ಚಿತ್ರದುರ್ಗ(ಜೂ.24): ಇತ್ತೀಚೆಗೆ ಬಂದ ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶದಲ್ಲಿ (PUC Result) ಕೋಟೆನಾಡು ಚಿತ್ರದುರ್ಗ (Chitradurga) ಜಿಲ್ಲೆ ಕೊನೆಯ ಸ್ಥಾನ ಪಡೆದಿದ್ದು ಜಿಲ್ಲೆ ಜನಪ್ರತಿನಿಧಿಗಳಲ್ಲಿ ಕಳವಳ ಉಂಟಾಗಿದೆ. ಇದಕ್ಕೆ ಕಾರಣವೇನು ಅನ್ನೋದರ ಕುರಿತು ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ಕಾಲೇಜು ಪ್ರಾಂಶುಪಾಲರ ಆತ್ಮಾವಲೋಕನ ಸಭೆ ಮಾಡಿದ್ದಾರೆ. ಪ್ರಸಕ್ತ ವರ್ಷದ ದ್ವೀತಿಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ (Result) ಶೈಕ್ಷಣಿಕ ಸಾಧನೆ ಕುಸಿತದ ಬಗ್ಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಪಿ.ಯು. ಕಾಲೇಜು ಪ್ರಾಂಶುಪಾಲರ ಆತ್ಮಾವಲೋಕ ಸಭೆ ನಡೆಸಿ ಮುಂದಿನ ವರ್ಷದ ಪಿ.ಯು. ಫಲಿತಾಂಶ ಸುಧಾರಣೆ ಮಾರ್ಗೋಪಾಯಗಳ ಕುರಿತು ಚಿಂತನ ಮಂಥನ ಮಾಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಕೆ.ಎಸ್.ನವೀನ್ ಜಿಲ್ಲೆಯ ಪಿ.ಯು. ಫಲಿತಾಂಶ ಆಘಾತ ತಂದಿದೆ. ಮಕ್ಕಳ ಶೈಕ್ಷಣಿಕ ಸಾಧನೆ ಕಳಪೆಯಾಗಿರುವುದಕ್ಕೆ ಬೋಧಕರು ಮಾತ್ರವಲ್ಲ, ಪೋಷಕರು,ಅಧಿಕಾರಿಗಳು, ಜನಪ್ರತಿನಿಧಿಗಳು ಸಹ ಜವಬ್ದಾರಿ ಹೊರಬೇಕಿದೆ. ಇದರ ಜೊತೆಗೆ ಫಲಿತಾಂಶ ಸುಧಾರಣೆ ಕ್ರಮಗಳನ್ನು ಸಹ ಕೈಗೊಳ್ಳಬೇಕು.
ಆನ್ಲೈನ್ ಮೂಲಕ ಪೂರಕ ಬೋಧನೆಗೆ ಕ್ರಮ
ಪಿ.ಯು. ಹಂತದ ಮಕ್ಕಳಿಗೆ ಕಠಿಣ ಎನಿಸುವ ವಿಷಯಗಳ ಕುರಿತು ವಿಶೇಷವಾಗಿ ಆನ್ಲೈನ್ ಮೂಲಕ ಪೂರಕ ಬೋಧನೆಗೆ ಕ್ರಮ ವಹಿಸಲಾಗಿದೆ. ವಿಶ್ವದ ಶ್ರೇಷ್ಠ ಆನ್ಲೈನ್ ಬೋಧನಾ ಸಂಸ್ಥೆ ಆಂಥಾಲಜಿ ಸೇರಿದಂತೆ ಇತರೆ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪೋಷಕರು ಹಾಗೂ ವಿಧ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ ತುಂಬಬೇಕು. ಕಾಲೇಜುಗಳಲ್ಲಿ ಕೊಠಡಿ, ಪ್ರಯೋಗಾಲಯ, ಶೌಚಾಲಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಖನಿಜ ಪ್ರತಿಷ್ಠಾನ, ಹಾಗೂ ಸಾಂಸ್ಥಿಕ ಹೊಣೆಗಾರಿಕೆ ನಿಧಿಯಡಿ ಕಲ್ಪಿಸಲಾಗುವುದು. ಫಲಿತಾಂಶ ಸುಧಾರಣೆಯ ಮೇಲು ವಿಚಾರಣೆಗೆ ತಜ್ಞರ ತಂಡ ರಚಿಸಲಾಗುವುದು.
ಪ್ರತಿ 3 ತಿಂಗಳಿಗೊಮ್ಮೆ ಸಭೆ
ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದಿದ್ದಾರೆ. ಇನ್ನೂ ಸರ್ಕಾರಿ ಕಾಲೇಜುಗಳ ಫಲಿತಾಂಶ ಕಡಿಮೆಯಾದರೆ ಖಾಸಗಿ ಕಾಲೇಜುಗಳು ಇದರ ಲಾಭ ಪಡೆದುಕೊಳ್ಳುತ್ತವೆ ಎಂದರು.
ಸರ್ಕಾರಿ ಶಾಲಾ ಕಾಲೇಜುಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಲು ಆಸಕ್ತ ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಶಿಕ್ಷಣ ಸಚಿವರ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗುವುದು. ಜಿಲ್ಲೆಯಲ್ಲೂ ಈ ರೀತಿ ದತ್ತು ನೀಡಲು ಕ್ರಮ ಕೈಗೊಳ್ಳಲಾಗುವುದು.
400 ಎಕರೆ ಭೂಮಿ ಗುರುತು
ಇಸ್ರೋ, ಡಿ.ಆರ್.ಡಿ.ಓ ಹಾಗೂ ಬಾಬಾ ಅಣು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಔದ್ಯಮಿಕ ಮತ್ತು ತಾಂತ್ರಿಕ ವಸ್ತು ಸಂಗ್ರಾಹಲಯ ಮಾದರಿಯಲ್ಲಿ, ಚಿತ್ರದುರ್ಗ ಜಿಲ್ಲೆಯಲ್ಲಿ ವೈಜ್ಞಾನಿಕ ಸಂಗ್ರಹಾಲಯ ಹಾಗೂ ಪ್ರಯೋಗಾಲಯವನ್ನು ಸ್ಥಾಪನೆ ಮಾಡಲಾಗುವುದು.
ಇದನ್ನೂ ಓದಿ: ಮರ್ಮಾಂಗಕ್ಕೆ ಹೊಡೆದು ಪತಿಯನ್ನು ಕೊಂದ ಪತ್ನಿ! ಎದೆನೋವಿಂದ ಗಂಡ ಸತ್ತ ಎಂದು ಡ್ರಾಮಾ
ಇದಕ್ಕಾಗಿ ಜಿಲ್ಲಾಡಳಿತ 400 ಎಕರೆ ಭೂಮಿ ಗುರುತಿಸಿದೆ. ಇದರಿಂದ ಮಕ್ಕಳು ವಿಜ್ಞಾನದ ಪರಿಕಲ್ಪನೆಗಳನ್ನು ಪ್ರಯೋಗದ ಮೂಲಕ ತಿಳಿದುಕೊಳ್ಳಬಹುದು. ಮಕ್ಕಳಲ್ಲಿ ವಿಜ್ಞಾನ ವಿಷಯದ ಕುರಿತು ಆಸಕ್ತಿ ಹಾಗೂ ಕುತೂಹಲ ಮೂಡುವುದು ವಿದ್ಯಾರ್ಥಿಗಳಿಗೆ ಇದು ಸಹಕಾರಿಯಾಗಿಲಿದೆ ಎಂದು ಶಾಸಕ ಕೆ.ಎಸ್.ನವೀನ್ ಅಭಿಪ್ರಾಯ ಪಟ್ಟರು.
ನರೇಗಾದಡಿ ಪ್ರಾಥಮಿಕ, ಪ್ರೌಢಶಾಲೆಗಳ ಜೊತೆ ಗ್ರಾಮೀಣ ಭಾಗದಲ್ಲಿ ಪಿ.ಯು. ಕಾಲೇಜುಗಳ ಕೊಠಡಿ , ಆಟದ ಮೈದಾನ, ಕಾಂಪೌಂಡ್ ನಿರ್ಮಾಣಕ್ಕೆ ಅವಕಾಶವಿದೆ. ಸಂಬಂಧ ಪಟ್ಟ ಕಾಲೇಜುಗಳ ಪ್ರಾಂಶುಪಾಲರು ಅಗತ್ಯ ಕ್ರಿಯಾ ಯೋಜನೆಗಳನ್ನು ಸಲ್ಲಿಸಿದರೆ ಮಂಜೂರಾತಿ ನೀಡಲಾಗುವುದು ಎಂದು ಜಿ.ಪಂ.ಸಿಇಓ ಡಾ.ಕೆ.ನಂದಿನಿದೇವಿ ಸಭೆಯಲ್ಲಿ ಹೇಳಿದರು.
ಇದನ್ನೂ ಓದಿ: ಮಾರ್ಕೆಟ್ಗೆ ಬಂದು ಮನೆಯ ದಾರಿ ಮರೆತೋಯ್ತು! ಪ್ರಜ್ಞಾಹೀನಳಾಗಿ ಬಿದ್ದ ವೃದ್ಧೆ
ಪಿ.ಯು.ಬೋಧಕರಿಗೆ ವಿಶೇಷ ತರಬೇತಿ ನೀಡಲಾಗುವುದು. ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಬೋಧನೆಗೆ ಅನುಕೂಲ ಆಗುವಂತೆ ಟ್ಯೂಟರ್ಗಳನ್ನು ನೇಮಿಸಲಾಗುವುದು. ಪಿ.ಯು. ಕಾಲೇಜುಗಳಲ್ಲಿ ಪ್ರಯೋಗಾಲಯ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ಅವಶ್ಯಕತೆಗಳ ಪೂರೈಕಗೆ ಸಹ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದರು. ಬಳಿಕ ಪಿ.ಯು. ಫಲಿತಾಂಶ ಸುಧಾರಣೆಗೆ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳು ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ