ಚಿಕ್ಕಮಗಳೂರು: ಕಾಂಗ್ರೆಸ್ಗೆ (Congress) ಮತ ಹಾಕಿ ಎಂದ ಎಸ್.ಎಲ್.ಭೋಜೇಗೌಡರಿಗೆ (SL Bhojegowda) ಜೆಡಿಎಸ್ನದ್ದು ಅಧಿಕೃತ ಹೊಂದಾಣಿಕೆಯೋ, ರಾಜಕೀಯ ವ್ಯಭಿಚಾರವೋ ಅಂತಾ ಸಿ.ಟಿ ರವಿ (CT Ravi) ತಿರುಗೇಟು ಕೊಟ್ಟಿದ್ದಾರೆ. ನಿಮ್ಮದು ಚುನಾವಣಾ ಪೂರ್ವ ಮೈತ್ರಿಯಾದರೆ (Alliance) ಘೋಷಣೆ ಮಾಡಿ, ಸಾಮರ್ಥ್ಯವಿದ್ದರೆ ಜಿಲ್ಲೆಯಲ್ಲಿ ಜೆಡಿಎಸ್ಗೆ (JDS) ಮತ ಹಾಕಬೇಡಿ ಎಂದು ಹೇಳಿ. ತಿಮ್ಮಶೆಟ್ಟಿ ಮನೆಯನ್ನು ಏಕೆ ಹಾಳು ಮಾಡುತ್ತೀರಾ? ಆತ ಫ್ಲೆಕ್ಸ್ ಹಾಕೋಕೆ ಅಷ್ಟೆ ಸೀಮಿತಾನ. ಮನೆಹಾಳು ಮಾಡುವ ರಾಜಕಾರಣ ಎಷ್ಟು ದಿನ ನಡೆಯುತ್ತೆ ಅಂತಾ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ ರವಿ ಅವರು ಎಸ್.ಎಲ್ ಭೋಜೇಗೌಡರಿಗೆ ತಿರುಗೇಟು ನೀಡಿದರು. ಕಾಂಗ್ರೆಸ್ಸಿಗೆ ಮತ ಹಾಕಿ ಎಂದಿದ್ದಾರೆ. ನಿಮ್ಮದು ಚುನಾವಣಾ ಪೂರ್ವ ಮೈತ್ರಿಯಾದರೆ ಘೋಷಣೆ ಮಾಡಿ, ಸಾಮರ್ಥ್ಯವಿದ್ದರೆ ಜಿಲ್ಲೆಯಲ್ಲಿ ಜೆಡಿಎಸ್ ಗೆ ಮತ ಹಾಕಬೇಡಿ ಎಂದು ಹೇಳಿ. ಕಳೆದ ಬಾರಿ ಹರೀಶನ ಮನೆ, ಈ ಬಾರಿ ತಿಮ್ಮಶೆಟ್ಟಿ ಮನೆ ಹಾಳು ಅಂತಿದ್ದಾರೆ ಜನ. ಮನೆಹಾಳು ಮಾಡುವ ರಾಜಕಾರಣ ಎಷ್ಟು ದಿನ ನಡೆಯುತ್ತೆ. ಬೇರೆಯವರ ಮನೆ ಹಾಳು ಮಾಡಿದರೆ ಒಂದು ದಿನ ನಮ್ಮ ಮನೆಯನ್ನು ಹಾಳು ಮಾಡುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: Karnataka Election: 4 ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ ನಡೆಸಿದ ರಾಹುಲ್ ಗಾಂಧಿಗೆ ಮಳೆ ಕಾಟ!
ಅಲ್ಲದೆ, ಎಸ್.ಡಿ.ಪಿ.ಐ, ಪಿ.ಎಫ್.ಐ, ಸಿ.ಪಿ.ಐ, ಕಾಂಗ್ರೆಸ್, ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ಹಾಲುಮತ ಸಮಾಜ ಹಾಲಿನಂತಹಾ ಮನಸ್ಸು ಇರುವವರು. ಹುಳಿ ಹಿಂಡುವ ರಾಜಕಾರಣಿಗಳಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡಲ್ಲ. ಕುರುಬ ಸಮಾಜ ಹೆಚ್ಚಿರುವ ಊರುಗಳಲ್ಲಿ ಬಿಜೆಪಿ ಹೆಚ್ಚಿನ ಲೀಡ್ ಬರುತ್ತೆ. ಸಿಎಂ ಬಸವರಾಜ ಬೊಮ್ಮಾಯಿ ಅವರೇ ನಮ್ಮ ಸಿಎಂ ಆಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ