• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • CM Siddaramaiah: ಬೆಂಗಳೂರಿಗೆ ಟಗರು-ಬಂಡೆ ಗ್ರ್ಯಾಂಡ್ ಎಂಟ್ರಿ! ಕೆಲವೇ ಕ್ಷಣಗಳಲ್ಲಿ ಸಿಎಲ್​​ಪಿ ಸಭೆ ಆರಂಭ

CM Siddaramaiah: ಬೆಂಗಳೂರಿಗೆ ಟಗರು-ಬಂಡೆ ಗ್ರ್ಯಾಂಡ್ ಎಂಟ್ರಿ! ಕೆಲವೇ ಕ್ಷಣಗಳಲ್ಲಿ ಸಿಎಲ್​​ಪಿ ಸಭೆ ಆರಂಭ

ಡಿಕೆ ಶಿವಕುಮಾರ್​/ ಸಿದ್ದರಾಮಯ್ಯ

ಡಿಕೆ ಶಿವಕುಮಾರ್​/ ಸಿದ್ದರಾಮಯ್ಯ

ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆಗೆ ಎಲ್ಲಾ ಸಿದ್ಧತೆ ಪೂರ್ಣಗೊಂಡಿದ್ದು, ಭಾರತ್ ಜೋಡೋ ಸಭಾಂಗಣದಲ್ಲಿ ಹಿರಿಯ ಶಾಸಕರು ಆಗಮಿಸಿದ್ದಾರೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections ) ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ (Congress)​ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ (Siddaramaiah) ಅವರು ಆಯ್ಕೆಯಾಗಿದ್ದಾರೆ. ಹೈಕಮಾಂಡ್ ಘೋಷಣೆ ಬೆನ್ನಲ್ಲೇ ಬೆಂಗಳೂರಿಗೆ (Bengaluru) ಆಗಮಿಸಿದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪಕ್ಷದ ಕಾರ್ಯಕರ್ತರು ಹೂಮಳೆ ಸುರಿಸಿಯಾಗಿ ಅದ್ಧೂರಿಯಾಗಿ ಸ್ವಾಗತ ಕೋರಿದರು. ವಿಮಾನ ನಿಲ್ದಾಣದಿಂದ (Airport) ನೇರ ಸರ್ಕಾರ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಹೂಮಳೆ ಸ್ವಾಗತ ಕೋರಿದರು.


ಇತ್ತ, ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆಗೆ ಎಲ್ಲಾ ಸಿದ್ಧತೆ ಪೂರ್ಣಗೊಂಡಿದ್ದು, ಭಾರತ್ ಜೋಡೋ ಸಭಾಂಗಣದಲ್ಲಿ ಹಿರಿಯ ಶಾಸಕರು ಆಗಮಿಸಿದ್ದಾರೆ. ಕೆಲ ಕ್ಷಣಗಳಲ್ಲೇ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಚಾಮರಾಜನಗರ ‌ಶಾಸಕ ಪುಟ್ಟರಂಗ ಶೆಟ್ಟಿ‌ ಆಗಮನ, ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಶಾಸಕ ಬಸವರಾಜು, ಎಸ್ ಎಸ್ ಮಲ್ಲಿಕಾರ್ಜುನ, ಯು ಬಿ ಬಣಕರ್, ಆರ್ ವಿ ದೇಶಾಪಂಡೆ, ಶಿವಾನಂದ ಪಾಟೀಲ್ ಶಾಸಕಾಂಗ ಸಭೆಗೆ ಆಗಮಿಸಿದ್ದಾರೆ.




ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಈಶ್ವರ್ ಖಂಡ್ರೆ, ಸುಮಾರು ಜನ ಹಿರಿಯ ಮುಖಂಡರು ಡಿಸಿಎಂ ರೇಸ್ ನಲ್ಲಿ ಇದ್ದಾರೆ. ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಗೆದ್ದಿರುವ ಸಂಖ್ಯೆಯ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ ಮಾಡಬೇಕು ಎಂದು ಒತ್ತಾಯ ಮಾಡಿದರು.


ಇದನ್ನೂ ಓದಿ: BJP Rebels: ಬಿಜೆಪಿ ಸೋಲಿನ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲಗೆ ಅಣ್ಣಾಮಲೈ ಕರೆ; ಬಂಡಾಯ ಅಭ್ಯರ್ಥಿ ಹೇಳಿದ್ದೇನು?


ನಾನು ಕೂಡ ಡಿಸಿಎಂ ಕೊಡಿ ಎಂದು ಕೇಳುತ್ತೇನೆ


ಡಿಸಿಎಂ ಹುದ್ದೆ ವಿಚಾರವಾಗಿ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಬಹಳಷ್ಟು ಆಕಾಂಕ್ಷಿಗಳು ಪಕ್ಷದಲ್ಲಿದ್ದಾರೆ. ಆದರೆ ಹೈಕಮಾಂಡ್ ನಿರ್ಧಾರವೇ ಅಂತಿಮ. ಒಂದೇ ಡಿಸಿಎಂ ಕೊಟ್ಟರೆ ನಾವು ಏನು ಕೇಳುವುದಿಲ್ಲ. ಹೆಚ್ಚಿಗೆ ಮಾಡಿದರೆ ನಾನು ಕೂಡ ಡಿಸಿಎಂ ಕೊಡಿ ಎಂದು ಕೇಳುತ್ತೇನೆ ಎಂದು ತಿಳಿಸಿದರು.



ಕೆಲಸ ಮಾಡುವವರಿಗೆ ಯಾವುದೇ ಖಾತೆ ಕೊಟ್ಟರೂ ತೊಂದರೆ ಇಲ್ಲ


ಶಾಸಕ ಲಕ್ಷ್ಮಣ್ ಸವದಿ ಮಾತನಾಡಿ, ನಾನು ಪಕ್ಷಕ್ಕೆ ಹೊಸಬ. ಸಚಿವ‌ ಸ್ಥಾನದ ಬಗ್ಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರನ್ನು ಇದುವರೆಗೂ ಭೇಟಿ ಮಾಡಿಲ್ಲ. ನನಗೆ ಸಚಿವ ಸ್ಥಾನ ಕೊಡುತ್ತಾರೋ, ಇಲ್ಲವೋ ಗೊತ್ತಿಲ್ಲ. ಅನುಭವ, ಹಿರಿತನ ನೋಡಿ ಸಚಿವ ಸ್ಥಾನ ಕೊಟ್ಟರೆ ಸ್ವೀಕಾರ ಮಾಡುತ್ತೇನೆ. ಕೆಲಸ ಮಾಡುವವರಿಗೆ ಯಾವುದೇ ಖಾತೆ ಕೊಟ್ಟರೂ ತೊಂದರೆ ಇಲ್ಲ. ಜಗದೀಶ್ ಶೆಟ್ಟರ್ ತುಂಬ ಅನುಭವಿ ರಾಜಕಾರಣಿ, ಅವರು ಈ ಬಾರಿ ಸೋತಿದ್ದಾರೆ. ಅವರನ್ನು ಪಕ್ಷ ಚೆನ್ನಾಗಿ ನೋಡಿಕೊಳ್ಳುತ್ತೆ ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.

top videos
    First published: