• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Budget 2023: ಚುನಾವಣಾ ಸಂದರ್ಭದಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು, ಬಜೆಟ್​ನಲ್ಲಿ ಹೆಣ್ಮಕ್ಕಳಿಗೆ ಬಂಪರ್!

Karnataka Budget 2023: ಚುನಾವಣಾ ಸಂದರ್ಭದಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು, ಬಜೆಟ್​ನಲ್ಲಿ ಹೆಣ್ಮಕ್ಕಳಿಗೆ ಬಂಪರ್!

ಮಹಿಳಾ ವರ್ಗಕ್ಕೆ ಬಂಪರ್

ಮಹಿಳಾ ವರ್ಗಕ್ಕೆ ಬಂಪರ್

ಬಜೆಟ್​ನಲ್ಲಿ ನಿರೀಕ್ಷೆಯಂತೆ ಸ್ತ್ರೀ ಸಬಲೀಕರಣಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಹಾಗಾದ್ರೆ ಈ ಬಾರಿಯು ಬಜೆಟ್​ನಲ್ಲಿ ಸ್ತ್ರೀ ಸಬಲೀಕರಣ ನಿಟ್ಟಿನಲ್ಲಿ ಘೋಷಣೆಯಾದ ಯೋಜನೆಗಳೇನು? ಇಲ್ಲಿದೆ ನೋಡಿ ಪಟ್ಟಿ

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು(ಫೆ.17): ರಾಜ್ಯ ವಿಧಾನಸಭೆ ಚುನಾವಣೆ (Karnataka Budget 2023) ಸಮೀಪಿಸುತ್ತಿದೆ. ಹೀಗಿರುವಾಗ ಜನಸ್ನೇಹಿ ಬಜೆಟ್​ ಮಂಡನೆ ಬಿಜೆಪಿ ಎದುರಿಗಿರುವ ಅಗ್ನಿ ಪರೀಕ್ಷೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಬಹುನಿರೀಕ್ಷಿತ ಬಜೆಟ್​ ಮಂಡಿಸುತ್ತಿದ್ದು, ಇದರಲ್ಲಿ ನಿರೀಕ್ಷೆಯಂತೆ ಸ್ತ್ರೀ ಸಬಲೀಕರಣಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಹಾಗಾದ್ರೆ ಈ ಬಾರಿಯು ಬಜೆಟ್​ನಲ್ಲಿ ಸ್ತ್ರೀ ಸಬಲೀಕರಣ ನಿಟ್ಟಿನಲ್ಲಿ ಘೋಷಣೆಯಾದ ಯೋಜನೆಗಳೇನು? ಇಲ್ಲಿದೆ ನೋಡಿ ಪಟ್ಟಿ


ಹೌದು ಚುನಾವಣಾ ಹೊಸ್ತಿಲಲ್ಲಿ ಮಹಿಳಾ ಸಬಲೀಕರಣ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಆಕರ್ಷಕ ಕ್ರಮಗಳನ್ನು ಕೈಗೊಳ್ಳಲಾಗಿದೆ.


* ರಾಜ್ಯ ಬಜೆಟ್​ ಮಂಡನೆ ಅನ್ವಯ 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡುವ ಬಗ್ಗೆ ಸಿಎಂ ಬೊಮ್ಮಾಯಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಇದು ಮನೆಯಲ್ಲೇ ಇರುವ ಅನೇಕ ಗೃಹಿಣಿಯರು ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡಲಿದೆ.


* ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನವನ್ನೂ ಈ ಬಾರಿಯ ಬಜೆಟ್​ನಲ್ಲಿ ಘೋಷಿಸಲಾಗಿದೆ. ಆರ್ಥಿಕವಾಗಿ ಕಷ್ಟವನ್ನೆದುರಿಸುತ್ತಿರುವ ಬಡ ವರ್ಷಗ ಮಹಿಳೆಯರಿಗೆ ಈ ಯೋಜನೆ ಲಾಭ ತಂದುಕೊಡಲಿದೆ.


* ಅತ್ತ ವಿದ್ಯಾರ್ಥಿನಿಯರಿಗೆ ಉಚಿತ ಬಸ್​ ಪಾಸ್ ಯೋಜನೆಯನ್ನು ಬೊಮ್ಮಾಯಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಇದು ಸ್ತ್ರೀ ಸಬಲೀಕರಣಕ್ಕೆ ಹೆಚ್ಚು ಬಲ ನೀಡಲಿದ್ದು, ಹೆಣ್ಮಕ್ಕಳ ಶಿಕ್ಷಣಕ್ಕೆ ಮತ್ತಷ್ಟು ಒತ್ತು ನೀಡಲಿದೆ.


* ಸಂಘಟಿತ ವಲಯದಲ್ಲಿ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ಘೋಷಿಸಲಾಗಿದೆ. ಇದರಡಿ 30 ಲಕ್ಷ ಮಹಿಳೆಯರಿಗೆ ಅನುಕೂಲವಾಗುವಂತೆ 1 ಸಾವಿರ ಕೋಟಿ ರೂ ವ್ಯಯಿಸಿ ಯೋಜನೆ ಜಾರಿಗೊಳಿಸಲಾಗುತ್ತದೆ.


* ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲು ನಿರ್ಧಾರ. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.


ಇದನ್ನೂ ಓದಿ: Karnataka Budget 2023 Live Updates: ರೈತರಿಗೆ ಬಂಪರ್ ಆಫರ್- ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ


* ಇನ್ನು ಬಜೆಟ್ ಮೂಲಕ ಚುನಾವಣಾ ಹೊಸ್ತಿಲಲ್ಲಿ ಸರ್ಕಾರ ಕಾಂಗ್ರೆಸ್​ ಟಾಂಗ್ ಕೊಟ್ಟಿದೆ. ಹೌದು ಬಜೆಟ್ನಲ್ಲಿ ಗೃಹಿಣಿ‌ ಶಕ್ತಿ ಯೋಜನೆ ಘೋಷಣೆ ಮಾಡಲಾಗಿದೆ. ಇದು ಈ ಬಾರಿ ಕಾಂಗ್ರೆಸ್​ ಘೋಷಿಸಿದ್ದ ಪ್ರಮುಖ ಘೋಷಣೆಗಳಲ್ಲಿ ಒಂದು.


* ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಇಂತಹ ಕ್ರೌರ್ಯಕ್ಕೆ ನಲುಗಿದ ಹೆಣ್ಮಕ್ಕಳಿಗೆ ಬಲ ತುಂಬಿದಂತಾಗಿದೆ.


* ಬೆಂಗಳೂರಿನಲ್ಲಿ 9 ಕಾನೂನು ಸುವ್ಯವಸ್ಥೆ, ಆರು ಮಹಿಳಾ, ಐದು ಸಂಚಾರಿ ಠಾಣೆಗಳನ್ನ ಹೊಸದಾಗಿ ಸ್ಥಾಪನೆಯ ಘೋಷಣೆ ಮಾಡಲಾಗಿದೆ. ಇದು ಹೆಣ್ಮಕ್ಕಳ ರಕ್ಷಣೆಗೆ ಮತ್ತಷ್ಟು ಒತ್ತು ನೀಡಲಿದೆ.


* ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮಸಹಾಯಕರು, ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯ್ತ್ರಿ ಸದಸ್ಯರ ಗೌರವ ಧನ 1000 ಹೆಚ್ಚಳ.


* ಶೂನ್ಯ ಬಡ್ಡಿದರದಲ್ಲಿ ಸ್ವಸಹಾಯ ಗುಂಪುಗಳಿಗೆ ಸಾಲ ನೀಡುವ ಯೋಜನೆಯನ್ನೂ ಘೋಷಿಸಿದ್ದು, ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ 500 ಸಹಾಯ ಧನ ವಿತರಣೆ. ಡಿಬಿಟಿ ಮೂಲಕ ನೀಡಲು ನಿರ್ಧಾರ.

Published by:Precilla Olivia Dias
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು