Karnataka Assembly Election 2023: ಪ್ರಧಾನಿ ಮೋದಿ ರೋಡ್ಶೋ ಸೇರಿದಂತೆ ರಾಜ್ಯದಲ್ಲಿ ರಾಜಕೀಯ ವಿದ್ಯಮಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಚುನಾವಣೆಯಲ್ಲಿ ಗೆದ್ದು ಶಾಸಕರಾದರೆ ದುಡ್ಡು ಮಾಡಬಹುದು ಅಂತ ಭ್ರಮೆ ಕೆಲವರಿಗೆ ಇದೆ, ಆದರೆ ನಾನು ದುಡ್ಡು ಮಾಡಲು ಬಂದಿಲ್ಲ. ನಾನು 5 ವರ್ಷ ಮುಳಬಾಗಿಲು ಶಾಸಕನಾಗಿದ್ದೆ, ಜನರ ದುಡ್ಡು ತಿಂದರೆ ಕುಷ್ಟರೋಗ ಬರುತ್ತೆ ಎಂದು ಶಾಪ ಹಾಕಿದ್ದೆ. ಕೋಲಾರದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನನ್ನ ಗುರಿ ಎಂದು ಹೇಳಿದರು. ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು ಪ್ರಚಾರದಲ್ಲಿ ಭಾಗಿಯಾಗಿದ್ದರು.
ಕಾಂಗ್ರೆಸ್ ನಾಯಕರಿಗೆ ಕೇವಲ ತುಷ್ಟೀಕರಣವೊಂದೇ ಗೊತ್ತಿರುವುದು; ಮೋದಿ ವಾಗ್ದಾಳಿ#KarnatakaElections2023 #BJP #PMModi #Bagalakote #PMModi #KannadaNews
— News18 Kannada (@News18Kannada) May 6, 2023
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನಟ ಶಿವರಾಜ್ಕುಮಾರ್ ಹಾಗೂ ಪತ್ನಿ ಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಶಿವಣ್ಣ ಭರ್ಜರಿ ರೋಡ್ ಶೋ ನಡೆಸಿದ್ದು, ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಿಂದ ಬೃಹತ್ ರೋಡ್ ಶೋ ನಡೆಸಿ ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ದೊಡ್ಡಬಳ್ಳಾಪುರದಲ್ಲಿ ನಟ ಸುದೀಪ್ ಭರ್ಜರಿ ರೋಡ್ ಶೋ ನಡೆಸ್ತಿದ್ದಾರೆ. ಯುವ ಅಭ್ಯರ್ಥಿ ಧೀರಜ್ ಮುನಿರಾಜು ಪರ ಮತಬೇಟೆ ನಡೆಸ್ತಿದ್ದಾರೆ. ಮುತ್ಯಾಲಮ್ಮ ದೇವಾಲಯದಿಂದ ರೋಡ್ ಶೋ ಆರಂಭವಾಗಿದ್ದು, ಸಚಿವ ಸುಧಾಕರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಸಾಥ್ ನೀಡಿದ್ದಾರೆ. ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿದ್ದು, ಸುದೀಪ್ರನ್ನ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಪರ ಸ್ಟಾರ್ ಪ್ರಚಾರ ಮುಂದುವರದಿದೆ. ಡಾ.ಸುಧಾಕರ್ ಪರ ನಟಿ ಅನು ಪೂವಮ್ಮ ಪ್ರಚಾರ ಮಾಡಿದ್ದಾರೆ. ನಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭೈರನಾಯಕನಹಳ್ಳಿ, ಮೊಡಕುಹೊಸಳ್ಳಿ, ಚಿಕ್ಕಸಾಗರಹಳ್ಳಿ ಹಾಗೂ ಈರೇನಹಳ್ಳಿ ಗ್ರಾಮದಲ್ಲಿ ನಟಿ ಅನು ಪೂವಮ್ಮ ಪ್ರಚಾರ ನಡೆಸಿದರು.
ರಾಜ್ಯದ ಚುನಾವಣೆ ಬೇರೆ ಅಥಣಿ ಚುನಾವಣೆ ಬೇರೆ, ಡಬಲ್ ಇಂಜಿನ್ ಸರ್ಕಾರದ ಸಲುವಾಗಿ ಬಿಜೆಪಿಗೆ ಮತ ಹಾಕಿ.- ಅಥಣಿಯಲ್ಲಿ ಪಕ್ಷಕ್ಕೆ ದ್ರೋಹ ಮಾಡಿದ ಸವದಿ ಸೋಲಿಸಲು ಮತ ಹಾಕಿ. ಲಕ್ಷ್ಮಣ ಸವದಿಯನ್ನ ಕಳೆದ ಚುನಾವಣೆಯಲ್ಲಿ ಸೋಲಿಸಿದ್ದು ಮಹೇಶ್ ಕುಮಟಳ್ಳಿ, ಆದರೂ ಸಹ ಯಡಿಯೂರಪ್ಪ ಸರ್ಕಾರದಲ್ಲಿ ಮಂತ್ರಿ ಮಾಡಿದ್ದೆವು. ಸೋತಾಗ ನಾನೇ ಸವದಿ ಜತೆಗೆ ಮಾತಾಡಿದೆ ಅವರೇ ಎಂಎಲ್ಸಿ ಮಾಡಿ ಅಂತಾ ಹೇಳಿದ್ದರು. ನಾವು ಎಂಎಲ್ಸಿ ಮಾಡಿದ್ವಿ, ಮಂತ್ರಿ ಮಾಡಿದ್ವಿ. ಎಂಎಲ್ಸಿ ಅವಧಿ ಇದ್ದರೂ ಯಾಕೆ ಪಕ್ಷ ಬಿಟ್ಟು ಹೋಗಿದ್ದೀರಿ ಅಂತ ನೀವು ಪ್ರಶ್ನೆ ಮಾಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ.
ಗಂಗಾವತಿಯಲ್ಲಿ ಆಯೋಜನೆ ಮಾಡಲಾಗಿದ್ದ KRPPಸಮಾವೇಶದ ಪೆಂಡಾಲ್ ಕುಸಿದು ಬಿದ್ದಿದೆ. ಜನಾರ್ದನ ರೆಡ್ಡಿ ಭಾಷಣ ಮಾಡುತ್ತಿದ್ದ ವೇಳೆ ವೇದಿಕೆಯ ಕೊನೆ ಭಾಗದಲ್ಲಿಯ ಪೆಂಡಾಲ್ ಕುಸಿದಿದೆ. ವಾಯುಪುತ್ರ ಒಳ್ಳೆಯ ಗಾಳಿ ತೆಗೆದುಕೊಂಡು ಬಂದು ಆಶೀರ್ವಾದ ಮಾಡಿ ಹೋಗಿದ್ದಾನೆ ಎಂದು ಜನಾರ್ದನ ರೆಡ್ಡಿ ಹೇಳಿದರು.
12 ವರ್ಷಗಳ ರಾಜಕೀಯ ವನವಾಸದಿಂದ ವಾಪಾಸ್ ಬಂದಿದ್ದೇನೆ. ರಾಜಕೀಯ ಎಂದರೆ ಮೋಸ, ವಂಚನೆ ಮಾಡಿ ತುಳಿದು ಬೆಳೆಯುವುದು. ನಾನು ರಾಜಕೀಯ ಬಿಟ್ಟು ಮನೆಯಲ್ಲಿ ಸುಮ್ಮನೆ ಇದ್ದೆ. ನಾನು ಬೆಳೆಸಿದ ಬಿಜೆಪಿ ನಾಯಕರು ನನಗೆ ಮೋಸ ಮಾಡಿದ್ದಾರೆ. ನಾನು ಬಳ್ಳಾರಿಯಲ್ಲಿ ಇದ್ದರೆ ನನ್ನನ್ನು ಓಡಾಡಿಸಬೇಕಾಗುತ್ತದೆ ಎಂದು ಹೇಳಿ ನನ್ನನ್ನು ಹೊರಗಡೆ ಹಾಕಿದರು ಎಂದು ಜನಾರ್ದನ ರೆಡ್ಡಿ ಬಿಜೆಪಿ ವಿರುದ್ಧ ಅಸಮಾಧಾನ ಹೊರ ಹಾಕಿದರು.
ಖರ್ಗೆ ಒಬ್ಬ ಅಪ್ರಬುದ್ದ ರಾಜಕಾರಣಿ, ಅವರ ಕುರಿತು ನಾನು ಮಾತನಾಡಲ್ಲ ಎಂದು ಖರ್ಗೆ ಹತ್ಯೆ ಕುರಿತ ಆಡೀಯೊ ವಿಚಾರವಾಗಿ ಬೀದರ್ನಲ್ಲಿ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯೆ ನೀಡಿದ್ದಾರೆ. ಆ ಒಂದು ಕ್ಷೇತ್ರದ ಬಗ್ಗೆ ನಾನು ಮಾತನಾಡಲ್ಲ. ಅದರಲ್ಲೂ ಖರ್ಗೆ ಕುರಿತು ನಾನು ಮಾತನಾಡುದಿಲ್ಲ. ಪ್ರಬುದ್ದ ರಾಜಕಾರಣಿ ಕುರಿತು ಮಾತನಾಡಬಹುದು, ಅಪ್ರಬುದ್ದರ ಕುರಿತು ನಾನು ಮಾತನಾಡಲ್ಲ ಎಂದು ಹೇಳಿದರು.
ಇವತ್ತು ರೋಡ್ ಶೋ ನಡೆಸಿದ 13 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಇನ್ನು ಜಯನಗರ, ಚಾಮರಾಜಪೇಟೆ, ವಿಜಯನಗರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. 13 ಕ್ಷೇತ್ರಗಳಲ್ಲಿ ಎರಡೂವರೆ ಗಂಟೆ ರೋಡ್ ಶೋ ನಡೆಸಿದ್ದಾರೆ.
ಕೋಣಂದೂರಿನಲ್ಲಿ ಅತೀ ದೊಡ್ಡ ರೋಡ್ ಶೋ ನಡೆಸಿದ್ದೇವೆ. ಬಹಳ ಉತ್ಸಾಹದಲ್ಲಿ ಕಾರ್ಯಕರ್ತರು ಹಾಗೂ ಜನರು ಇದ್ದಾರೆ. ನನ್ನನ್ನು ಗೆಲ್ಲಿಸಬೇಕು ಎಂಬ ಹಂಬಲ ಎಲ್ಲರಿಗಿದೆ. ಆಸೆ ಇದೆ, ದುರಾಸೆ ಇಲ್ಲ. ಎಲ್ಲರಿಗೂ ಇರೋ ಹಾಗೇ ನನಗೂ ಇದೆ. ಪಕ್ಷದ ತೀರ್ಮಾನಕ್ಕ ಬದ್ಧ ಆಗಿರುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹೇಳಿದ್ದಾರೆ.
https://t.co/OdGOqGmM1W
15 ಕೋಟಿಗೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ#ITRaid #Money #Gold #KarnatakaElection2023 #AssemblyElection2023 #KarnatakaElections2023 #KannadaNews #KarnatakaAssemblyElection2023— News18 Kannada (@News18Kannada) May 6, 2023
PFIಯನ್ನು ನಾವು ಬ್ಯಾನ್ ಮಾಡಿದ್ದೇವೆ. ಹನುಮಾನ್ ಪೂಜಿಸುವ ಬಜರಂಗದಳ ಬ್ಯಾನ್ ಮಾಡುವ ಮಾತು ಕಾಂಗ್ರೆಸ್ ಆಡುತ್ತಿದೆ. ಆದರೆ ಈ ಮಾತುಗಳನ್ನು ಇಂದು ಸಮಾಜ ಸ್ವೀಕಾರ ಮಾಡುವುದಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಯಾದಗಿರಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ವೆಂಕಟರೆಡ್ಡಿ ಮುದ್ನಾಳ ಪರವಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೂಲಕ ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀರಜ್ ಮುನಿರಾಜು ಪರ ನಟ ಸುದೀಪ್ ಪ್ರಚಾರ ನಡೆಸುತ್ತಿದ್ದಾರೆ. ನಟ ಸುದೀಪ್ ರೋಡ್ ಶೋಗೆ ಸಚಿವ ಸುಧಾಕರ್, ಛಲವಾದಿ ನಾರಾಯಣಸ್ವಾಮಿ ಸಾಥ್ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂಬಿ ಪಾಟೀಲ್ ಪರ ನಟಿ ರಮ್ಯಾ ಪ್ರಚಾರ ನಡೆಸುತ್ತಿದ್ದಾರೆ. ನಟಿ ರಮ್ಯಾ ಅವರಿಗೆ ಹೂ ಮಳೆಗೆರೆದು ಕಾರ್ಯಕರ್ತರು ಸ್ವಾಗತ ಕೋರಿದರು.
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆರಂಭವಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಅಪಾರ ಸಂಖ್ಯೆಯಲ್ಲಿರುವ ಅಭಿಮಾನಿಗಳು ಪುಷ್ಪ ಮಳೆ ಸುರಿಸುತ್ತಾ ಸ್ವಾಗತ ಕೋರುತ್ತಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಯ ಸಂಚಿಗೆ ಸಂಬಂಧಿಸಿದ ಎನ್ನಲಾದ ಆಡಿಯೋ ಲೀಕ್ ಆಗಿದೆ. ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್, ಕಾರ್ಯಕರ್ತ ರವಿ ಎಂಬಾತನ ಜೊತೆ ಮಾತನಾಡಿರುವ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.