• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Geetha Shivarajkumar: 'ತೆನೆ' ಬಿಟ್ಟು 'ಕೈ' ಹಿಡಿತಾರೆ ಗೀತಾ ಶಿವರಾಜಕುಮಾರ್! ನಾಳೆ ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ

Geetha Shivarajkumar: 'ತೆನೆ' ಬಿಟ್ಟು 'ಕೈ' ಹಿಡಿತಾರೆ ಗೀತಾ ಶಿವರಾಜಕುಮಾರ್! ನಾಳೆ ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ

ಗೀತಾ ಶಿವರಾಜ್​​ಕುಮಾರ್ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಗೀತಾ ಶಿವರಾಜ್​​ಕುಮಾರ್ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಬೆಂಬಲ ನೀಡಲು ಗೀತಾ ಶಿವರಾಜ್​ಕುಮಾರ್ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ನಟ ಶಿವರಾಜ್​ಕುಮಾರ್ (Shivarajkumar) ಅವರ ಪತ್ನಿ ಗೀತಾ ಶಿವರಾಜ್​​ಕುಮಾರ್ (Geetha Shivarajkumar) ಅವರು ನಾಳೆ ಕಾಂಗ್ರೆಸ್​ಗೆ (Congress) ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ವರುಣಾದ ಕಾಪು ಸಿದ್ಧಲಿಂಗ ಸ್ವಾಮಿ ಅವರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಆಪರೇಷನ್​ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಬಿಎಸ್​ವೈ (BSY) ಎಚ್ಚೆತ್ತುಕೊಂಡಿದ್ದು, ಆಪ್ತರ ಜೊತೆ ಮಾತುಕತೆ ನಡೆಸಿದ್ದಾರೆ. ಇತ್ತ ಶಿವಮೊಗ್ಗದ ಸೊರಬ (Soraba) ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದ ಮಧು ಬಂಗಾರಪ್ಪ (Madhu Bangarappa) ಅವರನ್ನು ಗೆಲ್ಲಿಸಲು ಗೀತಾ ಶಿವಕುಮಾರ್, ಕಾಂಗ್ರೆಸ್​​ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಗೀತಾ ಶಿವಕುಮಾರ್​ ಕುಮಾರ್​ ಅವರ ಜೆಡಿಎಸ್ (JDS)​ ಪಕ್ಷದಿಂದ ಈ ಹಿಂದೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.


ಗೀತಾ ಶಿವರಾಜ್​​ಕುಮಾರ್ ಅವರು ಕಾಂಗ್ರೆಸ್​ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಸ್ಥಳೀಯವಾಗಿ ಸಂದೇಶ ರವಾನೆ ಆಗಲಿದೆ ಹಾಗೂ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಲಿದೆ ಎನ್ನಲಾಗಿದೆ. ನಾಳೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕ ಕಚೇರಿಯಲ್ಲಿ ಅಧಿಕೃತವಾಗಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: Puttur: ಪ್ರವೀಣ್ ನೆಟ್ಟಾರು ಕನಸಿನ ಮನೆ ಗೃಹ ಪ್ರವೇಶ; ಹಿಂದೂ ಕಾರ್ಯಕರ್ತನ ಪುತ್ಥಳಿ ಅನಾವರಣಗೊಳಿಸಿದ ಕಟೀಲ್


ಸೊರಬದಲ್ಲಿ ಮಧು ಬಂಗಾರಪ್ಪಗೆ ಶಕ್ತಿ ತುಂಬಲು ಕಾಂಗ್ರೆಸ್​ ಸೇರ್ಪಡೆ ಆಗಮನ


2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಜೆಡಿಎಸ್​ ಪಕ್ಷದಿಂದ ಗೀತಾ ಶಿವರಾಜ್​ಕುಮಾರ್ ಸ್ಪರ್ಧೆ ಮಾಡಿದ್ದರು. ಆ ಬಳಿಕ ಅವರು ಜೆಡಿಎಸ್ ಪಕ್ಷದಿಂದ ಹೊರಬಂದು ತಟಸ್ಥವಾಗಿ ಉಳಿದಿದ್ದರು. ಅಂದು ಕೂಡ ಮಧು ಬಂಗಾರಪ್ಪ ಅವರು ಜೆಡಿಎಸ್​ ಪಕ್ಷದಲ್ಲಿದ್ದರೂ ಸಹಜವಾಗಿಯೇ ಗೀತಾ ಅವರು ಜೆಡಿಎಸ್​ನಿಂದ ಸ್ಪರ್ಧೆ ಮಾಡಿದ್ದರು. ಆ ಬಳಿಕ ನಡೆದ ಬೆಳವಣಿಗೆಗಳಲ್ಲಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಹಿಂಬಾಲಿಸಿಕೊಂಡು ಗೀತಾ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




ಪ್ರಬಲ ಸಮುದಾಯ ಕಾಂಗ್ರೆಸ್​​ ಪಕ್ಷಕ್ಕೆ ಬೆಂಬಲ ಸಾಧ್ಯತೆ


ಇದಕ್ಕೆ ಪೂರಕ ಎಂಬಂತೆ ಕಳೆದ ಮೂರ್ನಾಲ್ಕು ತಿಂಗಳ ಹಿಂದಷ್ಟೇ ಗೀತಾ ಶಿವರಾಜ್​ಕುಮಾರ್ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಹೋಗಿ ಬಂದಿದ್ದರು. ಆದರೆ ಆ ವೇಳೆ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಅಪ್ಪು ಅವರ ನಿಧನದ ನಂತರ ಔಪಚಾರಿಕವಾಗಿ ಭೇಟಿಯಾಗಿದ್ದೇವೆ ಎಂದಷ್ಟೇ ತಿಳಿಸಿದ್ದರು. ಈ ವೇಳೆ ರಾಜಕೀಯ ಚರ್ಚೆ ಕೂಡ ಆಗಿತ್ತು ಎನ್ನಲಾಗಿದೆ.


2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದಲೂ ಗೀತಾ ಶಿವರಾಜ್​ಕುಮಾರ್​ ಸೇರ್ಪಡೆ ಕಾಂಗ್ರೆಸ್​​ಗೆ ಲಾಭ ಆಗಲಿದೆ. ಒಂದು ಪ್ರಬಲ ಸಮುದಾಯವೂ ಕಾಂಗ್ರೆಸ್​ಗೆ ಬೆಂಬಲ ನೀಡುವ ನಿರೀಕ್ಷೆ ಇದೆ, ಅಲ್ಲದೆ ಪರೋಕ್ಷವಾಗಿಯೂ ಶಿವರಾಜ್​​ಕುಮಾರ್ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಲು ನೆರವಾಗಬಹುದು ಎಂಬ ಮಾಹಿತಿ ಲಭ್ಯವಾಗಿದೆ.

First published: