ಬೆಂಗಳೂರು(ಫೆ.17): ರಾಜ್ಯ ವಿಧಾನಸಭೆ ಚುನಾವಣೆ (Karnataka Budget 2023) ಸಮೀಪಿಸುತ್ತಿದೆ. ಹೀಗಿರುವಾಗ ಜನಸ್ನೇಹಿ ಬಜೆಟ್ ಮಂಡನೆ ಬಿಜೆಪಿ ಎದುರಿಗಿರುವ ಅಗ್ನಿ ಪರೀಕ್ಷೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಬಹುನಿರೀಕ್ಷಿತ ಬಜೆಟ್ ಮಂಡಿಸುತ್ತಿದ್ದು, ಇದರಲ್ಲಿ ನಿರೀಕ್ಷೆಯಂತೆ ಸ್ತ್ರೀ ಸಬಲೀಕರಣಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಹಾಗಾದ್ರೆ ಈ ಬಾರಿಯು ಬಜೆಟ್ನಲ್ಲಿ ಸ್ತ್ರೀ ಸಬಲೀಕರಣ ನಿಟ್ಟಿನಲ್ಲಿ ಘೋಷಣೆಯಾದ ಯೋಜನೆಗಳೇನು? ಇಲ್ಲಿದೆ ನೋಡಿ ಪಟ್ಟಿ
ಹೌದು ಚುನಾವಣಾ ಹೊಸ್ತಿಲಲ್ಲಿ ಮಹಿಳಾ ಸಬಲೀಕರಣ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಆಕರ್ಷಕ ಕ್ರಮಗಳನ್ನು ಕೈಗೊಳ್ಳಲಾಗಿದೆ.
* ರಾಜ್ಯ ಬಜೆಟ್ ಮಂಡನೆ ಅನ್ವಯ 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡುವ ಬಗ್ಗೆ ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಮನೆಯಲ್ಲೇ ಇರುವ ಅನೇಕ ಗೃಹಿಣಿಯರು ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡಲಿದೆ.
* ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನವನ್ನೂ ಈ ಬಾರಿಯ ಬಜೆಟ್ನಲ್ಲಿ ಘೋಷಿಸಲಾಗಿದೆ. ಆರ್ಥಿಕವಾಗಿ ಕಷ್ಟವನ್ನೆದುರಿಸುತ್ತಿರುವ ಬಡ ವರ್ಷಗ ಮಹಿಳೆಯರಿಗೆ ಈ ಯೋಜನೆ ಲಾಭ ತಂದುಕೊಡಲಿದೆ.
* ಅತ್ತ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಬೊಮ್ಮಾಯಿ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಸ್ತ್ರೀ ಸಬಲೀಕರಣಕ್ಕೆ ಹೆಚ್ಚು ಬಲ ನೀಡಲಿದ್ದು, ಹೆಣ್ಮಕ್ಕಳ ಶಿಕ್ಷಣಕ್ಕೆ ಮತ್ತಷ್ಟು ಒತ್ತು ನೀಡಲಿದೆ.
* ಸಂಘಟಿತ ವಲಯದಲ್ಲಿ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ಘೋಷಿಸಲಾಗಿದೆ. ಇದರಡಿ 30 ಲಕ್ಷ ಮಹಿಳೆಯರಿಗೆ ಅನುಕೂಲವಾಗುವಂತೆ 1 ಸಾವಿರ ಕೋಟಿ ರೂ ವ್ಯಯಿಸಿ ಯೋಜನೆ ಜಾರಿಗೊಳಿಸಲಾಗುತ್ತದೆ.
* ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲು ನಿರ್ಧಾರ. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಇದನ್ನೂ ಓದಿ: Karnataka Budget 2023 Live Updates: ರೈತರಿಗೆ ಬಂಪರ್ ಆಫರ್- ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ
* ಇನ್ನು ಬಜೆಟ್ ಮೂಲಕ ಚುನಾವಣಾ ಹೊಸ್ತಿಲಲ್ಲಿ ಸರ್ಕಾರ ಕಾಂಗ್ರೆಸ್ ಟಾಂಗ್ ಕೊಟ್ಟಿದೆ. ಹೌದು ಬಜೆಟ್ನಲ್ಲಿ ಗೃಹಿಣಿ ಶಕ್ತಿ ಯೋಜನೆ ಘೋಷಣೆ ಮಾಡಲಾಗಿದೆ. ಇದು ಈ ಬಾರಿ ಕಾಂಗ್ರೆಸ್ ಘೋಷಿಸಿದ್ದ ಪ್ರಮುಖ ಘೋಷಣೆಗಳಲ್ಲಿ ಒಂದು.
* ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಇಂತಹ ಕ್ರೌರ್ಯಕ್ಕೆ ನಲುಗಿದ ಹೆಣ್ಮಕ್ಕಳಿಗೆ ಬಲ ತುಂಬಿದಂತಾಗಿದೆ.
* ಬೆಂಗಳೂರಿನಲ್ಲಿ 9 ಕಾನೂನು ಸುವ್ಯವಸ್ಥೆ, ಆರು ಮಹಿಳಾ, ಐದು ಸಂಚಾರಿ ಠಾಣೆಗಳನ್ನ ಹೊಸದಾಗಿ ಸ್ಥಾಪನೆಯ ಘೋಷಣೆ ಮಾಡಲಾಗಿದೆ. ಇದು ಹೆಣ್ಮಕ್ಕಳ ರಕ್ಷಣೆಗೆ ಮತ್ತಷ್ಟು ಒತ್ತು ನೀಡಲಿದೆ.
* ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮಸಹಾಯಕರು, ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯ್ತ್ರಿ ಸದಸ್ಯರ ಗೌರವ ಧನ 1000 ಹೆಚ್ಚಳ.
* ಶೂನ್ಯ ಬಡ್ಡಿದರದಲ್ಲಿ ಸ್ವಸಹಾಯ ಗುಂಪುಗಳಿಗೆ ಸಾಲ ನೀಡುವ ಯೋಜನೆಯನ್ನೂ ಘೋಷಿಸಿದ್ದು, ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ 500 ಸಹಾಯ ಧನ ವಿತರಣೆ. ಡಿಬಿಟಿ ಮೂಲಕ ನೀಡಲು ನಿರ್ಧಾರ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ