Karnataka Weather Today: ಮಲೆನಾಡು, ಕರಾವಳಿ ಸೇರಿ ರಾಜ್ಯಾದ್ಯಂತ ಇಂದು ಮಳೆಯ ಆರ್ಭಟ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Rain Today: ಭಾರೀ ಮಳೆಯಿಂದ ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಉತ್ತರ ಒಳನಾಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಲಿದೆ.

  • Share this:

Karnataka Monsoon 2021: ಬೆಂಗಳೂರು (ಜುಲೈ 1): ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ. ನಿನ್ನೆ ಕೆಲವು ಜಿಲ್ಲೆಗಳಲ್ಲಿ ಕೊಂಚ ಬಿಸಿಲು ಮೂಡಿದ್ದು, ಹಲವೆಡೆ ತುಂತುರು ಮಳೆಯಾಗಿದೆ. ಆದರೆ, ಇಂದು ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಇಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.


ಕರ್ನಾಟಕ ಮಾತ್ರವಲ್ಲದೆ, ನೆರೆಯ ರಾಜ್ಯಗಳಲ್ಲೂ ಮಳೆಯಾಗುತ್ತಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಇಂದು ಭಾರೀ ಮಳೆಯಾಗಲಿದೆ.


ಇದನ್ನೂ ಓದಿ: Cryptocurrency Price: ಎಲಾನ್‌ ಮಸ್ಕ್‌ ಮಾಡಿದ ಒಂದೇ ಒಂದು ಟ್ವೀಟ್‌ನಿಂದ ಕ್ರಿಪ್ಟೋಕರೆನ್ಸಿಯ ಮೌಲ್ಯದಲ್ಲಿ ಭಾರೀ ಏರಿಕೆ


ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮೂರ್ನಾಲ್ಕು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದು ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.


ಮಲೆನಾಡಿನಲ್ಲೂ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಸುರಿಯುತ್ತಿದೆ.


ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತೆ ಮಳೆಯಾಗಲಿದೆ. ಆದರೆ, ಕರಾವಳಿಯಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದೆ.


ಇದನ್ನೂ ಓದಿ: Viral News: ಕೋವಿಡ್ ಲಸಿಕೆಗೆ ಹೆದರಿ ಹೆಂಡತಿಯ ಆಧಾರ್ ಕಾರ್ಡ್ ಹಿಡಿದು ಮರವೇರಿದ ಭೂಪ!


ಕರಾವಳಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಇಂದು ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.


ಇನ್ನೆರಡು ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಕೆರೆಗಳಂತಾಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ. ದೆಹಲಿಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಬಿಸಿಲಿನಿಂದ ಕಾದ ನೆಲಕ್ಕೆ ತಂಪೆರೆಯಲಿದೆ.

Published by:Sushma Chakre
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು