ಬೆಂಗಳೂರು (ಏ. 1): ಬಿಜೆಪಿ ಸರ್ಕಾರದ ಸ್ವಜನಪಕ್ಷಪಾತ, ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ನವರು ಆರೋಪಿಸಿದಾಗ ಯಾರೂ ನಂಬಿರಲಿಲ್ಲ. ಈಗ ಬಿಜೆಪಿಯ ಸಚಿವರೇ ಅದಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರ ದೂರನ್ನು ಮುಂದಿಟ್ಟುಕೊಂಡು ಯಡಿಯೂರಪ್ಪನವರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದೆ. ಬಿಜೆಪಿ ಸರ್ಕಾರದ ಪರಿಸ್ಥಿತಿ ಈಗ ಹರಿದ ಬನಿಯನ್ನಂತಾಗಿದೆ. ಅತ್ತ ಎಳೆದರೆ ಈ ಕಡೆ ಬಯಲಾಗುತ್ತದೆ, ಇತ್ತ ಎಳೆದರೆ ಆ ಕಡೆ ಮಾನ ಹೋಗುತ್ತದೆ ಎಂಬಂತಾಗಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಬಿಜೆಪಿ ಸರ್ಕಾರ, ಸಿಎಂ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಸರಣಿ ಟ್ವೀಟ್ಗಳನ್ನು ಮಾಡಿರುವ ಕಾಂಗ್ರೆಸ್, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸ್ಥಿತಿ ಎಷ್ಟೇ ಎಳೆದರೂ ಮೈ ಮುಚ್ಚದ "ಹರಿದ ಬನಿಯನ್"ನಂತಾಗಿದೆ! ಬಿಜೆಪಿ ಸರ್ಕಾರ ಈಗ "ಹರಿದ ಬನಿಯನ್"ನಂತಾಗಿದೆ. ಅತ್ತ ಎಳೆದರೆ ಇತ್ತ ತೋರುತ್ತದೆ, ಇತ್ತ ಎಳೆದರೆ ಅತ್ತ ತೋರುತ್ತದೆ! ಎಂಬಂತಹ ಪರಿಸ್ಥಿತಿ ಬಿಜೆಪಿಯದ್ದಾಗಿದೆ ಎಂದು ಲೇವಡಿ ಮಾಡಿದೆ.
'@BJP4Karnataka ಸರ್ಕಾರ ಈಗ
"ಹರಿದ ಬನಿಯನ್"
ಅತ್ತ ಎಳೆದರೆ ಇತ್ತ ತೋರುತ್ತದೆ, ಇತ್ತ ಎಳೆದರೆ ಅತ್ತ ತೋರುತ್ತದೆ!#BJPvsBJP
— Karnataka Congress (@INCKarnataka) April 1, 2021
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದುದ್ದನ್ನ ಕಾಂಗ್ರೆಸ್ ಎತ್ತಿ ಹಿಡಿದಾಗ ಬಿಜೆಪಿ ರಾಜಕೀಯ ದುರುದ್ದೇಶವೆಂದು ತಿಪ್ಪೆ ಸಾರಿಸುತ್ತಿತ್ತು
ಆದರೆ ಸ್ವತಃ ಬಿಜೆಪಿ ಶಾಸಕರೇ ಇತ್ತೀಚಿಗೆ ತಮಗಾದ ಅನ್ಯಾಯ ವ್ಯಕ್ತಪಡಿಸುತ್ತಿದ್ದರು, ಯತ್ನಾಳ್ ಬಹಿರಂಗವಾಗಿ ಬಂಡವಾಳ ಬಿಚ್ಚಿಟ್ಟಿದ್ದರು, ಈಗ ಈಶ್ವರಪ್ಪ ಗಂಭೀರ ಆರೋಪ ಎತ್ತಿದ್ದಾರೆ#BJPvsBJP
— Karnataka Congress (@INCKarnataka) April 1, 2021
ಈ ಸರ್ಕಾರ@BJP4Karnataka ಪಕ್ಷದ ರಾಜಕೀಯ ವ್ಯಭಿಚಾರಕ್ಕೆ ಹುಟ್ಟಿದ "ಅನೈತಿಕ ಕೂಸು"
"ಆಪರೇಷನ್ ಕಮಲ"ಎನ್ನುವ ಅನಿಷ್ಟ ಪದ್ಧತಿಯನ್ನು ಹುಟ್ಟುಹಾಕಿ ಶಾಸಕರನ್ನು ಐಟಿ, ಇಡಿ ಬೆದರಿಕೆ, ಹನಿಟ್ರಾಪ್ ಬ್ಲಾಕ್ಮೇಲ್, ಹಣದ ಆಮಿಷ ಎಲ್ಲವನ್ನೂ ಬಳಸಿಕೊಂಡಿದ್ದು ಒಂದೊಂದಾಗಿ ಬಯಲಾಗುತ್ತಿವೆ.
ಇದರೊಂದಿಗೆ #BSYmuktaBJP ಆಗುವ ಕಾಲವೂ ಸನ್ನಿಹಿತವಾಗಿದೆ.
— Karnataka Congress (@INCKarnataka) April 1, 2021
★ಯತ್ನಾಳ್ ಸರ್ಕಾರದಲ್ಲಿನ ಎಲ್ಲಾ ಅನಾಚಾರಗಳನ್ನೂ ಜಗತ್ತಿಗೆ ತಿಳಿಸಿದ್ದರು
★ಮಾಧುಸ್ವಾಮಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ನಡೆಯ ವಿರುದ್ಧ ಹರಿಹಾಯ್ದಿದ್ದರು
★ಈಶ್ವರಪ್ಪ ಸಿಎಂ ಸರ್ವಾಧಿಕಾರಿ ಧೋರಣೆ, ಭ್ರಷ್ಟಾಚಾರವನ್ನ ಬಯಲಿಗಿಟ್ಟಿದ್ದಾರೆ@BJP4Karnataka ಸ್ಥಿತಿ ಎಷ್ಟೇ ಎಳೆದರೂ ಮೈಮುಚ್ಚದ "ಹರಿದ ಬನಿಯನ್"ನಂತಾಗಿದೆ!#BJPvsBJP
— Karnataka Congress (@INCKarnataka) April 1, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ