾಸಕಾಂಗ ಪಕ್ಷದ ಸಭೆಯೇ ಸೂಕ್ತ. ಗೊಂದಲ ಬಗೆಹರಿಸಲು ಶಾಸಕಾಂಗ ಪಕ್ಷದ ಸಭೆ ಕರೆಯುವುದೇ ಸರಿಯಾದ ಮಾರ್ಗ' ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ.


ಇದನ್ನು ಓದಿ: ಜಮೀರ್​ ಪದೇ ಪದೇ ಕರೆಯುತ್ತಾರೆ ಅಂತ ಬರುತ್ತೇನೆ ಅಷ್ಟೇ; ಚಾಮರಾಜಪೇಟೆಯಲ್ಲಿ ಸ್ಪರ್ಧೆ ಇಲ್ಲ; ಸಿದ್ಧರಾಮಯ್ಯ


ಇನ್ನೊಂದೆಡೆ ಯಡಿಯೂರಪ್ಪ ಪಾಳೆಯದಿಂದ ಶಾಸಕಾಂಗ ಪಕ್ಷದ ಸಭೆ ನಡೆಸದಂತೆ ನೋಡಿಕೊಳ್ಳುವ ತಂತ್ರ ರೂಪಿಸಲಾಗುತ್ತಿದೆ ಎಂದು ಕೇಳಿಬಂದಿದೆ. ಕೋರ್ ಕಮಿಟಿ ಸಭೆ, ಹಿರಿಯ ನಾಯಕರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದರೆ ಸಾಕು. ಕೊರೋನಾ ಸಮಯದಲ್ಲಿ 150 ಶಾಸಕರನ್ನು ಸಭೆ ಸೇರಿಸುವುದು ಸರಿಯಲ್ಲ.‌ ವಿಧಾನಸಭಾ ಸದಸ್ಯರು ಮತ್ತು ವಿಧಾನ ಪರಿಷತ್ ಸದಸ್ಯರು ಎಲ್ಲರೂ ಸೇರಿ150 ಶಾಸಕರು ಸಭೆ ನಡೆಸಿದರೆ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ ಆಗಲಿದೆ. ಪ್ರತಿಪಕ್ಷಗಳಿಗೆ ನಾವೇ ಅಸ್ತ್ರ ಕೊಟ್ಟಂತಾಗುತ್ತದೆ. ರಾಜಕೀಯವಾಗಿ ಇನ್ನಷ್ಟು ಗೊಂದಲ ಸೃಷ್ಟಿಯಾಗಲು ಕಾರಣವಾಗುತ್ತದೆ. ಆದುದರಿಂದ ಶಾಸಕಾಂಗ ಸಭೆ ಕರೆಯದೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ‌ಅರುಣ್ ಸಿಂಗ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

top videos
    First published: