ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು 2023-24ನೇ ಸಾಲಿನ ಬಜೆಟ್ (India Budget 2023) ಮಂಡನೆ ಮಾಡಿದ್ದಾರೆ. ಬಜೆಟ್ ಬಳಿಕ ಸಹಜವಾಗಿಯೇ ಒಂದಷ್ಟು ವಲಯಗಳಿಗೆ ಬಿಸಿ ಏರಿಕೆಯ ಬಿಸಿ ತಟ್ಟಿದರೆ, ಇನ್ನೊಂದಷ್ಟು ವಲಯಗಳಿಗೆ ನಿಟ್ಟುಸಿರು ಬಿಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷದ ನಾಯಕರು ಬಜೆಟ್ನ್ನು (Budget 2023) ವಿರೋಧಿಸಿ ಟೀಕೆಗಳ ಸುರಿಮಳೆಯನ್ನೇ ಮಾಡಿದ್ದಾರೆ.
20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಬಿಳಿ ಕಾಗೆ!
ಕೇಂದ್ರ ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಕೇಂದ್ರ ಸರಕಾರದ ಬಜೆಟ್ "ಸೀಡ್ಲೆಸ್ ಕಡಲೆಕಾಯಿ" ಇದ್ದಂತಿದೆ! '20 ಲಕ್ಷ ಕೋಟಿ ಪ್ಯಾಕೇಜ್' ಎಂಬ ಬಿಳಿ ಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ. ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ. ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ.
ಇದನ್ನೂ ಓದಿ: Budget 2023: 2047ರ ವೇಳೆಗೆ ರಕ್ತಹೀನತೆಯನ್ನು ತೊಡೆದುಹಾಕಲು ಮಿಷನ್; ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ ಕರ್ನಾಟಕ ಬಿಜೆಪಿ ಸರ್ಕಾರ ಈ ಬಗ್ಗೆ ಉತ್ತರಿಸಬೇಕು. ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ? 23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ? ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ?
ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ, 18 ಸಾವಿರ ಕೋಟಿಯ ಯೋಜನೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು, ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ. ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ.
ಆಹಾರ ಪದಾರ್ಥಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ
ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದ ರೈತರಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು? ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು. ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ! ಮಧ್ಯಮ ವರ್ಗ ಆದಾಯವನ್ನೇ ಕಳೆದುಕೊಂಡಿದೆ, ಜನರ ಆದಾಯಕ್ಕೆ ಹೊಡೆತ ಕೊಟ್ಟು ಆದಾಯ ತೆರಿಗೆ ಮಿತಿ ಏರಿಸಿದರೆ ಪ್ರಯೋಜನವೇನು?! ಜನರ ಆದಾಯವನ್ನು ವೃದ್ಧಿಸುವ ವಾತಾವರಣ ಸೃಷ್ಟಿಸುವಲ್ಲಿ ಬಜೆಟ್ ವಿಫಲವಾಗಿದೆ.
ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ.
ರಾಜ್ಯದ ರೈತರಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು @BJP4Karnataka?
ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು.
ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ!#Budget2023
— Karnataka Congress (@INCKarnataka) February 1, 2023
ಇದನ್ನೂ ಓದಿ: Budget 2023: 2047ರ ವೇಳೆಗೆ ರಕ್ತಹೀನತೆಯನ್ನು ತೊಡೆದುಹಾಕಲು ಮಿಷನ್; ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಆಹಾರ ಪದಾರ್ಥಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ. ಬರುವ ಆದಾಯವನ್ನೆಲ್ಲಾ ಸರ್ಕಾರವೇ ದರೋಡೆ ಮಾಡುತ್ತಿರುವಾಗ ಮಹಿಳೆಯರು ಉಳಿತಾಯ ಮಾಡುವುದು ಏನನ್ನು? ಸಂಪಡನೆಗಿಂತ ಖರ್ಚು ಹೆಚ್ಚಿರುವಾಗ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯ ಪ್ರಯೋಜನವೇನು? ಆಕರ್ಷಕ ಹೆಸರು ಘೋಷಿಸಿದ ಮಾತ್ರಕ್ಕೆ ಜನರ ಕಷ್ಟ ದೂರಾಗದು ಎಂದು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ