• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka CM: CLP ನಾಯಕರಾಗಿ ಸಿದ್ದರಾಮಯ್ಯ, DCM ಆಗಿ ಡಿಕೆಶಿ ಆಯ್ಕೆ; ಗವರ್ನರ್​ ಬಳಿ ಸರ್ಕಾರ ರಚನೆ ಹಕ್ಕು ಮಂಡನೆ

Karnataka CM: CLP ನಾಯಕರಾಗಿ ಸಿದ್ದರಾಮಯ್ಯ, DCM ಆಗಿ ಡಿಕೆಶಿ ಆಯ್ಕೆ; ಗವರ್ನರ್​ ಬಳಿ ಸರ್ಕಾರ ರಚನೆ ಹಕ್ಕು ಮಂಡನೆ

ಸಿಎಲ್​​ಪಿ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

ಸಿಎಲ್​​ಪಿ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

ಶಾಸಕಾಂಗ ಪಕ್ಷದ‌ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆಗೆ ಸಭೆ ಸರ್ವಾನುಮತದಿಂದ ಅನುಮೋಧನೆ ನೀಡಿದೆ. ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರನ್ನು ಭೇಟಿಯಾಗಲಿರುವ ಕಾಂಗ್ರೆಸ್ ನಿಯೋಗ, ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲಿದೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ (CLP leader) ಸಿದ್ದರಾಮಯ್ಯ (Siddaramaiah) ಆಯ್ಕೆಯಾಗಿದ್ದಾರೆ. ಸಿಎಲ್​ಪಿ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯಗೆ ಹೂಗುಚ್ಚ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಶುಭಾಶಯ ಕೋರಿದ್ದಾರೆ. ಸಿಎಲ್​ಪಿ ಸಭೆ ಆರಂಭವಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಅವರು, ಸಿದ್ದರಾಮಯ್ಯರನ್ನ ಸಿಎಲ್‌ಪಿ ನಾಯಕರಾಗಿ ಆಯ್ಕೆ ಮಾಡುವ ಬಗ್ಗೆ ಡಿಕೆಶಿ ಪ್ರಸ್ತಾವನೆ ಮಂಡನೆ ಮಾಡಿದರು. ಈ ಪ್ರಸ್ತಾವನೆಗೆ ಪರಮೇಶ್ವರ್ (Parameshwar), ಹೆಚ್‌ಕೆ ಪಾಟೀಲ್, ಎಂಬಿ ಪಾಟೀಲ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ‌ ಹೆಬ್ಬಾಳ್ಕರ್ (Laxmi Hebbalkar) ಅನುಮೋಧನೆ ಮಾಡಿದರು. ಇದರೊಂದಿಗೆ ಶಾಸಕಾಂಗ ಪಕ್ಷದ‌ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆಗೆ ಸಭೆ ಸರ್ವಾನುಮತದಿಂದ ಅನುಮೋಧನೆ ನೀಡಿತು.


ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವೀಕ್ಷಕರಾದ ಸುಶೀಲ್ ಕುಮಾರ್ ಶಿಂದೆ, ಜೀತೇಂದ್ರ ಸಿಂಗ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ, ನಿಯೋಜಿತ ಸಿಎಂ ಸಿದ್ದರಾಮಯ್ಯ, ನಿಯೋಜಿತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಾಯಕ ಬಿ ಕೆ ಹರಿಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.




ಇದನ್ನೂ ಓದಿ: CM Siddaramaiah: ಬೆಂಗಳೂರಿಗೆ ಟಗರು-ಬಂಡೆ ಗ್ರ್ಯಾಂಡ್ ಎಂಟ್ರಿ!


ಶಾಸಕಾಂಗ ಸಭೆ ಆರಂಭದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಿರುವ ಸುರ್ಜೇವಾಲಾ ಅವರು, ಹೈಕಮಾಂಡ್ ನಿರ್ಧಾರದಂತೆ ಸಿದ್ದರಾಮಯ್ಯರನ್ನ ಸಿಎಂ ಎಂದು ಘೋಷಿಸಲಾಗಿದೆ. ಡಿಕೆ ಶಿವಕುಮಾರ್​ ಅವರನ್ನು ಡಿಸಿಎಂ ಎಂದು ಘೋಷಿಸಲಾಗಿದೆ. ಇಬ್ಬರೂ ನಾಯಕರಿಗೆ ನೀವೆಲ್ಲಾ ಸಹಕಾರ ನೀಡಬೇಕು. ಇಬ್ಬರೂ ನಿಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಾರೆ. ಕರ್ನಾಟಕ ಸರ್ಕಾರ ಇಡೀ ದೇಶದಲ್ಲಿ ನಂಬರ್ 1 ಆಗಬೇಕು ಎಂದು ಹೇಳಿದರು.


ಇತ್ತ ಕಾಂಗ್ರೆಸ್ ಸಿಎಲ್​ಪಿ ಸಭೆ ಮುಕ್ತಾಯವಾಗುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರದ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದರು. ಈ ವೇಳೆ ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್, ಭೈರತಿ ಸುರೇಶ್, ಜಮೀರ್, ಕೆಜೆ ಜಾರ್ಜ್, ವೇಣುಗೋಪಾಲ್ ಹಾಗೂ ಸುರ್ಜೇವಾಲಾ ಅವರು ಹಾಜರಿದ್ದರು.

top videos
    First published: