ಬೆಂಗಳೂರು (ಮಾ. 17): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಬಿಜೆಪಿ ಆರೋಪ ಮಾಡಿತ್ತು. ಇದೆಲ್ಲದರ ಸೂತ್ರಧಾರ ಡಿ.ಕೆ. ಶಿವಕುಮಾರ್ ಎಂದು ಪರೋಕ್ಷವಾಗಿ ಅವರತ್ತಲೇ ಬೆರಳು ತೋರಿಸಿತ್ತು. ಇದಕ್ಕೆ ಪೂರಕವಾಗಿ ಇಂದು ಡಿಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಆರೋಪಿ ಜೊತೆಗಿರುವ ಫೋಟೋವೊಂದನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಕೂಡ ಬಿಜೆಪಿಯ ಪ್ರಧಾನಿ, ಸಂಸದರು ಹಲವು ಆರೋಪಿಗಳೊಂದಿಗೆ ಇರುವ ಫೋಟೋಗಳನ್ನು ಟ್ವೀಟ್ ಮಾಡಿದೆ.
ನಿನ್ನೆ ಟ್ವೀಟ್ ಮಾಡಿದ್ದ ಬಿಜೆಪಿ, ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವಿರುದ್ಧ ದಾಳಿ ನಡೆಸಿತ್ತು.
ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ.
ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ.
ರಾಹುಲ್ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? pic.twitter.com/bItxY8U7At
— BJP Karnataka (@BJP4Karnataka) March 16, 2021
"ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಭ್ರಷ್ಟಾಚಾರ ಆರೋಪಿ ಮಹಾ ನಾಯಕ" ಎನ್ನುತ್ತ @BSYBJP ಅವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ?!@BasanagoudaBJP ವಿಜಯೇಂದ್ರ ಸಿಡಿ ಫ್ಯಾಕ್ಟರಿ ಮೂಲಕ ಬ್ಲಾಕ್ಮೇಲ್ ಮಾಡಲಾಗುತ್ತದೆ ಎಂಬ ಮಾತನ್ನ ನೀವೂ ಪರೋಕ್ಷವಾಗಿ ಹೇಳುತ್ತಾ #BSYmuktaBJP
ಅಭಿಯಾನ ಮುಂದುವರೆಸುತ್ತಿರುವಿರಾ! https://t.co/vXF0LgLQFa
— Karnataka Congress (@INCKarnataka) March 16, 2021
ಆ ಪ್ರಕರಣದ ʼಮಾಸ್ಟರ್ ಮೈಂಡ್ಗಳೆಲ್ಲರೂʼ ಮಹಾ ನಾಯಕನೊಂದಿಗೆ ಏಕೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನ ರಾಜ್ಯದ ಜನತೆಯನ್ನು ಕಾಡುತ್ತಿದೆ.
ಈ ಸಂಬಂಧ ಏಕೆ, ಹೇಗೆ ಮತ್ತು ಯಾಕಾಗಿ ಇತ್ತು ಎಂಬುದನ್ನು ʼರಿಂಗ್ ಮಾಸ್ಟರ್ʼ ಬಗೆಹರಿಸುವರೇ!?
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಇರುವ ಸಂಬಂಧವೇನು? pic.twitter.com/lMBw5SN9p5
— BJP Karnataka (@BJP4Karnataka) March 17, 2021
ಹೆಣ್ಣು ಮಕ್ಕಳ ದುರ್ಬಳಕೆಯನ್ನು ಸಮರ್ಥಿಸುತ್ತಿರುವ @BJP4Karnataka
ದೇಶದ್ರೋಹಿ & ಅತ್ಯಾಚಾರಿಯೊಂದಿಗೆ @narendramodi ಅವರಿಗೆ ಏನು ಸಂಬಂಧ?@Tejasvi_Surya ಡ್ರಗ್ ಡೀಲರ್ಗೂ ಏನು ಸಂಬಂಧ?@mepratap ಹಾಗೂ ಈ ಆರೋಪಿಗೂ ಏನು ಸಂಬಂಧ?@LaxmanSavadi & ಯುವರಾಜನಿಗೂ ಏನು ಸಂಬಂಧ?
ಹೆಗಲು ಮುಟ್ಟಿಕೊಂಡು ತಡೆಯಾಜ್ಞೆ ತಂದಿದ್ಯಾರು? https://t.co/OjOlKk4kHu pic.twitter.com/70voo4asIF
— Karnataka Congress (@INCKarnataka) March 17, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ