• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Union Budget 2023: ಸಿರಿಧಾನ್ಯ ಈಗ ಶ್ರೀಅನ್ನ, ಹೆಸರಷ್ಟೇ ಬದಲಾವಣೆ; ಕೇಂದ್ರ ಬಜೆಟ್​​ಗೆ ಟೀಕೆ, ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕಾಂಗ್ರೆಸ್

Union Budget 2023: ಸಿರಿಧಾನ್ಯ ಈಗ ಶ್ರೀಅನ್ನ, ಹೆಸರಷ್ಟೇ ಬದಲಾವಣೆ; ಕೇಂದ್ರ ಬಜೆಟ್​​ಗೆ ಟೀಕೆ, ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕಾಂಗ್ರೆಸ್

ಕೇಂದ್ರ ಬಜೆಟ್​ ವಿರುದ್ಧ ಕಾಂಗ್ರೆಸ್ ಟೀಕೆ

ಕೇಂದ್ರ ಬಜೆಟ್​ ವಿರುದ್ಧ ಕಾಂಗ್ರೆಸ್ ಟೀಕೆ

ವಿರೋಧ ಪಕ್ಷದ ನಾಯಕರು ಕೇಂದ್ರ ಸರ್ಕಾರದ ಬಜೆಟ್‌ನ್ನು ವಿರೋಧಿಸಿ ಟೀಕೆಗಳ ಸುರಿಮಳೆಯನ್ನೇ ಮಾಡಿದ್ದಾರೆ. ಅಲ್ಲದೇ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟು ರಾಜ್ಯ ಬಿಜೆಪಿ ಸರ್ಕಾರಕ್ಕೆ ಉತ್ತರಿಸಲು ಸವಾಲು ಹಾಕಿದ್ದಾರೆ.

  • Share this:

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು 2023-24ನೇ ಸಾಲಿನ ಬಜೆಟ್‌ (India Budget 2023) ಮಂಡನೆ ಮಾಡಿದ್ದಾರೆ. ಬಜೆಟ್​ ಬಳಿಕ ಸಹಜವಾಗಿಯೇ ಒಂದಷ್ಟು ವಲಯಗಳಿಗೆ ಬಿಸಿ ಏರಿಕೆಯ ಬಿಸಿ ತಟ್ಟಿದರೆ, ಇನ್ನೊಂದಷ್ಟು ವಲಯಗಳಿಗೆ ನಿಟ್ಟುಸಿರು ಬಿಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷದ ನಾಯಕರು ಬಜೆಟ್‌ನ್ನು (Budget 2023) ವಿರೋಧಿಸಿ ಟೀಕೆಗಳ ಸುರಿಮಳೆಯನ್ನೇ ಮಾಡಿದ್ದಾರೆ.


20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಬಿಳಿ ಕಾಗೆ!


ಕೇಂದ್ರ ಬಜೆಟ್​ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಕೇಂದ್ರ ಸರಕಾರದ ಬಜೆಟ್ "ಸೀಡ್‌‌ಲೆಸ್ ಕಡಲೆಕಾಯಿ" ಇದ್ದಂತಿದೆ! '20 ಲಕ್ಷ ಕೋಟಿ ಪ್ಯಾಕೇಜ್' ಎಂಬ ಬಿಳಿ ಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ. ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ. ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ.




ಇದನ್ನೂ ಓದಿ: Budget 2023: 2047ರ ವೇಳೆಗೆ ರಕ್ತಹೀನತೆಯನ್ನು ತೊಡೆದುಹಾಕಲು ಮಿಷನ್; ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?


ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ ಕರ್ನಾಟಕ ಬಿಜೆಪಿ ಸರ್ಕಾರ ಈ ಬಗ್ಗೆ ಉತ್ತರಿಸಬೇಕು. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ? 23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ? ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ?


ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ, 18 ಸಾವಿರ ಕೋಟಿಯ ಯೋಜನೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು, ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ. ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ.


ಆಹಾರ ಪದಾರ್ಥಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ


ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದ ರೈತರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು. ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ! ಮಧ್ಯಮ ವರ್ಗ ಆದಾಯವನ್ನೇ ಕಳೆದುಕೊಂಡಿದೆ, ಜನರ ಆದಾಯಕ್ಕೆ ಹೊಡೆತ ಕೊಟ್ಟು ಆದಾಯ ತೆರಿಗೆ ಮಿತಿ ಏರಿಸಿದರೆ ಪ್ರಯೋಜನವೇನು?! ಜನರ ಆದಾಯವನ್ನು ವೃದ್ಧಿಸುವ ವಾತಾವರಣ ಸೃಷ್ಟಿಸುವಲ್ಲಿ ಬಜೆಟ್ ವಿಫಲವಾಗಿದೆ.



ಸಿರಿಧಾನ್ಯ ಈಗ ಶ್ರೀಅನ್ನ! ಹೆಸರು ಬದಲಾವಣೆ ಅಷ್ಟೇ, ಉಳಿದಂತೆ ರೈತರ ನೆರವಿಗೆ ಯಾವುದೇ ಸ್ಪಷ್ಟತೆ ಇಲ್ಲ. ಯುವಕರಿಗೆ ಉದ್ಯೋಗ ಸೃಷ್ಟಿಸುವ ತುರ್ತಿದೆ ಎನ್ನುವುದು ಮೋದಿ ಅವರಿಗೆ ಇನ್ನೂ ಅರ್ಥವಾದಂತಿಲ್ಲ. ಉದ್ಯೋಗ ಸೃಷ್ಟಿಯ ಯಾವುದೇ ಅಂಶವಿಲ್ಲದಿರುವುದು ಬಿಜೆಪಿ ಯುವಸಮುದಾಯದ ವಿರೋಧಿ ಎಂಬುದಕ್ಕೆ ಸಾಕ್ಷಿ.


ಇದನ್ನೂ ಓದಿ: Budget 2023: 2047ರ ವೇಳೆಗೆ ರಕ್ತಹೀನತೆಯನ್ನು ತೊಡೆದುಹಾಕಲು ಮಿಷನ್; ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?


ಆಹಾರ ಪದಾರ್ಥಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ. ಬರುವ ಆದಾಯವನ್ನೆಲ್ಲಾ ಸರ್ಕಾರವೇ ದರೋಡೆ ಮಾಡುತ್ತಿರುವಾಗ ಮಹಿಳೆಯರು ಉಳಿತಾಯ ಮಾಡುವುದು ಏನನ್ನು? ಸಂಪಡನೆಗಿಂತ ಖರ್ಚು ಹೆಚ್ಚಿರುವಾಗ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯ ಪ್ರಯೋಜನವೇನು? ಆಕರ್ಷಕ ಹೆಸರು ಘೋಷಿಸಿದ ಮಾತ್ರಕ್ಕೆ ಜನರ ಕಷ್ಟ ದೂರಾಗದು ಎಂದು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದೆ.

Published by:Sumanth SN
First published: